![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 28, 2024, 3:29 PM IST
ಲಕ್ನೋ: ಮುಂಬೈನ ಯುವ ಪ್ರತಿಭಾನ್ವಿತ ಆಟಗಾರ, ಟೀಂ ಇಂಡಿಯಾ ಆಟಗಾರ ಸರ್ಫರಾಜ್ ಖಾನ್ (Sarfaraz Khan) ಅವರ ಸಹೋದರ ಮುಶೀರ್ ಖಾನ್ (Musheer Khan) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಮುಶೀರ್ ಖಾನ್ ಅವರು ತಂದೆ ನೌಶಾದ್ ಖಾನ್ ಅವರೊಂದಿಗೆ ಅಜಂಗಢದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದಾಗ ಕಾರು ದುರಂತ ನಡೆದಿದೆ. ಅಪಘಾತದ ಪರಿಣಾಮ ಕಾರು ರಸ್ತೆಯಲ್ಲಿ ನಾಲ್ಕೈದು ಬಾರಿ ಪಲ್ಟಿಯಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
19 ವರ್ಷ ವಯಸ್ಸಿನ ಬ್ಯಾಟರ್ ಮುಶೀರ್ ಗಾಯದ ತೀವ್ರತೆ ಮತ್ತು ಅವನ ಚೇತರಿಕೆಯ ಪ್ರಕ್ರಿಯೆಯ ಆಧಾರದ ಮೇಲೆ ಆರು ವಾರಗಳಿಂದ ಮೂರು ತಿಂಗಳವರೆಗೆ ಆಟದಿಂದ ಹೊರಗುಳಿಯುವ ಸಾಧ್ಯತೆಯಿದೆ. ಕಳೆದೊಂದು ವರ್ಷದಿಂದ ದೇಶಿ ಕ್ರಿಕೆಟ್ ನಲ್ಲಿ ಸದ್ದು ಮಾಡುತ್ತಿರುವ ಮುಶೀರ್ ಗೆ ಈ ಗಾಯ ದೊಡ್ಡ ಹಿನ್ನಡೆಯಾಗಿದೆ.
ಮುಂಬೈ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ಸಹೋದರ ಮುಶೀರ್ ಖಾನ್ ಅವರು ಕೆಂಪು-ಬಾಲ್ ಕ್ರಿಕೆಟ್ ನಲ್ಲಿ ಆಕರ್ಷಕ ಫಾರ್ಮ್ ನಲ್ಲಿದ್ದಾರೆ. ಇತ್ತೀಚಿಗೆ ದುಲೀಪ್ ಟ್ರೋಫಿಯಲ್ಲಿ ಭಾರತ ಬಿ ತಂಡದ ಪರವಾಗಿ ಭಾರತ ಎ ವಿರುದ್ದ ಮುಶೀರ್ ಖಾನ್ 181 ರನ್ ಗಳಿಸಿದ್ದರು.
ಯುವ ಬ್ಯಾಟರ್ ಭಾರತೀಯ ದೇಶೀಯ ವಲಯದಲ್ಲಿ ಅತ್ಯಂತ ರೋಚಕ ನಿರೀಕ್ಷೆಯಲ್ಲಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 51.14 ರ ಪ್ರಭಾವಿ ಸರಾಸರಿಯೊಂದಿಗೆ ಮುಶೀರ್ 15 ಇನ್ನಿಂಗ್ಸ್ ಗಳಲ್ಲಿ ಮೂರು ಶತಕ ಮತ್ತು ಒಂದು ಅರ್ಧ ಶತಕ ಸೇರಿದಂತೆ 716 ರನ್ ಗಳಿಸಿದ್ದಾರೆ.
ಮುಶೀರ್ ಖಾನ್ ಅಪಘಾತದ ಬಗ್ಗೆ ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಕೆಲವೇ ದಿನಗಳಲ್ಲಿ ಇರಾನಿ ಕಪ್ ಆರಂಭವಾಗಲಿದೆ. ಇದರಲ್ಲಿ ಮುಂಬೈ ತಂಡದಲ್ಲಿ ಮುಶೀರ್ ಆಡಬೇಕಿತ್ತು. ಆದರೆ ಅಪಘಾತದಿಂದ ಅವರು ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.