ಆ. 18ರಿಂದ ಐರ್ಲೆಂಡ್‌ ವಿರುದ್ಧದ T-20 ಸರಣಿ ಆರಂಭ: ನೆಟ್‌ನಲ್ಲಿ ಬುಮ್ರಾ ಬೌಲಿಂಗ್‌ ಅಭ್ಯಾಸ


Team Udayavani, Aug 16, 2023, 11:08 PM IST

bumrah

ಡಬ್ಲಿನ್‌: ಸುಮಾರು 11 ತಿಂಗಳ ಬಳಿಕ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರು ಬುಧವಾರ ನೆಟ್‌ನಲ್ಲಿ ಬೌಲಿಂಗ್‌ ಅಭ್ಯಾಸದಲ್ಲಿ ಪಾಲ್ಗೊಂಡರು. ತೀವ್ರತೆ ಮತ್ತು ಕೌಶಲದಿಂದ ಬೌಲಿಂಗ್‌ ಮಾಡಿ ಗಮನ ಸೆಳೆದರು.

ಐರ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಬುಮ್ರಾ ಅವರು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಧವಾರ ಡಬ್ಲಿನ್‌ಗೆ ಬಂದ ಬಳಿಕ ತಂಡದ ಸದಸ್ಯರೆಲ್ಲರೂ ಅಭ್ಯಾಸಕ್ಕೆ ಇಳಿದರು.

29ರ ಹರೆಯದ ಬುಮ್ರಾ 2022ರ ಸೆಪ್ಟಂಬರ್‌ನಲ್ಲಿ ಭಾರತ ಪರ ಕೊನೆಯ ದಾಗಿ ಪಂದ್ಯವನ್ನಾಡಿದ್ದರು. ಆಬಳಿಕ ಬೆನ್ನುನೋವಿ ನಿಂದಾಗಿ ತಂಡದಿಂದ ಹೊರಗುಳಿದಿದ್ದರು. ಬೆನ್ನುನೋವಿ ಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇದೀಗ ಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ತನ್ನ ಫಿಟ್‌ನೆಸ್‌ ಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಈ ಕೂಟ ದಲ್ಲಿ ಆಡುತ್ತಿದ್ದಾರಲ್ಲದೇ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಮ್ರಾ ಅವರಂತೆ ಗಾಯದಿಂದ ಚೇತರಿಸಿ ಕೊಂಡಿರುವ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಈ ಕೂಟದಲ್ಲಿ ಆಡುತ್ತಿದ್ದಾರೆ.

ಭಾರತ ಮತ್ತು ಐರ್ಲೆಂಡ್‌ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಡಬ್ಲಿನ್‌ನಲ್ಲಿ ನಡೆಯಲಿದೆ. ಈ ಪಂದ್ಯಗಳು ಅನುಕ್ರಮವಾಗಿ ಆ. 18, 20 ಮತ್ತು 23ರಂದು ನಡೆಯಲಿದೆ.

ಜಿತೇಶ್‌ ಶರ್ಮ ಆಯ್ಕೆ ?
ಐರ್ಲೆಂಡ್‌ ವಿರುದ್ಧದ ಸರಣಿಗೆ ತಂಡದಲ್ಲಿ ಜಿತೇಶ್‌ ಶರ್ಮ ಇರುವ ಕಾರಣ ಸಂಜು ಸ್ಯಾಮ್ಸನ್‌ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆ ಕಷ್ಟವೆಂದು ಹೇಳಲಾಗಿದೆ. ಈ ಸರಣಿಯಲ್ಲಿ ಅವರ ನಿರ್ವಹಣೆಯ ಆಧಾರದಲ್ಲಿ ತಂಡದಲ್ಲಿ ಉಳಿಸಿಕೊಳ್ಳುವ ಬಗ್ಗೆ ಆಯ್ಕೆಗಾರರು ನಿರ್ಧರಿಸುವ ಸಾಧ್ಯತೆಯಿದೆ.

ವೆಸ್ಟ್‌ಇಂಡೀಸ್‌ ವಿರುದ್ಧದ ಮೂರು ಪಂದ್ಯಗಳಲ್ಲಿ ಕೇವಲ 12, 7 ಮತ್ತು13 ರನ್‌ ಗಳಿಸಿರುವ ಸ್ಯಾಮ್ಸನ್‌ ಅವರು ಸಮಸ್ಯೆಯನ್ನು ತಂದೊಡ್ಡಿದ್ದಾರೆ. ಅವರ ಈ ಕಳಪೆ ನಿರ್ವಹಣೆಯಿಂದ ಜಿತೇಶ್‌ ವಿಕೆಟ್‌ಕೀಪಿಂಗ್‌ ಕರ್ತವ್ಯವನ್ನು ಪಡೆದರೂ ಯಾವುದೇ ಆಶ್ಚರ್ಯವಿಲ್ಲ. ಬಿರುಸಿನ ಬ್ಯಾಟಿಂಗ್‌ ನಡೆಸುವ ಜಿತೇಶ್‌ ಐರ್ಲೆಂಡ್‌ ವಿರುದ್ಧ ಆಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಭ್‌ಸಿಮ್ರಾನ್‌ ಸಿಂಗ್‌ ಅವರಿಗಿಂತ 29ರ ಹರೆಯದ ಜಿತೇಶ್‌ ಮುಂಬರುವ ಏಷ್ಯನ್‌ ಗೇಮ್ಸ್‌ಗೆ ಭಾರತದ ಮೊದಲ ಆಯ್ಕೆಯ ವಿಕೆಟ್‌ಕೀಪರ್‌ ಆಗಿದ್ದಾರೆ.
ರುತುರಾಜ್‌ ಗಾಯಕ್ವಾಡ್‌ ಮತ್ತು ಯಶಸ್ವಿ ಜೈಸ್ವಾಲ್‌ ಅವರು ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆಯಿದೆ. ವೆಸ್ಟ್‌ಇಂಡೀಸ್‌ ವಿರುದ್ಧ ಪದಾರ್ಪಣೆಗೈದ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡಿರುವ ತಿಲಕ್‌ ವರ್ಮ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಸೂರ್ಯಕುಮಾರ್‌ ಯಾದವ್‌ ಅವರ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆಂದು ಖಚತವಾಗಿಲ್ಲ. ಸಾಮ್ಯನ್‌ ಆಡುವ ಸಾಧ್ಯತೆಯಿದೆ. ಆದರೆ ಶಿವಂ ದುಬೆ ಕೂಡ ಸ್ಪರ್ಧೆಯಲ್ಲಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.