![1hatharas](https://www.udayavani.com/wp-content/uploads/2024/07/1hatharas-415x233.jpg)
Shortage of Teachers;10 ಸಾವಿರ ಅತಿಥಿ ಶಿಕ್ಷಕರ ಹುದ್ದೆ ಖಾಲಿ
2ನೇ ಬಾರಿ ನೇಮಕಾತಿಯಾದರೂ ರಾಜ್ಯದಲ್ಲಿ ಇನ್ನೂ ಇದೆ ಕೊರತೆ
Team Udayavani, Aug 27, 2023, 7:30 AM IST
![Shortage of Teachers;10 ಸಾವಿರ ಅತಿಥಿ ಶಿಕ್ಷಕರ ಹುದ್ದೆ ಖಾಲಿ](https://www.udayavani.com/wp-content/uploads/2023/08/guest-620x455.jpg)
ಬೆಂಗಳೂರು: ಖಾಯಂ ಶಿಕ್ಷಕರ ಕೊರತೆ ತುಂಬಲು ಸರಕಾರ 2ನೇ ಬಾರಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಮುಂದಾಗಿದ್ದರೂ ಶಿಕ್ಷಕರ ಕೊರತೆ ಮುಂದುವರಿಯಲಿದೆ. ಲಭ್ಯ ಮಾಹಿತಿ ಪ್ರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸುಮಾರು 8,355 ಸಹ ಶಿಕ್ಷಕರ ಕೊರತೆ ಸೃಷ್ಟಿಯಾಗಿದ್ದು, ಖಾಲಿ ಇರುವ ಮುಖ್ಯೋ ಪಾಧ್ಯಾಯರ ಹುದ್ದೆಗಳು ಸೇರಿ ಸುಮಾರು ಹತ್ತು ಸಾವಿರ ಶಿಕ್ಷಕರ ಕೊರತೆ ಕಾಡಲಿದೆ.
ಈ ವರ್ಷ ವರ್ಗಾವಣೆ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮತ್ತೆ ಶಿಕ್ಷಕರ ಭಾರೀ ಕೊರತೆ ಸೃಷ್ಟಿಯಾಗಿತ್ತು. ಈಗ ಎರಡನೇ ಆದೇಶದಲ್ಲಿ ಮತ್ತೆ 8 ಸಾವಿರ ಪ್ರಾಥಮಿಕ ಮತ್ತು 2 ಸಾವಿರ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡಲಾಗಿದೆ. ಈ ಎರಡು ಆದೇಶಗಳಿಂದಾಗಿ 45 ಸಾವಿರ ಶಿಕ್ಷಕರ ನೇಮಕವಾದರೂ ಇನ್ನೂ 10 ಸಾವಿರ ಶಿಕ್ಷಕರ ಕೊರತೆ ಕಾಡುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 689, ಚಿಕ್ಕೋಡಿಯಲ್ಲಿ 682, ಬೆಳಗಾವಿ 612, ವಿಜಯಪುರ 539 ಕೊಪ್ಪಳ 537, ಯಾದಗಿರಿಯಲ್ಲಿ 477 ಅತಿಥಿ ಶಿಕ್ಷಕರ ಕೊರತೆ ಮುಂದುವರಿಯಲಿದೆ.
ಕೆಲವೆಡೆ ಅಗತ್ಯಕ್ಕಿಂತ ಹೆಚ್ಚು
ನೂತನ ವಿಜಯನಗರ ಜಿಲ್ಲೆಯಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕವಾಗಿದೆ. ಇಲ್ಲಿ 1,158 ಸಹ ಶಿಕ್ಷಕರ ಹುದ್ದೆ ಖಾಲಿ ಇದ್ದರೆ ಅತಿಥಿ ಶಿಕ್ಷಕರ ಮೊದಲ ಹಂಚಿಕೆಯಲ್ಲೇ 1,535 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ತನ್ಮೂಲಕ 377 ಹೆಚ್ಚುವರಿ ಅತಿಥಿ ಶಿಕ್ಷಕರು ಈ ಜಿಲ್ಲೆಗೆ ಲಭಿಸಿದ್ದಾರೆ. ಉಳಿದಂತೆ ಉಡುಪಿಯ ಬ್ರಹ್ಮಾವರ (30), ಉತ್ತರ ಕನ್ನಡ (ಶಿರಸಿ) ಯಲ್ಲಾಪುರ (2), ಚಿಕ್ಕಮಗಳೂರಿನ ಮೂಡಿಗೆರೆ (70), ಕೊಪ್ಪ (46), ಎನ್.ಆರ್. ಪುರ (30), ಸಾಗರ (22), ತೀರ್ಥಹಳ್ಳಿ (21), ತುಮಕೂರಿನ ಕುಣಿಗಲ್ (16) ಮತ್ತಿತರ ತಾಲೂಕುಗಳಲ್ಲಿ ಅತಿಥಿ ಶಿಕ್ಷಕರ ಸಂಖ್ಯೆ ಹೆಚ್ಚಿದೆ.
ಅತಿಥಿ ಶಿಕ್ಷಕರನ್ನು ನಾವು ವಿವೇಚನಯುತವಾಗಿ ಹಂಚಿದ್ದೇವೆ. ಸದ್ಯ ಶೇ. 4ರಷ್ಟು ಮಾತ್ರ ಸಹ ಶಿಕ್ಷಕರ ಕೊರತೆಯಿದೆ. ಇದು ನಮಗೆ ಸಮಸ್ಯೆ ಆಗಲಾರದು. 13,551 ಶಿಕ್ಷಕರ ವಿವಾದ ಇತ್ಯರ್ಥವಾದರೆ ಶಿಕ್ಷಕರ ಸಂಖ್ಯೆ ಇನ್ನಷ್ಟು ಹೆಚ್ಚುತ್ತದೆ. ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗೆ ವರ್ಗಾವಣೆಯಿಂದ ಹೆಚ್ಚು ಪ್ರಯೋಜನವಾಗಿದೆ.
– ಬಿ.ಬಿ. ಕಾವೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತೆ
- ರಾಕೇಶ್ ಎನ್.ಎಸ್.
ಟಾಪ್ ನ್ಯೂಸ್
![1hatharas](https://www.udayavani.com/wp-content/uploads/2024/07/1hatharas-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.