1st ODI;ಕುಲದೀಪ್‌ ದಾಳಿಗೆ ಕುಸಿದ ವೆಸ್ಟ್‌ ಇಂಡೀಸ್‌: ಭಾರತಕ್ಕೆ 5 ವಿಕೆಟ್ ಗಳ ಜಯ


Team Udayavani, Jul 27, 2023, 11:18 PM IST

1-asdad

ಬ್ರಿಡ್ಜ್ಟೌನ್‌: ವೆಸ್ಟ್‌ ಇಂಡೀಸ್‌ ವಿರುದ್ಧ ಗುರುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್ ಗಳ ಜಯ ಸಾಧಿಸಿದೆ.

ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಕುಲದೀಪ್‌, ಜಡೇಜ ಸಹಿತ ಬೌಲರ್‌ಗಳ ಅಮೋಘ ದಾಳಿಗೆ ತತ್ತರಿಸಿದ ಆತಿಥೇಯ ತಂಡವು ಕೇವಲ 23 ಓವರ್‌ಗಳಲ್ಲಿ 114 ರನ್ನಿಗೆ ಆಲೌಟಾಯಿತು.

ಗುರಿ ಬೆನ್ನಟ್ಟಿದ ಭಾರತ 22.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಜಯ ಸಾಧಿಸಿತು. ಇಶಾನ್ ಕಿಶನ್ 52, ಗಿಲ್ 7, ಸೂರ್ಯಕುಮಾರ್19, ಹಾರ್ದಿಕ್ ಪಾಂಡ್ಯ (ರನೌಟ್)5,ಶಾರ್ದೂಲ್ ಠಾಕೂರ್ 1 ರನ್ ಗಳಿಸಿ ಔಟಾದರು.ರವೀಂದ್ರ ಜಡೇಜಾ ಔಟಾಗದೆ 16 ಮತ್ತು 6 ನೇ ವಿಕೆಟ್ ಗೆ ಬ್ಯಾಟಿಂಗ್ ಗೆ ಇಳಿದ ರೋಹಿತ್ ಶರ್ಮಾ ಔಟಾಗದೆ 12 ರನ್ ಗಳಿಸಿದರು.

ಹೋಪ್‌ ಆಸರೆ
ಭಾರತೀಯ ದಾಳಿಗೆ ವೆಸ್ಟ್‌ಇಂಡೀಸ್‌ ಆರಂಭದಿಂದಲೇ ಕುಸಿಯತೊಡಗಿತು. ಮೊತ್ತ 7 ತಲುಪಿದಾಗ ಆರಂಭಿಕ ಕೈಲ್‌ ಮೇಯರ್ ಔಟಾದರು. ಆಬಳಿಕ ಬ್ರ್ಯಾಂಡನ್‌ ಕಿಂಗ್‌ ಮತ್ತು ಅಲಿಕ್‌ ಅಥನಾಝ್ ದ್ವಿತೀಯ ವಿಕೆಟಿಗೆ 38 ರನ್‌ ಪೇರಿಸಿ ತಂಡವನ್ನು ಆಧರಿಸುವ ಪ್ರಯತ್ನ ನಡೆಸಿದರು. ಈ ಜೋಡಿಯನ್ನು ಮುಕೇಶ್‌ ಮುರಿದರು. ಅದೇ ಮೊತ್ತಕ್ಕೆ ಬ್ರ್ಯಾಂಡನ್‌ ಕೂಡ ಔಟಾದ ಕಾರಣ ತಂಡ ಒತ್ತಡಕ್ಕೆ ಬಿತ್ತು.

ನಾಯಕ ಶೈ ಹೋಪ್‌ ಮತ್ತು ಅನುಭವಿ ಶಿಮ್ರನ್‌ ಹೆಟ್‌ಮೈರ್‌ ನಾಲ್ಕನೇ ವಿಕೆಟಿಗೆ ಮತ್ತೆ 43 ರನ್‌ ಪೇರಿಸಿದರು. ಈ ಹಂತದಲ್ಲಿ 11 ರನ್‌ ಗಳಿಸಿದ ಹೈಟ್‌ಮೈರ್‌ ಅವರನ್ನು ಜಡೇಜ ಕ್ಲೀನ್‌ಬೌಲ್ಡ್‌ ಮಾಡಿಸಿದರು. ಆಬಳಿಕ ಹೋಪ್‌ ಮಾತ್ರ ವಿಂಡೀಸ್‌ನ ಆಸರೆಯಾದರು. ಉಳಿದವರು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ವಿಫ‌ಲರಾದರು. ಜಡೇಜ ಹಾಗೂ ಕುಲದೀಪ್‌ ಯಾದವ್‌ ಅವರ ನಿಖರ ಸ್ಪಿನ್‌ ದಾಳಿಗೆ ತತ್ತರಿಸಿದ ವಿಂಡೀಸ್‌ ಆಟಗಾರರು 114 ರನ್‌ ತಲಪುವಷ್ಟರಲ್ಲಿ ಆಲೌಟಾದರು.

45 ಎಸೆತ ಎದುರಿಸಿದ ಹೋಪ್‌ 43 ರನ್‌ ಗಳಿಸಿ ಕುಲದೀಪ್‌ಗೆ ವಿಕೆಟ್‌ ಒಪ್ಪಿಸಿದರು. 4 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದರು. ಉತ್ತಮ ಸ್ಪಿನ್‌ ಸಂಘಟಿಸಿದ ಕುಲದೀಪ್‌ ತನ್ನ ಮೂರು ಓವರ್‌ಗಳ ದಾಳಿಯಲ್ಲಿ ಕೇವಲ 6 ರನ್‌ ನೀಡಿ ನಾಲ್ಕು ವಿಕೆಟ್‌ ಉರುಳಿಸಿದರು. ರವೀಂದ್ರ ಜಡೇಜ 37 ರನ್ನಿಗೆ 3 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರು:
ವೆಸ್ಟ್‌ಇಂಡೀಸ್‌ 23 ಓವರ್‌ಗಳಲ್ಲಿ 114 ಆಲೌಟ್‌ (ಅಲಿಕ್‌ ಅಥನಾಝ್ 22, ಶೈ ಹೋಪ್‌ 43, ರವೀಂದ್ರ ಜಡೇಜ 33ಕ್ಕೆ 3, ಕುಲದೀಪ್‌ ಯಾದವ್‌ 6ಕ್ಕೆ 4). ಭಾರತ 22.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್

ಟಾಪ್ ನ್ಯೂಸ್

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lulu

Wimbledon-2024; ರಿಬಾಕಿನಾ, ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಯಾನ

1-yuvi

Abhishek Sharma ಸೆಂಚುರಿ ಹೊಡೆದ್ದು ಗಿಲ್‌ ಬ್ಯಾಟ್‌ನಲ್ಲಿ!: ಸಂತಸಪಟ್ಟ ಯುವಿ

1-jayasuriya

Sri Lanka Team; ಭಾರತ ಕ್ರಿಕೆಟ್‌ ಸರಣಿಗೆ ಜಯಸೂರ್ಯ ಕೋಚ್‌

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

1-soorya

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

1-lulu

Wimbledon-2024; ರಿಬಾಕಿನಾ, ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಯಾನ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

1-yuvi

Abhishek Sharma ಸೆಂಚುರಿ ಹೊಡೆದ್ದು ಗಿಲ್‌ ಬ್ಯಾಟ್‌ನಲ್ಲಿ!: ಸಂತಸಪಟ್ಟ ಯುವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.