![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 20, 2021, 7:30 AM IST
ಬೆಂಗಳೂರು: ದೇಶಿ ಮಟ್ಟದ ಅತ್ಯುನ್ನತ ಏಕದಿನ ಕ್ರಿಕೆಟ್ ಟೂರ್ನಿಯಾದ “ವಿಜಯ್ ಹಜಾರೆ ಟ್ರೋಫಿ’-2021ರ ಆವೃತ್ತಿ ಶನಿವಾರದಿಂದ ಆರಂಭವಾಗಲಿದೆ. ಎಲೈಟ್ ಗ್ರೂಪ್ “ಸಿ’ಯಲ್ಲಿ ಸ್ಥಾನ ಪಡೆದಿರುವ ಹಾಲಿ ಚಾಂಪಿಯನ್ ಕರ್ನಾಟಕ ಮೊದಲ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ ಸೆಣಸಲಿದೆ. ಶನಿವಾರ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಈ ಪಂದ್ಯ ನಡೆಯಲಿದೆ.
ಟೂರ್ನಿಯಲ್ಲಿ 50 ಓವರ್ಗಳ 103 ಪಂದ್ಯಗಳು ನಡೆಯಲಿದ್ದು, ಒಟ್ಟು 38 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಸೂರತ್, ಇಂದೋರ್, ಬೆಂಗಳೂರು, ಜೈಪುರ, ಕೋಲ್ಕತಾ ಮತ್ತು ಚೆನ್ನೈ ಈ ಪಂದ್ಯದ ತಾಣಗಳು. ಸಯ್ಯದ್ ಮುಷ್ತಾಕ್ ಅಲಿ ಟಿ20 ಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಬಿಸಿಸಿಐಗೆ, ಈ ಟೂರ್ನಿಯೂ ಯಶಸ್ಸು ಕಾಣುವ ವಿಶ್ವಾಸವಿದೆ.
ಸ್ಟಾರ್ ಆಟಗಾರರು ಕಣಕ್ಕೆ :
ಭಾರತ ತಂಡದ ಸ್ಟಾರ್ ಆಟ ಗಾರರಾದ ಹನುಮ ವಿಹಾರಿ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಇಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ಮುಂಬರುವ ಏಕದಿನ ಸರಣಿ ಹಿನ್ನೆಲೆಯಲ್ಲಿ ಇವರಿಗೆಲ್ಲ ಇದು ಮಹತ್ವದ ಪಂದ್ಯಾವಳಿ. ಜತೆಗೆ ಈ ಬಾರಿಯ ಐಪಿಎಲ್ಗೆ ಬೃಹತ್ ಮೊತ್ತಕ್ಕೆ ಹರಾಜಾದ ಕನ್ನಡಿಗ ಕೆ. ಗೌತಮ್, ಶಾರೂಖ್ ಖಾನ್ ಅವರೆಲ್ಲ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎನ್ನುವ ಕುತೂಹಲವೂ ಇದೆ.
ಕರ್ನಾಟಕದ ಪಂದ್ಯಗಳು :
ಫೆ. 20 : ಕರ್ನಾಟಕ-ಉ. ಪ್ರದೇಶ
ಫೆ. 22 : ಕರ್ನಾಟಕ-ಬಿಹಾರ
ಫೆ. 24 : ಕರ್ನಾಟಕ-ಒಡಿಶಾ
ಫೆ. 26 : ಕರ್ನಾಟಕ-ರೈಲ್ವೇಸ್
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.