BJPವಿಪಕ್ಷ ನಾಯಕ ಸ್ಥಾನಕ್ಕೆ 100-200 ಕೋಟಿ ರೂ.ಟೆಂಡರ್ : ತಂಗಡಗಿ ಲೇವಡಿ

ಎಲ್ಲ ಸೀಟ್ ಮಾರಾಟಕ್ಕಿವೆ

Team Udayavani, Sep 17, 2023, 4:16 PM IST

Shivraj tangadagi

ಕೊಪ್ಪಳ: ಬಿಜೆಪಿಯಲ್ಲಿ ಸಿಎಂ ಸೀಟ್ ಸೇರಿ ಎಲ್ಲ ಸೀಟ್‌ಗಳು ಮಾರಾಟಕ್ಕಿವೆ. ಸದ್ಯ ವಿಪಕ್ಷ ಸ್ಥಾನಕ್ಕೆ ಇನ್ನು ಟೆಂಡರ್ ಕರೆದಿಲ್ಲ. ಯಾರೂ ಬಿಡ್ ಮಾಡಿದಂತೆ ಕಾಣುತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಅವರು ವ್ಯಂಗ್ಯವಾಗಿ ಲೇವಡಿ ಮಾಡಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಅವರ ಪಕ್ಷದವರೇ ಹೇಳಿದಂತೆ ಸಿಎಂ ಸ್ಥಾನ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 80 ಕೋಟಿ, ಎಂಪಿ ಟಿಕೆಟ್‌ಗೆ 10 ಕೋಟಿ, ಎಂಎಲ್‌ಎ ಟಿಕೆಟ್‌ಗೆ 5 ಕೋಟಿ ರೂ.ಗೆ ಮಾರಾಟಕ್ಕಿವೆ ಎನ್ನುವ ಮಾತಿವೆ. ಸದಸ್ಯ ರಾಜ್ಯದಲ್ಲಿ ವಿರೋಧ ಪಕ್ಷದ ಸ್ಥಾನ ಖಾಲಿಯಿದೆ. ಅದಕ್ಕೆ ಇನ್ನೂ ಟೆಂಡರ್ ಕರೆದಿಲ್ಲ. ಅದಕ್ಕೆ ದುಡ್ಡು ನಿಗದಿಯಾದ ಬಳಿಕ ಗೊತ್ತಾಗುತ್ತದೆ ಎಂದರು.

ಚೈತ್ರಾ ಕುಂದಾಪುರ ಪ್ರಕರಣದ ಬಳಿಕ ಬಿಜೆಪಿಯಲ್ಲಿ ಸೀಟ್ ಸೇಲ್ ಎಲ್ಲವೂ ನಿಜವಾಗುತ್ತಿದೆ. ಇನ್ನು ಬಿಜೆಪಿ ವಿಪಕ್ಷ ನಾಯಕನ ಹೆಸರು ಪ್ರಕಟಿಸಿಲ್ಲ. ಅದನ್ನು ಪತ್ರಿಕೆ, ಟಿವಿಯಲ್ಲಿ ಟೆಂಡರ್ ಕರೆಯುತ್ತಾರೋ ? ಗ್ಲೋಬಲ್ ಟೆಂಡರ್ ಕರೆಯುತ್ತಾರೋ ? ಅದಕ್ಕೆ 100-200 ಕೋಟಿ ರೂ. ಆಗುತ್ತೋ ಗೊತ್ತಿಲ್ಲ. ನಮ್ಮಲ್ಲಿ ವಾಸ್ತವ ಸತ್ಯ ತಿಳಿದು ಟಿಕೆಟ್ ಕೊಡುತ್ತಾರೆ ಎಂದರು.

