![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 26, 2021, 3:35 PM IST
ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲೂ ವಿರಾಟ್ ಕೊಹ್ಲಿ ಅಗ್ಗಕ್ಕೆ ವಿಕೆಟ್ ಒಪ್ಪಿಸಿದರು.
ವಿರಾಟ್ ಕೊಹ್ಲಿ ಇಂಗ್ಲೆಂಡ್ ನಲ್ಲಿ ಅದರಲ್ಲೂ ಜೇಮ್ಸ್ ಆ್ಯಂಡರ್ಸನ್ ವಿರುದ್ಧ ಅನುಭವಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಬೇಕಾದ ಅನಿವಾರ್ಯತೆಯಿದೆ ಎಂದು ಸುನೀಲ್ ಗಾವಸ್ಕರ್ ಹೇಳಿದ್ದಾರೆ.
ಲೀಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 17 ಎಸೆತ ಎದುರಿಸಿ 7 ರನ್ ಮಾತ್ರ ಗಳಿಸಿದ್ದರು. ಜೇಮ್ಸ್ ಅ್ಯಂಡರ್ಸನ್ ಎಸೆತದಲ್ಲಿ ಜೋಸ್ ಬಟ್ಲರ್ ಗೆ ಕ್ಯಾಚ್ ನೀಡಿ ವಿರಾಟ್ ನಿರ್ಗಮಿಸಿದ್ದರು. ಟೆಸ್ಟ್ ಕ್ರಿಕೆಟ್ ನಲ್ಲಿ ಏಳನೇ ಬಾರಿಗೆ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದರು.
ಇದನ್ನೂ ಓದಿ:ಆಸ್ಟ್ರೇಲಿಯದ ಸೈಕ್ಲಿಸ್ಟ್ಗೆ ಬಂಗಾರ
ಈ ವೇಳೆ ವೀಕ್ಷಕ ವಿವರಣೆ ನೀಡುತ್ತಿದ್ದ ಸುನೀಲ್ ಗಾವಸ್ಕರ್, ವಿರಾಟ್ ಕೊಹ್ಲಿಯು ತ್ವರಿತವಾಗಿ ಸಚಿನ್ ತೆಂಡೂಲ್ಕರ್ ಗೆ ಕರೆ ಮಾಡಿ, ತಾನೇನು ಮಾಡಬೇಕು ಎಂದು ಕೇಳುವ ಅಗತ್ಯವಿದೆ ಎಂದರು.
ಸಚಿನ್ ತೆಂಡೂಲ್ಕರ್ ಸಿಡ್ನಿ ಟೆಸ್ಟ್ ನಲ್ಲಿ ಏನು ಮಾಡಿದ್ದರು ಅದನ್ನೇ ವಿರಾಟ್ ಮಾಡುವ ಅಗತ್ಯವಿದೆ. ತಾನು ಕವರ್ ಡ್ರೈವ್ ಆಡುವುದಿಲ್ಲ ಎಂದು ವಿರಾಟ್ ನಿರ್ಧರಿಸಿ ಆಡಬೇಕಿದೆ ಎಂದು ಗಾವಸ್ಕರ್ ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.