ಇಂಗ್ಲೆಂಡ್ ನಂತೆ ನಾವು ಆಕ್ರಮಣಕಾರಿ ರೀತಿಯಲ್ಲಿ ಟೆಸ್ಟ್ ಆಡುತ್ತೇವೆ: ಕೆಎಲ್ ರಾಹುಲ್


Team Udayavani, Dec 13, 2022, 3:30 PM IST

kl-rahul

ಚತ್ತೋಗ್ರಾಮ್: ಸತತ ಟಿ20, ಏಕದಿನ ಕ್ರಿಕೆಟ್ ನಲ್ಲಿ ಪಾಲ್ಗೊಂಡಿದ್ದ ಟೀಂ ಇಂಡಿಯಾವು ಬುಧವಾರದಿಂದ ಟೆಸ್ಟ್ ಅಭಿಯಾನವನ್ನು ಪುನರಾರಂಭಿಸಿದೆ. ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಆಡಲಿದೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡದ ನಾಯಕತ್ವ ವಹಿಸಲಿದ್ದಾರೆ. ಚತ್ತೋಗ್ರಾಮ್ ನ ಜಹೂರ್ ಅಹಮದ್ ಚೌಧರಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ.

ಪಂದ್ಯಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ರಾಹುಲ್, ಭಾರತವು ಬಾಂಗ್ಲಾದೇಶದ ವಿರುದ್ಧ ಆಕ್ರಮಣಕಾರಿ ಕ್ರಿಕೆಟ್ ಆಡಲಿದೆ ಎಂದಿದ್ದಾರೆ.

“ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್ ಮುಂದಿದೆ. ಆದ್ದರಿಂದ ನಾವು ಕೂಡ ಆಕ್ರಮಣಕಾರಿ ಆಗಿರಬೇಕಾಗುತ್ತದೆ. ಫೈನಲ್‌ ಗೆ ಅರ್ಹತೆ ಪಡೆಯಲು ನಾವು ಏನು ಮಾಡಬೇಕೆಂದು ನಮಗೆ ತಿಳಿದಿದೆ. ಪ್ರತಿ ದಿನ, ಪ್ರತಿ ಸೆಷನ್‌ನಲ್ಲಿ ನಾವು ಏನು ಮಾಡಬೇಕೆಂದು ನಿರ್ಣಯಿಸಬೇಕಾಗಿದೆ. ಆ ನಿರ್ದಿಷ್ಟ ಕ್ಷಣದಲ್ಲಿ ತಂಡಕ್ಕೆ ಅಗತ್ಯವಿದೆಯೋ ಅದನ್ನು ಮಾಡಲು ಪ್ರಯತ್ನಿಸುತ್ತೇವೆ” ಎಂದು ರಾಹುಲ್ ಹೇಳಿದರು.

“ನಾವು ಯಾವುದೇ ಸಿದ್ದ ಮನಸ್ಥಿತಿಯೊಂದಿಗೆ ಹೋಗುವುದಿಲ್ಲ. ನಾವು ಅಲ್ಲಿಗೆ ಹೋಗಿ ಆಕ್ರಮಣಕಾರಿ ಮತ್ತು ಧೈರ್ಯಶಾಲಿಯಾಗಿರಲು ಪ್ರಯತ್ನಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ:ಗಂಗಾವತಿ: ಗ್ರಾಮ ದೇವತೆ ದುರ್ಗಮ್ಮ ಜಾತ್ರೆ; ಕುಂಭ ಹೋರುವ ಸುಮಂಗಲಿಯರಿಗೆ ಸೀರೆಗಳ ವಿತರಣೆ

ಇತ್ತೀಚಿನ ದಿನಗಳಲ್ಲಿ ಇಂಗ್ಲೆಂಡ್ ತಂಡ ತನ್ನ ಆಕ್ರಮಣಕಾರಿ ನೀತಿಯಿಂದ ಟೆಸ್ಟ್ ಕ್ರಿಕೆಟ್ ನಲ್ಲಿ ಉತ್ತಮ ಫಲಿತಾಂಶ ಕಾಣುತ್ತಿದೆ. ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಸರಣಿಯನ್ನೂ ಗೆದ್ದುಕೊಂಡಿದೆ. ಈ ಬಗ್ಗೆ ಮಾತನಾಡಿದ ರಾಹುಲ್, “ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಈ ಎರಡು ಪಂದ್ಯಗಳನ್ನು ವೀಕ್ಷಿಸಲು ನಿಜವಾಗಿಯೂ ತುಂಬಾ ರೋಮಾಂಚನಕಾರಿಯಾಗಿತ್ತು. ನಾನು ಟೆಸ್ಟ್ ಕ್ರಿಕೆಟನ್ನು ಆ ರೀತಿ ಆಡುವುದನ್ನು ನೋಡುವುದನ್ನು ನಿಜವಾಗಿಯೂ ಆನಂದಿಸುತ್ತಿದ್ದೇನೆ” ಎಂದರು.

ಪ್ರತಿ ತಂಡವು ಇಂಗ್ಲೆಂಡ್ ರೀತಿಯ ರಣತಂತ್ರವನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಹೇಳಿದರು. ಅದು ಅವರಿಗೆ ಫಲ ನೀಡಿರಬಹುದು. ಪ್ರತಿ ತಂಡವು ಅವರದೇ ಆದ ವಿಧಾನವನ್ನು ಹೊಂದಿದೆ. ಪ್ರತಿಯೊಬ್ಬರೂ ಇದೇ ರೀತಿ ಆಡಬೇಕೆಂದೇನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಆಡಬೇಕು ಎಂದು ರಾಹುಲ್ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.