![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 4, 2023, 2:45 PM IST
ಟರೌಬಾ: ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಮುಗ್ಗರಿಸಿದೆ. ವೆಸ್ಟ್ ಇಂಡೀಸ್ ನೀಡಿದ 150 ರನ್ ಗುರಿ ಬೆನ್ನೆತ್ತಲಾಗದೆ ಹಾರ್ದಿಕ್ ಪಾಂಡ್ಯ ಪಡೆ ನಾಲ್ಕು ರನ್ ಅಂತರದ ಸೋಲನುಭವಿಸಿದೆ.
ಈ ಪಂದ್ಯದ ವೇಳೆ ತಮಾಷೆಯ ಸಂಗತಿಯೊಂದು ನಡೆದಿದೆ. ಬ್ಯಾಟಿಂಗ್ ಮಾಡಲು ಇಳಿದ ಯುಜುವೇಂದ್ರ ಚಾಹಲ್ ಅವರನ್ನು ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಮೈದಾನದಿಂದ ಹಿಂದೆ ಕರೆಸಿದ ಘಟನೆ ನಡೆದಿದೆ.
ಪಂದ್ಯದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ ಕುಲದೀಪ್ ಯಾದವ್ ಔಟಾದರು. ಈ ವೇಳೆ ಹತ್ತನೇ ಕ್ರಮಾಂಕದ ಆಟಗಾರನಾಗಿ ಯುಜಿ ಚಾಹಲ್ ಮೈದಾನಕ್ಕೆ ಆಗಮಿಸಿದರು. ಅವರು ಕ್ರೀಸ್ ವರೆಗೂ ತಲುಪಿದ್ದರು. ಆದರೆ ಈ ವೇಳೆ ತಂಡದ ಮ್ಯಾನೇಜ್ ಮೆಂಟ್ ಅವರನ್ನು ಹಿಂದೆ ಕರೆಸಿತು. ತಂಡವು ಪದಾರ್ಪಣೆ ಮಾಡಿದ ಆಟಗಾರ ಮುಖೇಶ್ ಕುಮಾರ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲು ಬಯಸಿತ್ತು.
ಹೀಗಾಗಿ ಪಿಚ್ ತಲುಪಿದ್ದ ಯುಜಿ ಮತ್ತೆ ಡಗೌಟ್ ವರೆಗೆ ಓಡಿದರು. ಬೌಂಡರಿ ಲೈನ್ ತಲುಪಿದ್ದಂತೆ ಅಂಪೈರ್ ಅವರೇ ಆಡಬೇಕು ಎಂದು ಸೂಚಿಸಿದ ಕಾರಣ ಯುಜಿ ಮತ್ತೆ ಬ್ಯಾಟಿಂಗ್ ಮಾಡಲು ಆಗಮಿಸಿದರು. ಆಟಗಾರ ಒಮ್ಮೆ ಪಿಚ್ ಗೆ ಬಂದ ನಂತರ ಬದಲಾವಣೆ ಮಾಡುವಂತಿಲ್ಲ. ಹೀಗಾಗಿ ಯುಜಿ ಬ್ಯಾಟಿಂಗ್ ಮುಂದುವರಿಸಿದರು.
Yuzvendra Chahal walked out at No.10, but the Indian team wanted Mukesh Kumar. Chahal walked off and entered again as he took the field already#Yuzvendrachahal😂😂#INDvWI pic.twitter.com/8rWxh30ahh
— Md Nayab 786 🇮🇳 (@mdNayabsk45) August 3, 2023
ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ವಿಂಡೀಸ್ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಗುರಿ ಬೆನ್ನತ್ತಿದ ಟೀಂ ಇಂಡಿಯಾ 9 ವಿಕೆಟ್ ಕಳೆದುಕೊಂಡು 145 ರನ್ ಮಾತ್ರ ಗಳಿಸಲು ಶಕ್ತವಾಯಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.