![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 1, 2017, 10:59 AM IST
ಹೊಸದಿಲ್ಲಿ: ಭಾರತದ ಗೆಲುವಿಗೆ ಅತಿಯಾಗಿ ತಿರುವು ಪಡೆಯುವ ಪಿಚ್ ತಯಾರಿಸುವ ಅಗತ್ಯವೇನಿಲ್ಲ ಎಂದು ಆಸ್ಟ್ರೇಲಿಯ ತಂಡದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್ಕ್ರಿಸ್ಟ್ ತಿಳಿಸಿದ್ದಾರೆ.
“ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಬಲಿಷ್ಠ ವಾಗಿದೆ. ಯಾವುದೇ ಹಂತದಲ್ಲಿ ತಿರುಗೇಟು ನೀಡುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಆಸ್ಟ್ರೇಲಿಯ ಆಟ ಗಾರರು ಮೈಮರೆಯುವಂತಿಲ್ಲ. ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್ಮನ್. ಒಂದೆರಡು ಪಂದ್ಯಗಳಲ್ಲಿ ವೈಫಲ್ಯ ಎದುರಿಸುವುದು ಸಹಜ’ ಎಂದಿದ್ದಾರೆ ಗಿಲ್ಕ್ರಿಸ್ಟ್.
ಎರಡನೇ ಟೆಸ್ಟ್ ಬೆಂಗಳೂರಿನಲ್ಲಿ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗಿಲ್ಕ್ರಿಸ್ಟ್, “ನಮಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಗ್ಗೆ ಗೊತ್ತು. ಇದೊಂದು ಸುಂದರ ಪಿಚ್ ಆಗಿದ್ದು, ಬ್ಯಾಟ್ಸ್ಮನ್ ಮತ್ತು ಬೌಲರ್ ಇಬ್ಬರಿಗೂ ನೆರವು ನೀಡಲಿದೆ…’ ಎಂದಿದ್ದಾರೆ.
ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ ಹೀನಾಯವಾಗಿ ಸೋಲುಂಡಿತ್ತು. ಇದಕ್ಕೆ “ಅತಿಯಾದ ಸ್ಪಿನ್ ಪಿಚ್’ ಮಾಡಿದ್ದೇ ಕಾರಣ ಎನ್ನಲಾಗಿತ್ತು. ಓ’ಕೀಫ್ 12 ವಿಕೆಟ್ ಪಡೆದು ಭಾರತದ ಸೋಲಿಗೆ ಪ್ರಮುಖ ಕಾರಣರಾಗಿದ್ದರು. ಹೀಗಾಗಿ ಸ್ಪಿನ್ ಪಿಚ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.