ಆರ್ಸಿಬಿ-ಮುಂಬೈ ಪಂದ್ಯದಲ್ಲಿ ಗಂಭೀರ ತಾಂತ್ರಿಕ ಪ್ರಮಾದ
Team Udayavani, Apr 20, 2018, 7:05 AM IST
ಮುಂಬಯಿ: ಮಂಗಳವಾರ ಮುಂಬೈ ಮತ್ತು ಆರ್ಸಿಬಿ ನಡುವೆ ನಡೆದ ಪಂದ್ಯದಲ್ಲಿ ಗಂಭೀರ ತಾಂತ್ರಿಕ ಪ್ರಮಾದವೊಂದು ಘಟಿಸಿದೆ. ವೇಗಿ ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಉಮೇಶ್ ಯಾದವ್ ಔಟಾದಾಗ ತೃತೀಯ ಅಂಪಾಯರ್ ವೀಕ್ಷಿಸಿದ ಟೀವಿ ದೃಶ್ಯಾವಳಿಯೇ ಅದಲು ಬದಲಾಗಿತ್ತು! ಇದನ್ನು ಟ್ವೀಟಿಗರು ತತ್ಕ್ಷಣ ಪತ್ತೆಹಚ್ಚಿದರು ಎನ್ನುವುದು ಸಮಾಧಾನದ ಸಂಗತಿ.
ಇತ್ತೀಚೆಗೆ ಪ್ರತಿಬಾರಿ ಬ್ಯಾಟ್ಸ್ಮನ್ ಔಟಾದಾಗ ಬೌಲರ್ ಎಸೆತ ಸರಿಯಾಗಿದೆಯೇ, ನೋಬಾಲ್ ಆಗಿದೆಯೇ ಎಂದು ಪರಿಶೀಲಿಸಲು ತೃತೀಯ ಅಂಪಾಯರ್ಗೆ ಮೈದಾನದ ಅಂಪಾಯರ್ ಸನ್ನೆ ಮಾಡುತ್ತಾರೆ. ಆರ್ಸಿಬಿ ಇನಿಂಗ್ಸ್ನ 18ನೇ ಓವರ್ನಲ್ಲಿ ಉಮೇಶ್ ಯಾದವ್ ಔಟಾದಾಗ ಬೌಲರ್ ಬುಮ್ರಾ ಪಾದಚಲನೆ ಸರಿಯಾಗಿದೆಯೇ ಎಂದು ತಿಳಿಯಲು ಅಂಪಾಯರ್ ಅದನ್ನು ತೃತೀಯ ಅಂಪಾಯರ್ಗೆ ಶಿಫಾರಸು ಮಾಡಿದ್ದರು. ಆದರೆ ತೃತೀಯ ಅಂಪಾಯರ್ಗೆ ಸಿಕ್ಕ ದೃಶ್ಯಾವಳಿಯೇ ಬೇರೆ. ಇದೀಗ ಐಪಿಎಲ್ ಸಂಘಟಕರ ಗಮನಕ್ಕೆ ಬಂದಿದ್ದು ಚರ್ಚೆಗೆ ಕಾರಣವಾಗಿದೆ.
ಅಲ್ಲಿರಬೇಕಿದ್ದ ಯಾದವ್ ಇಲ್ಲಿ!
ಮುಂಬೈ ನೀಡಿದ 214 ರನ್ ಗುರಿ ಬೆನ್ನತ್ತುವಾಗ ಆರ್ಸಿಬಿ ಕುಸಿತ ಅನುಭವಿಸಿತ್ತು. ಅದಕ್ಕೆ 13 ಎಸೆತದಲ್ಲಿ 77 ರನ್ ಬೇಕಿತ್ತು. ಆಗ ವೇಗಿ ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಉಮೇಶ್ ಯಾದವ್ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿದರು. ಈ ವೇಳೆ ಬುಮ್ರಾ ಬೌಲ್ ಮಾಡುವಾಗ ಪಾದ ಗೆರೆ ದಾಟಿದೆಯೇ ಎಂದು ಅಂಪಾಯರ್ ಪರಿಶೀಲಿಸಲು ಬಯಸಿದರು. ಅಲ್ಲಿ ಸಂಭವಿಸಿದ್ದು ಮಾತ್ರ ವಿಚಿತ್ರ. ದೃಶ್ಯಾವಳಿಯಲ್ಲಿ ಬುಮ್ರಾ ಬೌಲಿಂಗ್ ಮಾಡುವ ತುದಿಯಲ್ಲಿ ಬ್ಯಾಟ್ಸ್ಮನ್ ಉಮೇಶ್ ಯಾದವ್ ಕಾಣಿಸಿದ್ದಾರೆ. ವಾಸ್ತವವಾಗಿ ಉಮೇಶ್ ಇರಬೇಕಾಗಿದ್ದು ಬ್ಯಾಟಿಂಗ್ ತುದಿಯಲ್ಲಿ. ಅವರು ಬೌಲಿಂಗ್ ತುದಿಯಲ್ಲಿ ಕಂಡಿದ್ದು ಹೇಗೆ ಎನ್ನುವುದು ಎಲ್ಲರ ಪ್ರಶ್ನೆಯಾಗಿತ್ತು.
ಈ ತಪ್ಪಿಗೆ ಕಾರಣವೇನು?
