ವಿರಾಟ್‌ ಕೊಹ್ಲಿ ಸೆಂಚುರಿ: ಭಾರತಕ್ಕೆ ಭರ್ಜರಿ ಮುನ್ನಡೆ


Team Udayavani, Aug 21, 2018, 6:00 AM IST

virat-kohli-nottingham-test.jpg

ನಾಟಿಂಗ್‌ಹ್ಯಾಮ್‌: ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 3 ರನ್ನಿನಿಂದ ಶತಕ ತಪ್ಪಿಸಿಕೊಂಡಿದ್ದ ವಿರಾಟ್‌ ಕೊಹ್ಲಿ, ದ್ವಿತೀಯ ಸರದಿಯಲ್ಲಿ ಸೆಂಚುರಿ ಸಂಭ್ರಮ ಆಚರಿಸಿದ್ದಾರೆ. ಇದರೊಂದಿಗೆ ನಾಟಿಂಗ್‌ಹ್ಯಾಮ್‌ ಟೆಸ್ಟ್‌ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮುಂದುವರಿಸಿರುವ ಭಾರತ, 7 ವಿಕೆಟಿಗೆ 352 ರನ್‌ ಮಾಡಿ ಡಿಕ್ಲೇರ್‌ ಮಾಡಿದೆ. 

ಇಂಗ್ಲೆಂಡಿಗೆ 521 ರನ್‌ ಗುರಿ ನೀಡಿದೆ.ಭಾರತ 2 ವಿಕೆಟ್‌ ನಷ್ಟಕ್ಕೆ 124 ರನ್‌ ಮಾಡಿದಲ್ಲಿಂದ ಸೋಮವಾರದ ಆಟ ಆರಂಭಿಸಿತ್ತು. ಡಿಕ್ಲೇರ್‌ ಮಾಡುವಾಗ ಹಾರ್ದಿಕ್‌ ಪಾಂಡ್ಯ 52 ರನ್‌ ಸಿಡಿಸಿ ಅಜೇಯರಾಗಿದ್ದರು.  ಪಂದ್ಯವಿನ್ನೂ 2 ದಿನ ಕಾಣಲಿಕ್ಕಿರುವುದರಿಂದ ಭಾರತದ ಮುಂದೆ ಗೆಲುವಿನ ಉತ್ತಮ ಅವಕಾಶವೊಂದು ಎದುರಾಗಿದೆ ಎನ್ನಲಡ್ಡಿಯಿಲ್ಲ.

8 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ವಿರಾಟ್‌ ಕೊಹ್ಲಿ 103 ರನ್‌ ಬಾರಿಸಿ ಮೆರೆದರು. 33ರಲ್ಲಿದ್ದ ಚೇತೇಶ್ವರ್‌ ಪೂಜಾರ 72 ರನ್ನುಗಳ ಕೊಡುಗೆ ಸಲ್ಲಿಸಿದರು. ಇವರಿಬ್ಬರ 3ನೇ ವಿಕೆಟ್‌ ಜತೆಯಾಟದಲ್ಲಿ 113 ರನ್‌ ಒಟ್ಟುಗೂಡಿತು. 

