ವನಿತಾ ವಿಶ್ವಕಪ್‌ : ಟಯ್ಲರ್‌, ಬೇಮಾಂಟ್‌ ಬ್ಯಾಟಿಂಗ್‌ ಬ್ಯೂಟಿ


Team Udayavani, Jul 7, 2017, 3:50 AM IST

England-v-South-Africa,.jpg

ಬ್ರಿಸ್ಟಲ್‌: ವನಿತಾ ವಿಶ್ವಕಪ್‌ ಪಂದ್ಯಾವಳಿಯ ಮುನ್ನೂರು ಪ್ಲಸ್‌ ಮೊತ್ತದ ಭರ್ಜರಿ ಮೇಲಾಟದಲ್ಲಿ ಆತಿಥೇಯ ಇಂಗ್ಲೆಂಡ್‌ 68 ರನ್ನುಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿದೆ.

ಇದರೊಂದಿಗೆ ಎರಡೂ ತಂಡಗಳು 4 ಪಂದ್ಯಗಳನ್ನು ಮುಗಿಸಿವೆ. ಇಂಗ್ಲೆಂಡ್‌ 3 ಜಯದೊಂದಿಗೆ 3ನೇ ಸ್ಥಾನದಲ್ಲಿ, ದಕ್ಷಿಣ ಆಫ್ರಿಕಾ 2 ಗೆಲುವಿನೊಂದಿಗೆ 4ನೇ ಸ್ಥಾನದಲ್ಲಿದೆ.

ಆರಂಭಿಕ ಆಟಗಾರ್ತಿ ಟ್ಯಾಮಿ ಬೇಮಾಂಟ್‌ ಮತ್ತು ಕೀಪರ್‌ ಸಾರಾ ಟಯ್ಲರ್‌ ಅವರ ಶತಕ ಇಂಗ್ಲೆಂಡ್‌ ಸರದಿಯ ಆಕರ್ಷಣೆಯಾಗಿತ್ತು. ಟಾಸ್‌ ಗೆಲುವಿನ ಸಂಪೂರ್ಣ ಲಾಭವೆತ್ತಿದ ಇಂಗ್ಲೆಂಡ್‌ ಇವರಿಬ್ಬರ 275 ರನ್‌ ಜತೆಯಾಟದಿಂದ 5 ವಿಕೆಟಿಗೆ 373 ರನ್‌ ಸೂರೆಗೈದಿತು. ಇದು ವನಿತಾ ವಿಶ್ವಕಪ್‌ ಇತಿಹಾಸದ, ಸರ್ವಾಧಿಕ ಮೊತ್ತದ 4ನೇ ಜಂಟಿ ದಾಖಲೆಯಾಗಿದೆ.

ದಕ್ಷಿಣ ಆಫ್ರಿಕಾ ಇದನ್ನು ಬೆನ್ನಟ್ಟಿ ಗೆದ್ದರೆ ಅಲ್ಲೊಂದು ವಿಶ್ವದಾಖಲೆ ನಿರ್ಮಾಣವಾಗಲಿತ್ತು. ಆರಂಭಿಕರಾದ ಲಾರಾ ವೋಲ್ವಾರ್ಟ್‌ (67) ಮತ್ತು ಲೈಜೆಲ್‌ ಲೀ (72) ಮೊದಲ ವಿಕೆಟಿಗೆ 25.1 ಓವರ್‌ಗಳಿಂದ 128 ರನ್‌ ಪೇರಿಸಿದಾಗ ಇಂಥದೊಂದು ಸಾಧ್ಯತೆ ಗರಿಗೆದರಿದ್ದು ಸುಳ್ಳಲ್ಲ. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಆಂಗ್ಲ ಬೌಲರ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದರು. ಬಳಿಕ ಕ್ಲೇ ಟ್ರಯಾನ್‌ (54), ಮಿಗ್ನನ್‌ ಡು ಪ್ರೀಝ್ (43) 75 ರನ್‌ ಜತೆಯಾಟವನ್ನು ನಿಭಾಯಿಸಿದರೂ ಗುರಿಯಿಂದ ದೂರವೇ ಉಳಿಯಬೇಕಾಯಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ 9ಕ್ಕೆ 305 ರನ್‌ ಪೇರಿಸಿ ಶರಣಾಯಿತು. 3 ದಿನಗಳ ಹಿಂದೆ ಹರಿಣಗಳ ಇದೇ ಬೌಲಿಂಗ್‌ ಪಡೆ ವೆಸ್ಟ್‌ ಇಂಡೀಸನ್ನು 48 ರನ್ನಿಗೆ ಉಡಾಯಿಸಿತ್ತು. ಆದರೆ ಇಂಗ್ಲೆಂಡ್‌ ವಿರುದ್ಧ ಧಾರಾಕಾರ ರನ್‌ ಬಿಟ್ಟುಕೊಟ್ಟಿತು.

ಟ್ಯಾಮಿ ಬೇಮಾಂಟ್‌ 148 ರನ್ನಿಗೆ 145 ಎಸೆತ ತೆಗೆದುಕೊಂಡರು. ಬೀಸಿದ್ದು 22 ಬೌಂಡರಿ ಹಾಗೂ ಒಂದು ಸಿಕ್ಸರ್‌. ಇದು ಅವರ 3ನೇ ಶತಕ. ಸಾರಾ ಟಯ್ಲರ್‌ ಅವರ 147 ರನ್‌ ಕೇವಲ 104 ಎಸೆತಗಳಿಂದ ಬಂತು. ಇದು 24 ಬೌಂಡರಿಗಳನ್ನು ಒಳಗೊಂಡಿತ್ತು. ಇದು ಟಯ್ಲರ್‌ ಅವರ 2ನೇ ಶತಕ ಹಾಗೂ ಜೀವನಶ್ರೇಷ್ಠ ಸಾಧನೆ. ದಕ್ಷಿಣ ಆಫ್ರಿಕಾ ಪರ ಮರಿಜಾನ್‌ ಕಾಪ್‌ 77 ರನ್ನಿಗೆ 3 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.