![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 10, 2020, 3:45 PM IST
ರಾಜಕೋಟ್: ರಣಜಿ ಕೂಟದ ಫೈನಲ್ ಹಣಾಹಣಿ ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ನ ಮೈದಾನದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಪಾಯರ್ ಹೊರಬಿದ್ದಿದ್ದಾರೆ.
ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅನುಭವಿ ಅಂಪಾಯರ್ ಸಿ ಶಂಶುದ್ದೀನ್ ಫೈನಲ್ ಪಂದ್ಯದ ಮುಂದಿನ ದಿನದ ಆಟಗಳಿಗೆ ಲಭ್ಯವಿರುವುದಿಲ್ಲ.
ಮೊದಲ ದಿನದ ಆಟದಲ್ಲಿ ಅಂಪಾಯರಿಂಗ್ ನಡೆಸುತ್ತಿದ್ದ ಶಂಶುದ್ದೀನ್ ಅವರ ಕೆಳ ಹೊಟ್ಟೆಯ ಭಾಗಕ್ಕೆ ಚೆಂಡು ಬಡಿದಿತ್ತು. ಇದರಿಂದಾಗಿ ಶಂಶುದ್ದೀನ್ ಆಗಲೇ ಮೈದಾನ ತೊರೆದಿದ್ದರು. ಹೆಚ್ಚುವರಿ ಅಂಪಾಯರ್ ಎಸ್ ರವಿ ನಂತರ ಮೈದಾನಕ್ಕಿಳಿದಿದ್ದರು.
ಸೋಮವಾರ ರಾತ್ರಿ ಶಂಶುದ್ದೀನ್ ಅವರಿಗೆ ನೋವು ಜಾಸ್ತಿಯಾದ ಕಾರಣ ಮಂಗಳವಾರ ಬೆಳಿಗ್ಗೆ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಶಂಶುದ್ದೀನ್ ಬದಲು ಯಶವಂತ್ ಬರ್ಡೆ ಬುಧವಾರ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ.
ಪ್ರಶಸ್ತಿಗಾಗಿ ಸೌರಾಷ್ಟ್ರ ಮತ್ತು ಬಂಗಾಲ ತಂಡಗಳು ಸೆಣಸಾಡುತ್ತಿದೆ. ಮೊದಲು ಬ್ಯಾಟಿಂಗ್ ನಡೆಸುತ್ತಿರುವ ಸೌರಾಷ್ಟ್ರ 146 ಓವರ್ ವೇಳೆ 349 ರನ್ ಗಳಿಸಿ ಆರು ವಿಕೆಟ್ ಕಳೆದುಕೊಂಡಿದೆ. ಅರ್ಪಿತ್ ವಸವಾಡ ಶತಕ ಗಳಿಸಿ ಔಟಾದರೆ, ಚೇತೇಶ್ವರ ಪೂಜಾರ ಅರ್ಧಶತಕ ಬಾರಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.