World cup 2023; ದಿಲ್ಲಿಯಲ್ಲಿ ಕೊಹ್ಲಿVs ನವೀನ್ ಫೈಟ್; ಟಾಸ್ ಗೆದ್ದ ಅಫ್ಘಾನ್


Team Udayavani, Oct 11, 2023, 1:33 PM IST

World cup 2023: India facing afghanistan

ಹೊಸದಿಲ್ಲಿ: ಏಕದಿನ ವಿಶ್ವಕಪ್ ಕೂಟದಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇಂದು ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ಥಾನ ತಂಡವನ್ನು ರೋಹಿತ್ ಶರ್ಮಾ ಬಳಗ ಎದುರಿಸುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಇಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಅವರು ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇಂದಿನ ಪಂದ್ಯದಲ್ಲಿ ರವಿ ಅಶ್ವಿನ್ ಬದಲಿಗೆ ಶಾರ್ದೂಲ್ ಠಾಕೂರ್ ಅವಕಾಶ ಪಡೆದಿದ್ದಾರೆ.

ಅಫ್ಘಾನಿಸ್ಥಾನ ಕೆಳ ರ್‍ಯಾಂಕಿಂಗ್‌ ತಂಡವಾಗಿರಬಹುದು, ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಶರಣಾಗಿರಬಹುದು, ಆದರೆ ಅದು ಈ ಕೂಟದ ಅತ್ಯಂತ ಅಪಾಯಕಾರಿ ತಂಡ ಎಂಬುದನ್ನು ಮರೆಯಬಾರದು. ಇದಕ್ಕೆ ಕಳೆದ ವಿಶ್ವಕಪ್‌ ಪಂದ್ಯವೇ ಸಾಕ್ಷಿ. ಸೌತಾಂಪ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಅಂದಿನ ಗುಲ್ಬದಿನ್‌ ನೈಬ್‌ ಪಡೆ ಭಾರತವನ್ನು ಸೋಲಿಸುವ ಹಂತಕ್ಕೆ ಬಂದಿತ್ತು. ಆದರೆ ಕೊಹ್ಲಿ ಬಳಗದ ನಸೀಬು ಚೆನ್ನಾಗಿತ್ತು. ಅದು ದೊಡ್ಡ ಅವಮಾನದಿಂದ ಪಾರಾಯಿತು. ಭಾರತವನ್ನು 8ಕ್ಕೆ 224 ರನ್ನಿಗೆ ಹಿಡಿದು ನಿಲ್ಲಿಸಿದಾಗ ಎಲ್ಲರಲ್ಲೂ ಆತಂಕ ಮನೆಮಾಡಿತ್ತು. ಆದರೆ ನಮ್ಮ ಬೌಲರ್ ತಿರುಗೇಟು ನೀಡಲು ಯಶಸ್ವಿಯಾದರು. ಗೆಲುವಿನಿಂದ ಅಫ್ಘಾನ್‌ ಕೇವಲ 11 ರನ್ನುಗಳಿಂದ ಹಿಂದುಳಿಯಿತು.

ಇಂದು ಭಾರತ- ಅಫ್ಘಾನ್ ನಡುವಿನ ಪಂದ್ಯವಾದರೂ ಅಭಿಮಾನಿಗಳಿಗೆ ಮಾತ್ರ ಕೊಹ್ಲಿ- ನವೀನ್ ಉಲ್ ಹಕ್ ವಿರುದ್ಧ ಪಂದ್ಯದಂತಾಗಿದೆ. ಐಪಿಎಲ್ ಪಂದ್ಯದ ವೇಳೆ ಕೊಹ್ಲಿ- ನವೀನ್ ನಡುವೆ ಮಾತಿಕ ಚಕಮಕಿ ನಡೆದಿತ್ತು. ಬಳಿಕ ನವೀನ್ ಹೋದಲ್ಲೆಲ್ಲಾ ಅಭಿಮಾನಿಗಳು ಕೊಹ್ಲಿ ಹೆಸರು ಹೇಳೀ ರೇಗಿಸುತ್ತಾರೆ. ಇಂದು ಕೂಡಾ ಪಂದ್ಯ ಆರಂಭಕ್ಕೆ ಮೊದಲು ಅಭ್ಯಾಸ ನಡೆಸುತ್ತಿದ್ದ ನವೀನ್ ಗೆ ಇದೇ ಅನುಭವವಾಗಿದೆ.

ತಂಡಗಳು:

ಭಾರತ: ರೋಹಿತ್ ಶರ್ಮಾ (ನಾ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಅಪ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾ), ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.