ಕೊಹ್ಲಿ: ಸರಣಿಯಲ್ಲಿ 400 ರನ್‌
ಮೊದಲ ಇನ್ನಿಂಗ್ಸ್‌ನಲ್ಲಿ 97 ರನ್‌ ಮಾಡಿ ಔಟಾಗಿದ್ದ ವಿರಾಟ್‌ ಕೊಹ್ಲಿ ಈ ಬಾರಿ ಸೆಂಚುರಿಯನ್ನು ಮಿಸ್‌ ಮಾಡಿಕೊಳ್ಳಲಿಲ್ಲ. 191 ಎಸೆತಗಳಲ್ಲಿ 23ನೇ ಟೆಸ್ಟ್‌ ಶತಕದ ಸಂಭ್ರಮ ಆಚರಿಸಿದರು. ಇದು ಈ ಸರಣಿಯಲ್ಲಿ ಕೊಹ್ಲಿ ಹೊಡೆದ 2ನೇ ಶತಕ. 197 ಎಸೆತಗಳ ಈ ಮನಮೋಹಕ ಇನ್ನಿಂಗ್ಸ್‌ ವೇಳೆ 10 ಬೌಂಡರಿ ಸಿಡಿಯಲ್ಪಟ್ಟಿತು. ಈ ಸಾಧನೆಯ ವೇಳೆ ಕೊಹ್ಲಿ 400 ರನ್ನುಗಳ ಗಡಿಯನ್ನೂ ದಾಟಿದರು. ಇಂಗ್ಲೆಂಡ್‌ನ‌ಲ್ಲಿ ನಡೆದ ಸರಣಿಯೊಂದರಲ್ಲಿ 400 ರನ್‌ ಪೇರಿಸಿದ ಭಾರತದ ದ್ವಿತೀಯ ನಾಯಕ ಹಾಗೂ ಭಾರತದ 6ನೇ ಬ್ಯಾಟ್ಸ್‌ಮನ್‌ ಎಂಬ ಹಿರಿಮೆ ಕೊಹ್ಲಿ ಅವರದ್ದಾಗಿದೆ. ಇದಕ್ಕೂ ಮುನ್ನ ಮೊಹಮ್ಮದ್‌ ಅಜರುದ್ದೀನ್‌ 426 ರನ್‌ ಪೇರಿಸಿದ್ದರು.
ಚೇತೇಶ್ವರ್‌ ಪೂಜಾರ 208 ಎಸೆತ ಎದುರಿಸಿ 72 ರನ್‌ ಮಾಡಿದರು. ಇದರಲ್ಲಿ 9 ಬೌಂಡರಿ ಸೇರಿತ್ತು. ಇದು ಅವರ 18ನೇ ಅರ್ಧ ಶತಕ. ಮೊದಲ ಅವಧಿಯಲ್ಲಿ ಪೂಜಾರ-ಕೊಹ್ಲಿ ಜೋಡಿಯೇ ಕ್ರೀಸ್‌ ಆಕ್ರಮಿಸಿಕೊಂಡಿತು. ಇಂಗ್ಲೆಂಡಿಗೆ ಯಾವುದೇ ಯಶಸ್ಸು ಸಿಗಲಿಲ್ಲ. ಭೋಜನ ವಿರಾಮದ ವೇಳೆ ಭಾರತ 2 ವಿಕೆಟಿಗೆ 194 ರನ್‌ ಗಳಿಸಿತ್ತು.

ಎರಡನೇ ಅವಧಿಯ ಆಟದಲ್ಲಿ ಪೂಜಾರ ವಿಕೆಟ್‌ ಬಿತ್ತು. ಟೀ ವಿರಾಮದ ವೇಳೆ ಭಾರತ 3 ವಿಕೆಟ್‌ ನಷ್ಟಕ್ಕೆ 270 ರನ್‌ ಮಾಡಿತ್ತು. 2ನೇ ಹೊಸ ಚೆಂಡು ತೆಗೆದುಕೊಂಡ ಬಳಿಕ ವಿರಾಟ್‌ ಕೊಹ್ಲಿ ಮತ್ತು ರಿಷಬ್‌ ಪಂತ್‌ (1) ವಿಕೆಟ್‌ ಉರುಳಿಸುವಲ್ಲಿ ಇಂಗ್ಲೆಂಡ್‌ ಯಶಸ್ವಿಯಾಯಿತು. 2ನೇ ದಿನದ ಕೊನೆಯಲ್ಲಿ ಆರಂಭಿಕರಾದ ಕೆ.ಎಲ್‌. ರಾಹುಲ್‌ (36) ಮತ್ತು ಶಿಖರ್‌ ಧವನ್‌ (44) ವಿಕೆಟ್‌ ಉರುಳಿತ್ತು. ಭಾರತದ 329 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ಇಂಗ್ಲೆಂಡ್‌ 161ಕ್ಕೆ ಆಲೌಟ್‌ ಆಗಿತ್ತು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.