World Cup 2023; ಭಾರತ ವಿರುದ್ಧ ಹೀನಾಯ ಸೋಲು; ತಂಡದಿಂದ ವಿವರಣೆ ಕೇಳಿದ ಲಂಕಾ ಮಂಡಳಿ
Team Udayavani, Nov 4, 2023, 2:55 PM IST
ಕೊಲಂಬೊ: ಐಸಿಸಿ ಏಕದಿನ ವಿಶ್ವಕಪ್ ಕೂಟದ ಭಾರತದ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದ ಶ್ರೀಲಂಕಾ ತಂಡದ ಬಗ್ಗೆ ಮ್ಯಾನೇಜ್ ಮೆಂಟ್ ಗರಂ ಆಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಇದೀಗ ಸೋಲಿನ ಬಗ್ಗೆ ವಿವರಣೆ ಕೇಳಿದೆ.
ಕಳೆದ ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದಲ್ಲಿ ಲಂಕಾವು 302 ರನ್ ಗಳ ಬೃಹತ್ ಅಂತರದಿಂದ ಸೋಲನುಭವಿಸಿತ್ತು. ಮೊದ;ಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು 357 ರನ್ ಪೇರಿಸಿದ್ದರೆ, ಗುರಿ ಬೆನ್ನತ್ತಿದ್ದ ಲಂಕಾವು ಭಾರತದ ವೇಗಿಗಳ ದಾಳಿಗೆ ಪತರುಗಟ್ಟಿ ಕೇವಲ 55 ರನ್ ಗಳಿಗೆ ಆಲೌಟಾಗಿತ್ತು.
ಇಎಸ್ಪಿಎನ್ಕ್ರಿಕ್ಇನ್ಫೋ ಪ್ರಕಾರ, ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಇಡೀ ಕೋಚಿಂಗ್ ಸಿಬ್ಬಂದಿ ಮತ್ತು ಆಯ್ಕೆಗಾರರಿಂದ ತುರ್ತು ಮತ್ತು ಸಮಗ್ರ ವಿವರಣೆಯನ್ನು ಕೇಳಿದೆ. ಇತ್ತೀಚಿನ ಸೋಲುಗಳು ಆಘಾತಕಾರಿ ಎಂದು ಮಂಡಳಿ ಹೇಳಿದ್ದು, ತಂಡದ ಸಿದ್ಧತೆ, ತಂತ್ರಗಳು ಮತ್ತು ಪ್ರದರ್ಶನದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಇದನ್ನೂ ಓದಿ:Actress: 37ರ ವಯಸ್ಸಿನಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟಿ; ಸಾವಿನ ಹಿಂದೆ ಅನುಮಾನದ ಹುತ್ತ
“ಶ್ರೀಲಂಕಾ ಕ್ರಿಕೆಟ್ ಮಂಡಳಿಯು ನಡೆಯುತ್ತಿರುವ ವಿಶ್ವಕಪ್ 2023 ರ ಸಂದರ್ಭದಲ್ಲಿ ಶ್ರೀಲಂಕಾ ರಾಷ್ಟ್ರೀಯ ತಂಡದ ಪ್ರದರ್ಶನದ ಬಗ್ಗೆ ವಿಶೇಷವಾಗಿ ಭಾರತದ ವಿರುದ್ಧದ ನಿರಾಶಾದಾಯಕ ಸೋಲಿನ ಬಗ್ಗೆ ತನ್ನ ಆಳವಾದ ಕಳವಳ ಮತ್ತು ನಿರಾಶೆಯನ್ನು ವ್ಯಕ್ತಪಡಿಸಿದೆ. ಹೀಗಾಗಿ ಸಂಪೂರ್ಣ ಕೋಚಿಂಗ್ ಸ್ಟಾಫ್ ಮತ್ತು ಸೆಲೆಕ್ಟರ್ ಗಳಿಂದ ಸಮಗ್ರ ವಿವರಣೆ ಕೇಳಿದೆ” ಎಂದು ಎಸ್ಎಲ್ಸಿ ಹೇಳಿಕೆಯಲ್ಲಿ ತಿಳಿಸಿದೆ.
ನಡೆಯುತ್ತಿರುವ ಏಕದಿನ ವಿಶ್ವಕಪ್ 2023 ರಲ್ಲಿ ಕಳಪೆ ಪ್ರದರ್ಶನಗಳ ಹೊರತಾಗಿ, ಶ್ರೀಲಂಕಾ ಗಾಯದ ಸಮಸ್ಯೆಯಿಂದ ಬಳಲುತ್ತಿದೆ. ಶ್ರೀಲಂಕಾದ ನಾಯಕ ದಸುನ್ ಶನಕ ಮತ್ತು ವೇಗದ ಬೌಲರ್ಗಳಾದ ಮಥೀಶ ಪತಿರಣ ಮತ್ತು ಲಹಿರು ಕುಮಾರ ಪಂದ್ಯಾವಳಿಯಲ್ಲಿ ಹೊರಗುಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.