Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ


Team Udayavani, Sep 27, 2024, 12:23 AM IST

1-SL

ಗಾಲೆ: ಪ್ರವಾಸಿ ನ್ಯೂಜಿಲ್ಯಾಂಡ್‌ ತಂಡದೆದುರಿನ ದ್ವಿತೀಯ ಟೆಸ್ಟ್‌ನಲ್ಲಿ ದಿನೇಶ್‌ ಚಂಡಿಮಾಲ್‌ ಅವರ ಆಕರ್ಷಕ ಶತಕದಿಂದಾಗಿ ಶ್ರೀಲಂಕಾ ತಂಡವು ಉತ್ತಮ ಸ್ಥಿತಿಯಲ್ಲಿದೆ. ದಿನದಾಟದ ಅಂತ್ಯಕ್ಕೆ ಆತಿಥೇಯ ತಂಡವು ಮೂರು ವಿಕೆಟ್‌ ಕಳೆದುಕೊಂಡಿದ್ದು 306 ರನ್‌ ಗಳಿಸಿದೆ.

ಇನ್ನಿಂಗ್ಸ್‌ ಆರಂಭಿಸಿದ ಶ್ರೀಲಂಕಾ ತಂಡವು ಪಥುಮ್‌ ನಿಸ್ಸಂಕ ಅವರ ವಿಕೆಟನ್ನು ಬೇಗನೇ ಕಳೆದುಕೊಂಡಿತು. ಆಬಳಿಕ ದಿಮುತ್‌ ಕರುಣರತ್ನ ಅವರನ್ನು ಸೇರಿಕೊಂಡ ದಿನೇಶ್‌ ಚಂಡಿಮಾಲ್‌ ತಾಳ್ಮೆಯಿಂದ ಆಡಿ ತಂಡವನ್ನು ಆಧರಿಸಿದರು. ಅವರಿಬ್ಬರು ದ್ವಿತೀಯ ವಿಕೆಟಿಗೆ 122 ರನ್‌ ಪೇರಿಸಿದ ಬಳಿಕ ಬೇರ್ಪಟ್ಟರು. ಈ ಹಂತದಲ್ಲಿ 46 ರನ್‌ ಗಳಿಸಿದ್ದ ಕರುಣರತ್ನ ಔಟಾದರು.

ದಿನೇಶ್‌ ಮತ್ತೆ ಏಂಜೆಲೊ ಮ್ಯಾಥ್ಯೂಸ್‌ ಜತೆಗೂಡಿ ಮೂರನೇ ವಿಕೆಟಿಗೆ 98 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡದ ಉತ್ತಮ ಮೊತ್ತಕ್ಕೆ ಕಾರಣರಾದರು. ಈ ನಡುವೆ ಶತಕ ಪೂರೈಸಿದ ದಿನೇಶ್‌ ಸ್ವಲ್ಪಹೊತ್ತಿನಲ್ಲಿ ಔಟಾದರು. 208 ಎಸೆತ ಎದುರಿಸಿದ ಅವರು 15 ಬೌಂಡರಿ ನೆರವಿನಿಂದ 116 ರನ್‌ ಗಳಿಸಿ ಔಟಾದರು.

ಏಂಜೆಲೊ ಮ್ಯಾಥ್ಯೂಸ್‌ ಮತ್ತು ಕಮಿಂಡು ಮೆಂಡಿಸ್‌ ಅವರು ಎಚ್ಚರಿಕೆಯ ಆಟವಾಡಿ ಇನ್ನಷ್ಟು ಕುಸಿತ ಆಗದಂತೆ ನೋಡಿಕೊಂಡರು. ಮುರಿಯದ ನಾಲ್ಕನೇ ವಿಕೆಟಿಗೆ ಅವರಿಬ್ಬರು ಈಗಾಗಲೇ 85 ರನ್‌ ಪೇರಿಸಿದ್ದಾರೆ. ಮ್ಯಾಥ್ಯೂಸ್‌ 78 ಮತ್ತು ಮೆಂಡಿಸ್‌ 51 ರನ್ನುಗಳಿಂದ ಆಡುತ್ತಿದ್ದಾರೆ.

ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ ಪ್ರಥಮ ಇನ್ನಿಂಗ್ಸ್‌: ಮೂರು ವಿಕೆಟಿಗೆ 306 (ದಿನೇಶ್‌ ಚಂಡಿಮಾಲ್‌ 116, ದಿಮುತ್‌ ಕರುಣರತ್ನ 46, ಏಂಜೆಲೊ ಮ್ಯಾಥ್ಯೂಸ್‌ 78 ಬ್ಯಾಟಿಂಗ್‌, ಕಮಿಂಡು ಮೆಂಡಿಸ್‌ 51 ಬ್ಯಾಟಿಂಗ್‌).

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-kss

Macau Badminton: ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ

ಶಕೀಬ್‌ ಅಲ್‌ ಹಸನ್‌

INDvsBAN; ಕಾನ್ಪುರ ಪಂದ್ಯಕ್ಕೂ ಮುನ್ನವೇ ನಿವೃತ್ತಿ ಘೋಷಿಸಿದ ಶಕೀಬ್‌ ಅಲ್‌ ಹಸನ್‌

Kanpur; Unnao soil used for Green Park pitch: Why?

Kanpur; ಗ್ರೀನ್‌ ಪಾರ್ಕ್‌ ಪಿಚ್‌ ಗೆ ಬಳಸುವುದು ಉನ್ನಾವೊ ಕೊಳದ ಮಣ್ಣು: ಕಾರಣವೇನು?

IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ?

IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ? ಇಲ್ಲಿದೆ ಹರಾಜು ವಿವರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.