World Cup 2023; ಮಾರ್ಕಸ್ ರಾಶ್‌ಫೋರ್ಡ್ ಸಂಭ್ರಮಾಚರಣೆ ಅನುಕರಿಸಿದ ಬುಮ್ರಾ: ವಿಡಿಯೋ


Team Udayavani, Oct 11, 2023, 6:12 PM IST

World Cup 2023; Jasprit Bumrah Does Marcus Rashford’s ‘Temple Point’ Celebration

ಹೊಸದಿಲ್ಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಅಫ್ಘಾನಿಸ್ತಾನದ ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ ಅವರನ್ನು ಔಟ್ ಮಾಡಿದ ಬಳಿಕ ಫುಟ್ಬಾಲ್ ಆಟಗಾರ ಮಾರ್ಕಸ್ ರಾಶ್‌ಫೋರ್ಡ್ ಅವರ ಪ್ರಸಿದ್ಧ ‘ಟೆಂಪಲ್ ಪಾಯಿಂಟ್’ ಆಚರಣೆಯನ್ನು ಅನುಕರಿಸಿದರು. ಬುಮ್ರಾ ಅವರ ಸಂಭ್ರಮಾಚರಣೆಯು ಶೀಘ್ರವಾಗಿ ವೈರಲಾಗಿದೆ.

ವಿಕೆಟ್ ಪಡೆದ ನಂತರ, ಬುಮ್ರಾ ಅವರು ತಲೆಯ ಭಾಗಕ್ಕೆ ಬೆರಳು ಹಿಡಿದು ಫುಟ್ಬಾಲ್ ಆಟಗಾರನ ಪ್ರಸಿದ್ಧ ‘ಟೆಂಪಲ್ ಪಾಯಿಂಟ್’ ಆಚರಣೆಯನ್ನು ಅನುಕರಿಸಿದರು. ಈ ವಿಶಿಷ್ಟ ಮತ್ತು ಕುತೂಹಲಕಾರಿ ಆಚರಣೆಯು ಶೀಘ್ರದಲ್ಲೇ ಚರ್ಚೆಗೆ ಕಾರಣವಾಯಿತು. ಜಗತ್ತಿನಾದ್ಯಂತ ಅಭಿಮಾನಿಗಳು ಬುಮ್ರಾ ಅವರ ಆಚರಣೆ ಬಗ್ಗೆ ಚರ್ಚಿಸಿದರು. ಅವರ ಸಂಭ್ರಮಾಚರಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಅಫ್ಘಾನ್ ವಿರುದ್ಧ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಬುಮ್ರಾ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಹತ್ತು ಓವರ್ ಎಸೆದ ಬುಮ್ರಾ 39 ರನ್ ನೀಡಿ ನಾಲ್ವರು ಅಫ್ಘಾನ್ ಬ್ಯಾಟರ್ ಗಳನ್ನು ಔಟ್ ಮಾಡಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್ ಎಂಟು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ನಾಯಕ ಹಶ್ಮತುಲ್ಲಾಹ್ ಶಾಹಿದಿ 80 ರನ್ ಗಳಿಸಿದರೆ, ಅಜ್ಮತುಲ್ಲಾಹ್ ಒಮಾರ್ ಝೈ ಅವರು ನಾಲ್ಕು ಸಿಕ್ಸರ್ ನೆರವಿನಿಂದ 62 ರನ್ ಮಾಡಿದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಎರಡು ವಿಕೆಟ್, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಕಿತ್ತರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.