State Govt ಫ್ರೀ ನೀಟ್‌, ಸಿಇಟಿಗೆ 12 ಕೋಟಿ ರೂ.: ಸಚಿವ ಮಧು

ಕನಿಷ್ಠ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿಗೆ ನಿರ್ಧಾರ

Team Udayavani, Jul 31, 2024, 10:51 PM IST

State Govt ಫ್ರೀ ನೀಟ್‌, ಸಿಇಟಿಗೆ 12 ಕೋಟಿ ರೂ.: ಸಚಿವ ಮಧು

ಬೆಂಗಳೂರು: ಸರಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಸೇರಿ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು ರಾಜ್ಯ ಸರಕಾರ ಮುಂದಾಗಿದೆ.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು. ವಾರ್ಷಿಕ ಕನಿಷ್ಠ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಇಂಥ ಕೋರ್ಸ್‌ಗಳ ತರಬೇತಿ ಕಾರ್ಯಕ್ರಮಕ್ಕಾಗಿ 12 ಕೋಟಿ ರೂ.ವನ್ನು ಸರಕಾರ ಬಿಡುಗಡೆ ಮಾಡಿದೆ. ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ನೀಟ್‌, ಜೆಇಇ ಮತ್ತಿತರ ಪ್ರವೇಶ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಿ ಕಾಲೇಜು ಹಂತದಲ್ಲೇ ತರಬೇತಿ ಪಡೆಯುತ್ತಾರೆ. ಇಲ್ಲವೇ ಖಾಸಗಿ ಕೋಚಿಂಗ್‌ ಸೆಂಟರ್‌ಗಳಲ್ಲಿ ಸಿದ್ಧರಾಗುತ್ತಾರೆ. ಸರಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ತರಬೇತಿ ದೊರಕಬೇಕು ಎನ್ನುವ ಉದ್ದೇಶದಿಂದ ವಾರ್ಷಿಕ ಕನಿಷ್ಠ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಆಯವ್ಯಯದಲ್ಲೇ ಘೋಷಣೆ ಮಾಡಲಾಗಿತ್ತು ಎಂದು ತಿಳಿಸಿದರು.

ಈ ಸಂಬಂಧ ತರಬೇತಿ ಸಂಸ್ಥೆಗಳನ್ನು ಆಯ್ಕೆ ಮಾಡಲಾಗುತ್ತಿದೆ. ಹೆಚ್ಚಿನ ವಿದ್ಯಾರ್ಥಿಗಳಿಂದ ಬೇಡಿಕೆ ಬಂದರೆ ಕಾಲೇಜು ಹಂತಗಳಲ್ಲೇ ಕಿರು ಪರೀಕ್ಷೆ ನಡೆಸಿ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಶಾಲೆ ಹಾಗೂ ಕಾಲೇಜಿಗೆ ಮರು ದಾಖಲಾಗಲು ಅವಕಾಶ ಕಲ್ಪಿಸಲಾಗಿದೆ. ಈ ಮಕ್ಕಳಿಗೂ ಸಮವಸ್ತ್ರ, ಪಠ್ಯಪುಸ್ತಕ, ಶೂ, ಸಾಕ್ಸ್‌ , ಮಧ್ಯಾಹ್ನದ ಬಿಸಿಯೂಟದ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ವಿಳಂಬವಾಗಿದ್ದ 13,500 ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ, ಅತಿಥಿ ಶಿಕ್ಷಕರನ್ನು ಬಳಸಿಕೊಳ್ಳಲಾಗಿದೆ. ಈ ವರ್ಷ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.