ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?


Team Udayavani, Jun 29, 2024, 4:03 PM IST

what if rain interrupts to icc t20 world cup final? What does the rule say?

ಬಾರ್ಬಡೋಸ್: ಐಸಿಸಿ ಟಿ20 ವಿಶ್ವಕಪ್ 2024 ಅಂತಿಮ ಹಂತಕ್ಕೆ ಬಂದಿದೆ. ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಆಡಲಿದೆ. ಕೂಟದಲ್ಲಿ ಇದುವರೆಗೆ ಅಜೇಯವಾಗಿರುವ ಭಾರತ ಮತ್ತು ದ.ಆಫ್ರಿಕಾ ತಂಡಗಳು ಇಂದು ಬ್ರಿಜ್ ಟೌನ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ಮುಖಾಮುಖಿಯಾಗಲಿದೆ.

ವೆಸ್ಟ್‌ ಇಂಡೀಸ್‌-ಅಮೆರಿಕ ಆತಿಥ್ಯದ ಈ ವಿಶ್ವಕಪ್‌ನಲ್ಲಿ ಮಳೆಯ ಪಾಲು ದೊಡ್ಡದಿತ್ತು. ಇದರಿಂದ ಕೆಲವು ಲೆಕ್ಕಾಚಾರಗಳು ತಲೆಕೆಳಗಾಗಿವೆ. ಶನಿವಾರದ ಫೈನಲ್‌ ಪಂದ್ಯಕ್ಕೂ ಮಳೆಯ ಭೀತಿ ಇದೆ. ಶೇ.78ರಷ್ಟು ಮಳೆ ಸುರಿದು, ಪಂದ್ಯ ರದ್ದಾದರೂ ಅಚ್ಚರಿಯಿಲ್ಲ.

ಈ ಹಿನ್ನೆಲೆಯಲ್ಲಿ ಮೀಸಲು ದಿನವೂ ಇದೆ. ಅಲ್ಲೂ ಮಳೆ ಸುರಿದು ಪಂದ್ಯ ರದ್ದಾದರೆ ಜಂಟಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ಇದರ ನಡುವೆ ಪಂದ್ಯದ ಫ‌ಲಿತಾಂಶ ನಿರ್ಧರಿಸಲು ಹಲವು ಲೆಕ್ಕಾಚಾರಗಳಿವೆ. ಆ ಕುತೂಹಲಕರ ಸಂಗತಿಗಳು ಹೀಗಿವೆ…

1 ಶನಿವಾರ ನಿಗದಿತ ಅವಧಿಯಲ್ಲಿ ಪಂದ್ಯ ಮುಗಿಯದೇ ಹೋದರೆ, ಹೆಚ್ಚುವರಿ 3 ಗಂಟೆ 15 ನಿಮಿಷ ನೀಡಲಾಗುತ್ತೆ, ಆ ಅವಧಿಯಲ್ಲಿ ಪಂದ್ಯ ಮುಗಿಯಲೇಬೇಕು.

2 ಮಳೆಯಡ್ಡಿ ಕಾರಣ ಪಂದ್ಯ ತಡವಾದರೆ, ಫ‌ಲಿತಾಂಶ ಬರಲು ಎರಡೂ ತಂಡಗಳು ಕನಿಷ್ಠ 10 ಓವರ್‌ಗಳನ್ನು ಆಡಿರಲೇಬೇಕು. ಇಲ್ಲವಾದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ.

3 ಒಂದು ವೇಳೆ ನಿಗದಿತ ದಿನವಾದ ಶನಿವಾರ ಏನೂ ಆಟ ನಡೆಯದೇ ಹೋದರೆ ಅಥವಾ 2ನೇ ಬ್ಯಾಟಿಂಗ್‌ ಮಾಡಿದ ತಂಡಕ್ಕೆ ಕನಿಷ್ಠ 10 ಓವರ್‌ ಆಡಲು ಆಗದೇ ಇದ್ದರೆ, ಮೀಸಲು ದಿನಕ್ಕೆ ಪಂದ್ಯ ಮುಂದೂಡಲ್ಪಡುತ್ತದೆ.

4 ಮೀಸಲು ದಿನದಂದು ಹಿಂದಿನ ದಿನದಂದು ಪಂದ್ಯ ಎಲ್ಲಿಗೆ ನಿಂತಿತ್ತೋ ಅಲ್ಲಿಂದ ಮುಂದುವರಿಯುತ್ತದೆ.

5 ಆಗಲೂ ಫ‌ಲಿತಾಂಶ ಬರದೇ ಹೋದರೆ, ತಲಾ ಒಂದು ಓವರ್‌ ಗಳ ಸೂಪರ್‌ ಓವರ್‌ ಆಡಿಸಲಾಗುತ್ತದೆ. ಮಳೆಯ ತೀವ್ರತೆಯಿಂದ ಅದೂ ಸಾಧ್ಯವಾಗದಿದ್ದರೆ ಇತ್ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಅಂಕಣ ಹೇಗಿದೆ?

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಮೈದಾನ ಪಂದ್ಯಾರಂಭದಲ್ಲಿ ವೇಗದ ಬೌಲರ್‌ಗಳಿಗೆ ಹೆಚ್ಚು ಅನುಕೂಲ ನೀಡುವ ಸಾಧ್ಯತೆಯಿದೆ. ಚೆಂಡು ಬೌನ್ಸ್‌ ಆಡುವ ಸಾಧ್ಯತೆಯೂ ಹೆಚ್ಚಿರುವುದರಿಂದ ಬ್ಯಾಟರ್‌ಗಳಿಗೆ ರನ್‌ ಗಳಿಸುವುದು ಆರಂಭದಲ್ಲಿ ಸವಾಲೆನಿಸಬಹುದು. ಪಂದ್ಯ ಮುಂದುವರಿದು ಪಿಚ್‌ಗೆ ಹೊಂದಾಣಿಕೆ ಮಾಡಿಕೊಂಡರೆ, ಬ್ಯಾಟರ್‌ಗಳೂ ಅನುಕೂಲ ಪಡೆಯಲು ಅವಕಾಶವಿದೆ. ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಂಡು ಚೇಸಿಂಗ್‌ ಮಾಡುವ ನೆಲೆಯಲ್ಲಿ ಯೋಚಿಸುವ ಸಾಧ್ಯತೆಯೇ ಹೆಚ್ಚು. ಈ ಮೈದಾನದಲ್ಲಿ ಸರಾಸರಿ ಸ್ಕೋರ್‌ 167.

ಟಾಪ್ ನ್ಯೂಸ್

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.