ಆ. 18ರಿಂದ ಐರ್ಲೆಂಡ್‌ ವಿರುದ್ಧದ T-20 ಸರಣಿ ಆರಂಭ: ನೆಟ್‌ನಲ್ಲಿ ಬುಮ್ರಾ ಬೌಲಿಂಗ್‌ ಅಭ್ಯಾಸ


Team Udayavani, Aug 16, 2023, 11:08 PM IST

bumrah

ಡಬ್ಲಿನ್‌: ಸುಮಾರು 11 ತಿಂಗಳ ಬಳಿಕ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರು ಬುಧವಾರ ನೆಟ್‌ನಲ್ಲಿ ಬೌಲಿಂಗ್‌ ಅಭ್ಯಾಸದಲ್ಲಿ ಪಾಲ್ಗೊಂಡರು. ತೀವ್ರತೆ ಮತ್ತು ಕೌಶಲದಿಂದ ಬೌಲಿಂಗ್‌ ಮಾಡಿ ಗಮನ ಸೆಳೆದರು.

ಐರ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಬುಮ್ರಾ ಅವರು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಧವಾರ ಡಬ್ಲಿನ್‌ಗೆ ಬಂದ ಬಳಿಕ ತಂಡದ ಸದಸ್ಯರೆಲ್ಲರೂ ಅಭ್ಯಾಸಕ್ಕೆ ಇಳಿದರು.

29ರ ಹರೆಯದ ಬುಮ್ರಾ 2022ರ ಸೆಪ್ಟಂಬರ್‌ನಲ್ಲಿ ಭಾರತ ಪರ ಕೊನೆಯ ದಾಗಿ ಪಂದ್ಯವನ್ನಾಡಿದ್ದರು. ಆಬಳಿಕ ಬೆನ್ನುನೋವಿ ನಿಂದಾಗಿ ತಂಡದಿಂದ ಹೊರಗುಳಿದಿದ್ದರು. ಬೆನ್ನುನೋವಿ ಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇದೀಗ ಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ತನ್ನ ಫಿಟ್‌ನೆಸ್‌ ಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಈ ಕೂಟ ದಲ್ಲಿ ಆಡುತ್ತಿದ್ದಾರಲ್ಲದೇ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಮ್ರಾ ಅವರಂತೆ ಗಾಯದಿಂದ ಚೇತರಿಸಿ ಕೊಂಡಿರುವ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಈ ಕೂಟದಲ್ಲಿ ಆಡುತ್ತಿದ್ದಾರೆ.

ಭಾರತ ಮತ್ತು ಐರ್ಲೆಂಡ್‌ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಡಬ್ಲಿನ್‌ನಲ್ಲಿ ನಡೆಯಲಿದೆ. ಈ ಪಂದ್ಯಗಳು ಅನುಕ್ರಮವಾಗಿ ಆ. 18, 20 ಮತ್ತು 23ರಂದು ನಡೆಯಲಿದೆ.

ಜಿತೇಶ್‌ ಶರ್ಮ ಆಯ್ಕೆ ?
ಐರ್ಲೆಂಡ್‌ ವಿರುದ್ಧದ ಸರಣಿಗೆ ತಂಡದಲ್ಲಿ ಜಿತೇಶ್‌ ಶರ್ಮ ಇರುವ ಕಾರಣ ಸಂಜು ಸ್ಯಾಮ್ಸನ್‌ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆ ಕಷ್ಟವೆಂದು ಹೇಳಲಾಗಿದೆ. ಈ ಸರಣಿಯಲ್ಲಿ ಅವರ ನಿರ್ವಹಣೆಯ ಆಧಾರದಲ್ಲಿ ತಂಡದಲ್ಲಿ ಉಳಿಸಿಕೊಳ್ಳುವ ಬಗ್ಗೆ ಆಯ್ಕೆಗಾರರು ನಿರ್ಧರಿಸುವ ಸಾಧ್ಯತೆಯಿದೆ.

ವೆಸ್ಟ್‌ಇಂಡೀಸ್‌ ವಿರುದ್ಧದ ಮೂರು ಪಂದ್ಯಗಳಲ್ಲಿ ಕೇವಲ 12, 7 ಮತ್ತು13 ರನ್‌ ಗಳಿಸಿರುವ ಸ್ಯಾಮ್ಸನ್‌ ಅವರು ಸಮಸ್ಯೆಯನ್ನು ತಂದೊಡ್ಡಿದ್ದಾರೆ. ಅವರ ಈ ಕಳಪೆ ನಿರ್ವಹಣೆಯಿಂದ ಜಿತೇಶ್‌ ವಿಕೆಟ್‌ಕೀಪಿಂಗ್‌ ಕರ್ತವ್ಯವನ್ನು ಪಡೆದರೂ ಯಾವುದೇ ಆಶ್ಚರ್ಯವಿಲ್ಲ. ಬಿರುಸಿನ ಬ್ಯಾಟಿಂಗ್‌ ನಡೆಸುವ ಜಿತೇಶ್‌ ಐರ್ಲೆಂಡ್‌ ವಿರುದ್ಧ ಆಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಭ್‌ಸಿಮ್ರಾನ್‌ ಸಿಂಗ್‌ ಅವರಿಗಿಂತ 29ರ ಹರೆಯದ ಜಿತೇಶ್‌ ಮುಂಬರುವ ಏಷ್ಯನ್‌ ಗೇಮ್ಸ್‌ಗೆ ಭಾರತದ ಮೊದಲ ಆಯ್ಕೆಯ ವಿಕೆಟ್‌ಕೀಪರ್‌ ಆಗಿದ್ದಾರೆ.
ರುತುರಾಜ್‌ ಗಾಯಕ್ವಾಡ್‌ ಮತ್ತು ಯಶಸ್ವಿ ಜೈಸ್ವಾಲ್‌ ಅವರು ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆಯಿದೆ. ವೆಸ್ಟ್‌ಇಂಡೀಸ್‌ ವಿರುದ್ಧ ಪದಾರ್ಪಣೆಗೈದ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡಿರುವ ತಿಲಕ್‌ ವರ್ಮ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಸೂರ್ಯಕುಮಾರ್‌ ಯಾದವ್‌ ಅವರ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆಂದು ಖಚತವಾಗಿಲ್ಲ. ಸಾಮ್ಯನ್‌ ಆಡುವ ಸಾಧ್ಯತೆಯಿದೆ. ಆದರೆ ಶಿವಂ ದುಬೆ ಕೂಡ ಸ್ಪರ್ಧೆಯಲ್ಲಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.