ಸಚಿವ ರಾಜಣ್ಣ ಅವರ 3 ಡಿಸಿಎಂ ವಿಚಾರ, ನಾನು ಆ ಬಗ್ಗೆ ನಿರ್ಧಾರ ಮಾಡಲ್ಲ. ಪಕ್ಷ ನಿರ್ಧಾರಕ್ಕೆ ನಾವು ಬದ್ದರಾಗಿರುತ್ತೇವೆ. ಉತ್ತರ ಕನ್ನಡ ಭಾಗದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್ ಜ್ಯಾತ್ಯತೀತ ಎಂದು ಹೆಸರಿಟ್ಟು ಕೋಮುವಾದಿಗಳ ಜೊತೆ ಕೈ ಜೋಡಿಸುತ್ತಾರೆಂದರೆ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ಕೊಡಲಿದ್ದಾರೆ. ಅವರ ಒಳಗೆ ಮೈತ್ರಿಯಾದರೂ ಖುಷಿ. ಆಗದಿದ್ದರೂ ಖುಷಿಪಡುವೆವು ಎಂದರು.

ರಾಜ್ಯದಲ್ಲಿ 167 ತಾಲೂಕುಗಳು ಬರವೆಂದು ಘೋಷಣೆ ಮಾಡಿದೆ. ಸರ್ವೆ ನಡೆಸಿ ಪರಿಹಾರದ ಕುರಿತು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಸಿಎಂ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದು ನಿಯಮ ಸರಳೀಕರಣ ಮಾಡುವಂತೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಕೇಂದ್ರದ ನಿಯಮಗಳು ಕಠಿಣ ಇವೆ. ರೈತರಿಗೆ, ಕಾರ್ಮಿಕರಿಗೆ ಅನುಕೂಲವಾಗಲು ಮನವಿ ಮಾಡಿದ್ದಾರೆ. ಸಿಎಂ 2 ನೇ ಪತ್ರಕ್ಕೂ ಕೇಂದ್ರ ಉತ್ತರ ಕೊಟ್ಟಿಲ್ಲ. ಕೇಂದ್ರವು ಬರದ ವಿಚಾರದಲ್ಲಿ ರಾಜಕಾರಣ ಮಾಡದೇ ನಿಯಮ ಸರಳೀಕರಣ ಮಾಡಲಿ ಎಂದರು.

ಕೇಂದ್ರದ ಎನ್‌ಡಿಆರ್‌ಎಫ್ ನಿಯಮ ಸರಳೀಕರಣ ಮಾಡಲಿ ಬಹು ವರ್ಷಗಳಿಂದ ಮಾಡಿದ್ದು, ರಾಜ್ಯದ 25 ಬಿಜೆಪಿ ಸಂಸದರು ಮೋದಿ ಅವರ ಕಣ್ತೆರೆಸುವ ಕೆಲಸ ಮಾಡಲಿ. ಇವರಾದರೂ ಸ್ವಲ್ಪ ಕಣ್ತೆರೆದು ನೋಡಲಿ. ಕರ್ನಾಟಕದಿಂದಲೇ ಬದಲಾವಣೆಯಾಗಲಿ. ಎಂಪಿಗಳು ಜಾರಿಕೊಳ್ಳುವುದಕ್ಕಿಂತ ಒತ್ತಾಯ ಮಾಡಲಿ. ಮುಂಗಾರಿನಲ್ಲಿ ತೊಗರೆ, ಜೋಳ, ಸೂರ್ಯಕಾಂತಿ ಒಣಗಿದೆ. ಸಜ್ಜೆ ಸ್ವಲ್ಪ ಉಳಿದಿದೆ. ರಾಜ್ಯದಲ್ಲಿ ಬರ ಪರಿಹಾರಕ್ಕೆ ಪ್ರತ್ಯೇಕ ಪ್ಯಾಕೇಜ್ ಕುರಿತು ಸಿಎಂ ಅವರು ನಿರ್ಧಾರ ಮಾಡಲಿದ್ದಾರೆ. ಈ ಕುರಿತು ಸಚಿವ ಸಂಪುಟ ನಡೆಯಲಿದೆ ಎಂದರು.

