ಧೋನಿ ತಂಡದಿಂದ ಕೈಬಿಟ್ಟರು, 2008ರಲ್ಲೇ ವಿದಾಯ ಹೇಳಲು ಯೋಚಿಸಿದ್ದೆ: ಸೆಹವಾಗ್


Team Udayavani, Jun 2, 2022, 4:13 PM IST

sehwag

ಮುಂಬೈ: ಟೀಂ ಇಂಡಿಯಾ ಕಂಡ ಸ್ಪೋಟಕ ಆರಂಭಿಕ ಆಟಗಾರ ವೀರೆಂದ್ರ ಸೆಹವಾಗ್ 2013ರವರೆಗೆ ಟೀಂ ಇಂಡಿಯಾದ ಭಾಗವಾಗಿದ್ದರು. 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸೆಹವಾಗ್ 2008ರಲ್ಲೇ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಲು ಬಯಸಿದ್ದರಂತೆ. ಈ ವಿಚಾರವನ್ನು ಸ್ವತಃ ಸೆಹವಾಗ್ ಬಹಿರಂಗ ಪಡಿಸಿದ್ದಾರೆ.

ಕ್ರಿಕ್‌ಬಜ್ ಶೋ ‘ಮ್ಯಾಚ್ ಪಾರ್ಟಿ’ಯಲ್ಲಿ ಮಾತನಾಡಿದ ಅವರು, “ಎರಡು ರೀತಿಯ ಆಟಗಾರರಿದ್ದಾರೆ. ಒಂದು ರೀತಿಯ ಆಟಗಾರರು ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ವಿರಾಟ್ ಕೊಹ್ಲಿಯಂತೆ. ಅವರು ಟೀಕೆಗಳನ್ನು ಆಲಿಸುತ್ತಾರೆ ಮತ್ತು ನಂತರ ಪುನರಾಗಮನ ಮಾಡುತ್ತಾರೆ. ಟೀಕೆಗಳಿಗೆ ಪ್ರತಿಕ್ರಿಯಿಸದ ಎರಡನೇ ವಿಧದ ಆಟಗಾರರಿದ್ದಾರೆ. ಯಾಕೆಂದರೆ ಅವರು ಏನು ಮಾಡಬಲ್ಲರು ಎಂದು ಅವರಿಗೆ ತಿಳಿದಿದೆ. ನಾನು ಅಂತಹ ಆಟಗಾರನಾಗಿದ್ದೆ, ಯಾರು ನನ್ನನ್ನು ಟೀಕಿಸುತ್ತಾರೆ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲಿಲ್ಲ. 2008 ರಲ್ಲಿ ನಾವು ಆಸ್ಟ್ರೇಲಿಯಾದಲ್ಲಿದ್ದಾಗ ನಿವೃತ್ತಿಯ ಪ್ರಶ್ನೆ ನಿವೃತ್ತಿಯ ನನ್ನ ಮನಸ್ಸಿಗೆ ಬಂದಿತು. ನಾನು ಟೆಸ್ಟ್‌ನಲ್ಲಿ ಕಮ್ ಬ್ಯಾಕ್ ಮಾಡಿದ್ದೆ. 150 ರನ್ ಗಳಿಸಿದ್ದೆ. ಆದರೆ ಏಕದಿನ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ, ಧೋನಿ ನನ್ನನ್ನು ಪ್ಲೇಯಿಂಗ್ ಇಲೆವೆನ್ ನಿಂದ ಕೈಬಿಟ್ಟರು. ಈ ವೇಳೆ ನಾನು ಏಕದಿನ ಕ್ರಿಕೆಟ್ ತ್ಯಜಿಸುವ ಆಲೋಚನೆ ಮಾಡಿದ್ದೆ. ” ಎಂದು ಹೇಳಿದರು.

ಇದನ್ನೂ ಓದಿ:ಯು-19 ವಿಶ್ವ ಕಪ್‌ ಕ್ರಿಕೆಟ್‌ಗೆ ಯುವ ಆಟಗಾರರ ತಯಾರಿ ಅಗತ್ಯ

“ಸಚಿನ್ ತೆಂಡೂಲ್ಕರ್ ಆ ಸಮಯದಲ್ಲಿ ನನ್ನನ್ನು ತಡೆದರು. ‘ಇದು ನಿಮ್ಮ ಜೀವನದ ಕೆಟ್ಟ ಹಂತವಾಗಿದೆ, ಈ ಪ್ರವಾಸದ ನಂತರ ಮನೆಗೆ ಹಿಂತಿರುಗಿ, ಚೆನ್ನಾಗಿ ಯೋಚಿಸಿ ಮತ್ತು ನಂತರ ಏನು ಮಾಡಬೇಕೆಂದು ನಿರ್ಧರಿಸಿ’ ಎಂದು ಹೇಳಿದರು. ಅದೃಷ್ಟವಶಾತ್, ನಾನು ನಿವೃತ್ತಿ ಘೋಷಿಸಲಿಲ್ಲ. ನಾವು ಭಾರತಕ್ಕೆ ಮರಳಿದ ಬಳಿಕ ಆಯ್ಕೆ ಸಮಿತಿ ಮುಖ್ಯಸ್ಥ ಕೆ ಶ್ರೀಕಾಂತ್ ಅವರು ‘ಏನು ಮಾಡಬೇಕೆಂದು’ ನನ್ನನ್ನು ಕೇಳಿದರು. ನಾನು ಉತ್ತಮ ಫಾರ್ಮ್‌ನಲ್ಲಿದ್ದರೂ ಮೂರು-ನಾಲ್ಕು ಪಂದ್ಯಗಳಿಗೆ ನನ್ನನ್ನು ಕೈಬಿಡಲಾಗಿದೆ. ನೀವು ನನ್ನನ್ನು ಎಲ್ಲಾ ಪಂದ್ಯಗಳಲ್ಲಿ ಆಯ್ಕೆ ಮಾಡುತ್ತೀರಿ ಎಂದು ನನಗೆ ಭರವಸೆ ನೀಡಿದರೆ ನೀವು ನನ್ನನ್ನು ತಂಡಕ್ಕೆ ಆಯ್ಕೆ ಮಾಡಿ, ಇಲ್ಲದಿದ್ದರೆ ಬೇಡ’ ಎಂದೆ. ನಂತರ ಶ್ರೀಕಾಂತ್ 2008 ರ ಏಷ್ಯಾ ಕಪ್ ಸಮಯದಲ್ಲಿ ಎಂ.ಎಸ್. ಧೋನಿ ಅವರೊಂದಿಗೆ ಮಾತನಾಡಿದರು. ನಾನು ಎಲ್ಲಾ ಪಂದ್ಯಗಳಲ್ಲಿ ಆಡುವ ಅವಕಾಶ ನೀಡುವ ಬಗ್ಗೆ ಧೋನಿ ಹೇಳಿದರು. ನಂತರ ನಾನು ಉತ್ತಮ ಕ್ರಿಕೆಟ್ ಆಡಿದ್ದೇನೆ” ಎಂದು ಸೆಹವಾಗ್ ಹೇಳಿದರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.