![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 24, 2022, 10:27 PM IST
ದೋಹಾ: ಮಿಚಿ ಬಥ್ಶುವಾಯಿ ಅವರ ಗೋಲು ಮತ್ತು ಥಿಬಾಟ್ ಕೋರ್ಟೊಯಿಸ್ ಅವರ ಅದ್ಭುತ ನಿರ್ವಹಣೆಯಿಂದ ಬೆಲ್ಜಿಯಂ ತಂಡವು “ಎಫ್’ ಬಣದ ಪಂದ್ಯದಲ್ಲಿ ಉತ್ಸಾಹಿ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಗೆಲುವಿನ ಖಾತೆ ತೆರೆಯಿತು. ಈ ಗೆಲುವಿನಿಂದ ಬೆಲ್ಜಿಯಂ ತನ್ನ ಬಣದಲ್ಲಿ ಅಗ್ರಸ್ಥಾನ ಪಡೆಯಿತು. ಈ ಬಣದ ಇನ್ನೊಂದು ಪಂದ್ಯದಲ್ಲಿ ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಸಾಧಿಸಿದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.
ಗಾಯಗೊಂಡ ರೊಮೆಲು ಲುಕಾಕು ಅವರ ಅನುಪಸ್ಥಿತಿಯಿಂದಾಗಿ ಬೆಲ್ಜಿಯಂನ ದಾಳಿಯ ನೇತೃತ್ವ ವಹಿಸಿದ್ದ ಬಥ್ಶುವಾಯಿ ಅವರು ಪಂದ್ಯದ ಮೊದಲ ಅವಧಿಯಲ್ಲಿ ಗೋಲು ಹೊಡೆದು ಮುನ್ನಡೆ ಒದಗಿಸಿದರು. ಆಬಳಿಕ ಥಿಬಾಟ್ ಕೋರ್ಟೊಯಿಸ್ ಅವರು ಕೆನಡಾದ ಅಲೊ#àನ್ಸೊ ಡೇವಿಸ್ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ಅದ್ಭುತವಾಗಿ ತಡೆಯುವ ಮೂಲಕ ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.
ಕೆನಡಾ ತಂಡವು 36 ವರ್ಷಗಳ ಸುದೀರ್ಘ ಸಮಯದ ಬಳಿಕ ವಿಶ್ವಕಪ್ನಲ್ಲಿ ಆಡಲು ಅರ್ಹತೆ ಗಳಿಸಿತ್ತು. ಈ ಹಿಂದೆ 1986ರಲ್ಲಿ ಮೆಕ್ಸಿಕೊದಲ್ಲಿ ನಡೆ ವಿಶ್ವಕಪ್ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.
ಆದರೆ ಈ ಬಾರಿ ಕೆನಡಾ ತಂಡವು ಅತ್ಯಂತ ಉತ್ಸಾಹದಿಂದ ಆಗಮಿಸಿತಲ್ಲದೇ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್ಕೀಪರ್ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್ ಅವರು ಡೇವಿಸ್ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್ ಅದ್ಭುತ ರೀತಿಯಲ್ಲಿ ತಡೆದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.