![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 8, 2023, 1:29 PM IST
ಡೊಮಿನಿಕಾ: ಭಾರತ ತಂಡದ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಿದೆ. ಇಬ್ಬರು ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಲಾಗಿದೆ.
13 ಜನರ ತಂಡ ಪ್ರಕಟಿಸಲಾಗಿದ್ದು, ಹೊಸ ಮುಖಗಳಾದ ಕಿರಿಕ್ ಮೆಕೆಂಜಿ ಮತ್ತು ಅಥನಾಜೆ ಅವರನ್ನು ತಂಡಕ್ಕೆ ಸೇರಿಸಲಾಗಿದೆ. “ಇತ್ತೀಚಿನ ಬಾಂಗ್ಲಾದೇಶದ ‘ಎ’ ತಂಡದ ಪ್ರವಾಸದಲ್ಲಿ ಮೆಕೆಂಜಿ ಮತ್ತು ಅಥಾನಾಜೆ ಅವರ ಬ್ಯಾಟ್ಸ್ ಮನ್ ಶಿಪ್ ವಿಧಾನದಿಂದ ನಾವು ತುಂಬಾ ಪ್ರಭಾವಿತರಾಗಿದ್ದೇವೆ” ಎಂದು ಪ್ರಮುಖ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಹೇಳಿದ್ದಾರೆ. “ಇವರು ಇಬ್ಬರು ಯುವ ಆಟಗಾರರು ಉತ್ತಮ ರನ್ ಗಳನ್ನು ಗಳಿಸಿದ್ದರು ಮತ್ತು ಉತ್ತಮ ಪ್ರಬುದ್ಧತೆಯಿಂದ ಆಡಿದರು. ಅವರು ಅವಕಾಶಕ್ಕೆ ಅರ್ಹರು ಎಂದು ನಾವು ನಂಬುತ್ತೇವೆ” ಎಂದರು.
ಇದನ್ನೂ ಓದಿ:ವಿಪಕ್ಷ ನಾಯಕ ಸ್ಥಾನಕ್ಕೆ ನೂರಾರು ಕೋಟಿ ರೂ.: ಸಚಿವ ಎಂ.ಬಿ.ಪಾಟೀಲ್ ವ್ಯಂಗ್ಯ
2011ರಲ್ಲಿ ಲಂಕಾ ವಿರುದ್ಧ ಕೊನೆಯ ಪಂದ್ಯವಾಡಿದ್ದ ಆಲ್ ರೌಂಡರ್ ರಖೀಂ ಕಾರ್ನ್ ವಾಲ್ ಮತ್ತು ಕಳೆದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಪಂದ್ಯವಾಡಿದ್ದ ಲೆಗ್ ಸ್ಪಿನ್ನರ್ ಜೊಮೆಲ್ ವಾರಿಕನ್ ತಂಡಕ್ಕೆ ಮರಳಿ ಸೇರಿದ್ದಾರೆ.
ತಂಡವನ್ನು ಕ್ರೇಗ್ ಬ್ಯಾಥ್ ವೇಟ್ ಮುನ್ನಡೆಸುತ್ತಿದ್ದಾರೆ. ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು ಜುಲೈ 12ರಿಂದ ಡೊಮಿನಿಕಾದಲ್ಲಿ ನಡೆಯಲಿದೆ.
ವೆಸ್ಟ್ ಇಂಡೀಸ್ ತಂಡ
ಕ್ರೈಗ್ ಬ್ರಾಥ್ ವೈಟ್ (ನಾಯಕ), ಜೆರ್ಮೈನ್ ಬ್ಲಾಕ್ ವುಡ್ (ಉಪನಾಯಕ), ಅಲಿಕ್ ಅಥಾನಾಜೆ, ಟಾಗೆನರೈನ್ ಚಂದ್ರಪಾಲ್, ರಕೀಮ್ ಕಾರ್ನ್ವಾಲ್, ಜೋಶುವಾ ಡಾ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ರೇಮನ್ ರೈಫರ್, ಕೆಮರ್ ರೋಚ್, ಜೋಮೆಲ್ ವಾರಿಕನ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.