World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?


Team Udayavani, Jun 2, 2023, 2:23 PM IST

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

ಮುಂಬೈ: ಕೆಲವೇ ದಿನಗಳ ಹಿಂದೆ ಐಪಿಎಲ್‌ ಕೂಟ ಮುಗಿದಿದ್ದು ಚೆನ್ನೈ ಸೂಪರ್‌ ಕಿಂಗ್ಸ್‌ ಕಪ್‌ ಗೆದ್ದಿದ್ದೂ ಆಗಿದೆ. ಆದರೆ, ಈ ಐಪಿಎಲ್‌ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿರುವ ಹಲವಾರು ಆಟಗಾರರು ಈಗ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ನ ತಂಡದಲ್ಲಿದ್ದಾರೆ. ಈ ಆಟಗಾರರಿಂದ ಟೆಸ್ಟ್‌ನಲ್ಲೂ ಅಂಥದ್ದೇ ಪ್ರದರ್ಶನ ಬರಬಹುದು ಎಂಬ ನಂಬಿಕೆ ಅಭಿಮಾನಿಗಳದ್ದಾಗಿದೆ.

ವಿರಾಟ್‌ ಕೊಹ್ಲಿ, ಶುಭಮನ್‌ ಗಿಲ್‌, ಅಜಿಂಕ್ಯ ರಹಾನೆ, ರವೀಂದ್ರ ಜಡೇಜ, ಮೊಹಮ್ಮದ್‌ ಶಮಿ, ಅಕ್ಷರ್‌ ಪಟೇಲ್‌ ಉತ್ತಮವಾದ ಆಟ ಪ್ರದರ್ಶಿಸಿದ್ದು, ಇವರ ಕಡೆಯಿಂದ ಅಂಥದ್ದೇ ಆಟವನ್ನು ಆಸ್ಟ್ರೇಲಿಯ ವಿರುದ್ಧವೂ ನಿರೀಕ್ಷಿಸಲಾಗುತ್ತಿದೆ.

ಜೂ.7ರಂದು ಇಂಗ್ಲೆಂಡ್‌ನ‌ ಓವಲ್‌ ಅಂಗಳದಲ್ಲಿ ಐದು ದಿನಗಳ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯ ಆರಂಭವಾಗಲಿದೆ. ಭಾರತ ಸತತ ಎರಡನೇ ಬಾರಿಗೆ ಫೈನಲ್‌ ಪ್ರವೇಶಿಸಿರುವುದು ವಿಶೇಷ.

ಕಳೆದ ಬಾರಿ ನ್ಯೂಜಿಲೆಂಡ್‌ ಅನ್ನು ಫೈನಲ್‌ ನಲ್ಲಿ ಭಾರತ ಎದುರಿಸಿ, ರನ್ನರ್‌ ಅಪ್‌ ಆಗಿತ್ತು. ಈ ಬಾರಿ ಆಸ್ಟ್ರೇಲಿಯ ವಿರುದ್ಧ ಆಡುತ್ತಿದೆ. ಸಮಯವಿಲ್ಲದೇ ಇರುವುದರಿಂದ ಭಾರತ ಅಭ್ಯಾಸ ಪಂದ್ಯ ಆಡಿಲ್ಲ. ಆದರೂ, ಈಗಾಗಲೇ ತಂಡದ ಎಲ್ಲ ಸದಸ್ಯರೂ ಲಂಡನ್‌ಗೆ ತೆರಳಿದ್ದು, ಅಭ್ಯಾಸ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ಪೋಸ್ಟ್: ಬಿಜೆಪಿ ಕಾರ್ಯಕರ್ತ ವಶಕ್ಕೆ

143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ. ಹೀಗಾಗಿ, ಬೌಲರ್‌ ಗಳು ಉತ್ತಮವಾಗಿ ಅಭ್ಯಾಸ ನಡೆಸುತ್ತಿದ್ದಾರೆ ಎಂದು ಬೌಲಿಂಗ್‌ ಕೋಚ್‌ ಪರಾಸ್‌ ಮಾಂಬ್ರೆ ಹೇಳಿದ್ದಾರೆ.

ಇನ್ನು ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋರ್‌ ಅವರು, ಬ್ಯಾಟಿಗರಿಗೆ ಅಭ್ಯಾಸ ಪಂದ್ಯ ಸಿಗದೇ ಇದ್ದರೂ, ಐಪಿಎಲ್‌ನಿಂದ ನೇರವಾಗಿ ಬಂದಿರುವುದು ನೆರವು ನೀಡಬಹುದು ಎಂದಿದ್ದಾರೆ.

ಭಾರತಕ್ಕಿದೆ ಸದೃಢ ಬ್ಯಾಟಿಂಗ್‌ ಪಡೆ: ಐಪಿಎಲ್‌ ನ ಲೆಕ್ಕಾಚಾರದಲ್ಲಿ ನೋಡುವುದಾದರೆ ಭಾರತ ಸದೃಢ ಬ್ಯಾಟಿಂಗ್‌ ಪಡೆಯನ್ನು ಹೊಂದಿದೆ. ಗುಜರಾತ್‌ ಟೈಟನ್ಸ್‌ ಅನ್ನು ಪ್ರತಿನಿಧಿಸಿದ್ದ ಶುಭಮನ್‌ ಗಿಲ್‌ ಅದ್ಭುತ ಫಾರ್ಮ್ನಲ್ಲಿದ್ದಾರೆ. 16 ಪಂದ್ಯಗಳಿಂದ 890 ರನ್‌ ಬಾರಿಸಿರುವ ಅವರು 59.33ರ ಆವರೇಜ್‌ ಹೊಂದಿದ್ದಾರೆ. ಹಾಗೆಯೇ ವಿರಾಟ್‌ ಕೊಹ್ಲಿ ಕೂಡ ಉತ್ತಮ ಫಾರ್ಮ್ನಲ್ಲಿದ್ದು ಬ್ಯಾಟಿಂಗ್‌ ಬೆನ್ನೆಲುಬು ಆಗಬಹುದು. ಕೊಹ್ಲಿ ಕೂಡ 639 ರನ್‌ ಗಳಿಸಿದ್ದಾರೆ. ಕೆ.ಎಲ್‌.ರಾಹುಲ್‌ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಅಜಿಂಕ್ಯ ರಹಾನೆ ಕೂಡ ಉತ್ತಮ ಲಯ ಕಂಡುಕೊಂಡಿದ್ದಾರೆ.

ಇನ್ನು ಬೌಲಿಂಗ್‌ ವಿಚಾರಕ್ಕೆ ಬಂದರೆ, ಮೊಹಮ್ಮದ್‌ ಶಮಿ, ಸಿರಾಜ್‌ ಉತ್ತಮ ಲಯದಲ್ಲಿದ್ದಾರೆ. ಶಮಿ 28 ವಿಕೆಟ್‌ ಪಡೆದಿದ್ದರೆ, ಸಿರಾಜ್‌ 19 ವಿಕೆಟ್‌ ಪಡೆದಿದ್ದಾರೆ. ಆಲ್‌ ರೌಂಡರ್‌ ರವೀಂದ್ರ ಜಡೇಜ ಕೂಡ 20 ವಿಕೆಟ್‌ ಪಡೆದು ಸಖತ್ತಾಗಿಯೇ ಮಿಂಚಿದ್ದಾರೆ.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.