ಇಲ್ಲಿ ಈ ದೃಶ್ಯಾವಳಿಯನ್ನು ತೃತೀಯ ಅಂಪಾಯರ್ಗೆ ಪೂರೈಸಿದ ವ್ಯಕ್ತಿಯದ್ದೇ ತಪ್ಪು ಎಂದು ತಿಳಿದುಬಂದಿದೆ. ಈ ವೀಡಿಯೋ ಪೂರೈಸುವ ಕಂಪ್ಯೂಟರ್ ಟಚ್ಪ್ಯಾಡ್ ಅತ್ಯಂತ ಸೂಕ್ಷ್ಮವಾಗಿರುತ್ತದೆ. ಒಂದು ವೇಳೆ ತಪ್ಪಿ 2 ಬಾರಿ ಪ್ಯಾಡ್ ಒತ್ತಿದರೆ ದೃಶ್ಯಾವಳಿ ಒಂದು ಎಸೆತ ಹಿಂದಕ್ಕೆ ಎಗರುತ್ತದೆ. ಇಲ್ಲೂ ಹಾಗೆಯೇ ಆಗಿದೆ. ಉಮೇಶ್ ಬ್ಯಾಟಿಂಗ್ ಮಾಡುವಾಗ ಬೌಲರ್ ಬುಮ್ರಾ ಪಾದಚಲನೆ ಕಾಣಿಸಿಬೇಕಾಗಿದ್ದರ ಬದಲು, ಕೊಹ್ಲಿ ಬ್ಯಾಟಿಂಗ್ ಮಾಡುವಾಗ, ಉಮೇಶ್ ಬೌಲಿಂಗ್ ತುದಿಯಲ್ಲಿರುವಾಗಿನ ಬುಮ್ರಾ ಪಾದಚಲನೆ ಕಾಣಿಸಿದೆ!
ಆದರೆ ಪ್ರತಿ ಬಾರಿಯೂ ಇಲ್ಲಿ ನಿರ್ವಾಹಕರದ್ದೇ ತಪ್ಪಿರುತ್ತದೆ ಎನ್ನುವ ಹಾಗಿಲ್ಲ. ಕೆಲವನ್ನು ಪತ್ತೆಹಚ್ಚುವುದು ಕಷ್ಟ. ಕೆಲ ಬಾರಿ ಸತತ 2 ಎಸೆತಗಳನ್ನು ಒಬ್ಬನೇ ಬ್ಯಾಟ್ಸ್ಮನ್ ಎದುರಿಸಿರುತ್ತಾನೆ. ಅವನು ಔಟಾದ ಎಸೆತದಲ್ಲಿ ಬೌಲರ್ ಪಾದಚಲನೆ ಪರಿಶೀಲಿಸುವಾಗ, ಹಿಂದಿನ ಎಸೆತದ ಬೌಲರ್ ಪಾದಚಲನೆ ಕಾಣಿಸಬಹುದು. ಆಗ ಕ್ರೀಸ್ನಲ್ಲಿ ಅದೇ ಬ್ಯಾಟ್ಸ್ಮನ್ ಇರುವುದರಿಂದ ಆಗ ತಪ್ಪನ್ನು ಪತ್ತೆ ಹಚ್ಚುವುದು ಕಷ್ಟ.
ಹಿಂದೆಯೂ ಇಂಥ ಘಟನೆ ನಡೆದಿದೆ!
2011ರ ಐಪಿಎಲ್ನಲ್ಲಿ ಅಮಿತ್ ಮಿಶ್ರಾ ಎಸೆತದಲ್ಲಿ ಸಚಿನ್ ತೆಂಡುಲ್ಕರ್ ಔಟಾಗಿದ್ದರು. ಆಗ ಅಮಿತ್ ಮಿಶ್ರಾ ಪಾದಚಲನೆ ಪತ್ತೆ ಹಚ್ಚಲು ತೃತೀಯ ಅಂಪಾಯರ್ಗೆ ಶಿಫಾರಸು ಮಾಡಲಾಗಿತ್ತು. ಆಗಿನ ಟೀವಿ ರಿಪ್ಲೇ ವೀಡಿಯೋದಲ್ಲಿ ಬ್ಯಾಟಿಂಗ್ ತುದಿಯಲ್ಲಿರಬೇಕಾಗಿದ್ದ ತೆಂಡುಲ್ಕರ್, ಬೌಲಿಂಗ್ ತುದಿಯಲ್ಲಿ ಅಮಿತ್ ಮಿಶ್ರಾ ಜತೆ ಕಾಣಿಸಿಕೊಂಡಿದ್ದರು.
ಅದೇ ವರ್ಷ ಒಂದು ತಿಂಗಳ ಅನಂತರ ವೆಸ್ಟ್ ಇಂಡೀಸ್ನಲ್ಲಿ ಕ್ರಿಕೆಟ್ ಸರಣಿ ನಡೆದಿತ್ತು. ಆಗ ವಿಂಡೀಸ್ನ ಫಿಡೆಲ್ ಎಡ್ವರ್ಡ್ಸ್ ಎಸೆತದಲ್ಲಿ ಧೋನಿ ಔಟಾಗಿದ್ದರು. ಆಗಲೂ ಧೋನಿ ಬೌಲಿಂಗ್ ತುದಿಯಲ್ಲಿದ್ದ ವೀಡಿಯೋ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.