ರಾಜ್ಯದಲ್ಲಿ ಬರ ಇರುವುದರಿಂದ ಡಿಸೆಂಬರ್ ವರೆಗೂ ಯಾವುದೇ ಉತ್ಸವ ಮಾಡಲ್ಲವೆಂದು ಸಿಎಂ ಪ್ರಕಟಿಸಿದ್ದಾರೆ. ಅಷ್ಟರೊಳಗೆ ಮಳೆ ಬೆಳೆ ಚೆನ್ನಾಗಿ ಬಂದರೆ ಮುಂದಿನ ದಿನದಲ್ಲಿ ಎಲ್ಲ ಉತ್ಸವಗಳನ್ನ ಮಾಡುವೆವು. ದಸರಾ ಉತ್ಸವ ಕ್ಯಾಲೆಂಡರ್ ಆಫ್ ಇವೆಂಟ್ ಪ್ರತಿ ವರ್ಷ ಮಾಡಲಾಗುತ್ತದೆ. ಅದು ಸಹಜ ಪ್ರಕ್ರಿಯೆ ಇನ್ನುಳಿದ ಉತ್ಸವಗಳು ಬೇರೆ ಬೇರೆ ಸಮಯದಲ್ಲಿ ಬರುತ್ತವೆ ಎಂದರು.

500 ಕ್ಕೂ ಹೆಚ್ಚು ಬಸ್‌ಗಳ ಖರೀದಿ
ಶಕ್ತಿ ಯೋಜನೆ ಜಾರಿಯಾದ ಬಳಿಕ ಹೆಚ್ಚು ಮಹಿಳೆಯರು ಸಂಚಾರ ಮಾಡುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ಈಚೆಗೆ ನಡೆದ ಸಚಿವ ಸಂಪುಟದಲ್ಲಿ 500ಕ್ಕೂ ಹೆಚ್ಚು ಬಸ್‌ಗಳ ಖರೀದಿ ವಿಷಯ ಚರ್ಚೆಯಾಗಿದೆ ಎಂದರು.

ಹೆಚ್ಚು ಮಹಿಳೆಯರು ಬಸ್‌ನಲ್ಲಿ ಸಂಚರಿಸುವುದರಿಂದ ಬಡ ವಿದ್ಯಾರ್ಥಿಗಳಿಗೆ ಓಡಾಟಕ್ಕೆ ತೊಂದರೆ ಆಗುತ್ತಿರುವುದು ನಿಜ. ಇದೆಲ್ಲವನ್ನು ಅರಿತು ಬಸ್ ಖರೀದಿ ಮಾಡಲಾಗುತ್ತಿದೆ. ಹಾಸ್ಟೆಲ್ ಸೀಟ್‌ಗಳ ಹೆಚ್ಚಳ ವಿಚಾರ, ಸೀಟ್ ಹೆಚ್ಚಿಸಿದರೆ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಬೇಕಾಗುತ್ತದೆ. ಎಲ್ಲವೂ ಒಂದೇ ದಿನ ಮಾಡಲು ಆಗುವುದಿಲ್ಲ. ಈ ಕುರಿತಂತೆ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದೇನೆ. ಕೆಕೆಆರ್‌ಡಿಬಿಯಲ್ಲಿ ಮಾಡುವ ಯೋಜನೆ ಕುರಿತು ಚರ್ಚೆ ನಡೆದಿದೆ ಎಂದರು.

ಚಕ್ರವರ್ತಿ ಸೂಲಿಬೆಲೆ, ಚೈತ್ರಾ ಕುಂದಾಪುರ ಅಣ್ಣ-ತಂಗಿ ಇದ್ದಂತೆ. ಅವರ ಭಾಷಣದಿಂದ ಯಾರೂ ಪರಿವರ್ತನೆಯಾಗಲ್ಲ. ರೊಕ್ಕ ಎತ್ತುವ ಭಾಷಣ ಅವರದ್ದು ಎಂದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.