KSRTC: ಸಾರಿಗೆ ಸಂಸ್ಥೆಯ 13 ಸಾವಿರ ಹುದ್ದೆ ಭರ್ತಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ
Team Udayavani, Aug 20, 2023, 12:39 AM IST
ಬೆಂಗಳೂರು: ಉಚಿತ ಪ್ರಯಾಣದ ಮೂಲಕ ಎಲ್ಲ ಮಹಿಳೆಯರ ಸ್ವಾವಲಂಬನೆ ಯತ್ತ ಸರಕಾರ ಹೆಜ್ಜೆ ಇರಿಸಿದೆ. ಈಗ ಸಾರಿಗೆ ನಿಗಮಗಳ ಬಲವರ್ಧನೆಯತ್ತ ಮುಂದಡಿ ಇಡುತ್ತಿದೆ. ಇದರ ಭಾಗ ವಾಗಿ ಖಾಲಿ ಇರುವ 13 ಸಾವಿರ ಹುದ್ದೆ ಗಳ ನೇಮಕದ ಜತೆಗೆ ಇನ್ನೂ ನಾಲ್ಕು ಸಾವಿರ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.
ನಿರೀಕ್ಷೆಯಂತೆ ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಇದ ರಿಂದ ಆದಾಯದಲ್ಲೂ ಏರಿಕೆ ಕಂಡುಬರು ತ್ತಿದೆ. ಇದರ ಜತೆಗೆ 13 ಸಾವಿರ ಖಾಲಿ ಹುದ್ದೆ
ಗಳ ಭರ್ತಿ, 4 ಸಾವಿರ ಹೊಸ ಬಸ್ಗಳ ಸೇರ್ಪಡೆ, ಪರ್ಯಾಯ ಆದಾಯ ಮೂಲ ಗಳಿಗೆ ಒತ್ತು ಒಳಗೊಂಡಂತೆ ಸಾರಿಗೆ ನಿಗಮಗಳ ಬಲವರ್ಧನೆಗೆ ಸರಕಾರ ಆದ್ಯತೆ ನೀಡುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಬದಲಾವಣೆ ಯನ್ನು ನಿಗಮಗಳಲ್ಲಿ ಜನ ಕಾಣಲಿ ದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಶನಿವಾರ “ಉದಯವಾಣಿ’ ಬೆಂಗಳೂರು ಕಚೇರಿಗೆ ಭೇಟಿ ನೀಡಿ ಸಂವಾದ ನಡೆಸಿದ ಸಚಿವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಹಿತ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಚಾಲಕ, ನಿರ್ವಾಹಕ, ಮೆಕ್ಯಾನಿಕಲ್ ಒಳಗೊಂಡಂತೆ ಸುಮಾರು 16 ಸಾವಿರ ಹುದ್ದೆಗಳು ಖಾಲಿ ಇವೆ. ಈ ಪೈಕಿ ಮುಂದಿನ ಎರಡು-ಮೂರು ತಿಂಗಳಲ್ಲಿ 13 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದರು.
1:2ರ ಅನುಪಾತದಲ್ಲಿ ನೇಮಕ ಮಾಡಿ ಕೊಳ್ಳಲು ಸೂಚನೆ ನೀಡಲಾಗಿದೆ. ಇದರ ಜತೆಗೆ ಅನುಕಂಪದ ಆಧಾರದಲ್ಲಿ ಕೂಡ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ವಿವಿಧ ಹಂತದಲ್ಲಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ)ದಲ್ಲಿ 55 ನೇಮಕಾತಿ ಆದೇಶಗಳನ್ನು ನೀಡಲಾಗಿದೆ. ಬಿಎಂಟಿಸಿಯಲ್ಲಿ 150 ಹುದ್ದೆಗಳ ನೇಮಕಕ್ಕೆ ಪ್ರಕ್ರಿಯೆಗೆ ಸಿದ್ಧತೆ ನಡೆದಿದೆ.
ದೇಗುಲಗಳಲ್ಲಿ ಸ್ತನ್ಯಪಾನ ಕೊಠಡಿ
ಬೆಂಗಳೂರು: ಪ್ರಮುಖ ದೇಗುಲ ಗಳಲ್ಲಿ ತಾಯಂದಿರು ಮಕ್ಕಳಿಗೆ ಎದೆ ಹಾಲು ಕುಡಿಸಲು ಪ್ರತ್ಯೇಕ ಕೊಠಡಿ ಗಳನ್ನು ತೆರೆಯುವುದು ಸಹಿತ ಮೂಲಸೌಕರ್ಯಗಳ ಅಭಿವೃದ್ಧಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವರೂ ಆದ ರಾಮಲಿಂಗಾರೆಡ್ಡಿ ತಿಳಿಸಿದರು. “ಶಕ್ತಿ’ ಯೋಜನೆ ಜಾರಿಯಾದ ಅನಂತರ ಮಹಿಳೆಯರು ಹೆಚ್ಚಾಗಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ದೇವಾಲಯಗಳ ಆವರಣಗಳಲ್ಲಿ ಮಕ್ಕಳಿಗೆ ಎದೆಹಾಲು ಕುಡಿಸುವ ತಾಯಂದಿರಿಗೆ ಸೂಕ್ತ ಕೊಠಡಿ ವ್ಯವಸ್ಥೆ ಇಲ್ಲ. ಇದಕ್ಕಾಗಿ ವ್ಯವಸ್ಥೆ ಮಾಡುವಂತೆ ಮುಜರಾಯಿ ಇಲಾಖೆಗೆ ನಿರ್ದೇಶನ ನೀಡಿರುವುದಾಗಿ ಹೇಳಿದರು. ಶೌಚಾಲಯಗಳು ಮತ್ತು ಸ್ನಾನಗೃಹಗಳ ವ್ಯವಸ್ಥೆ, ಸ್ವತ್ಛತೆಗೆ ಆದ್ಯತೆ ನೀಡಬೇಕು. ಇತರ ಮೂಲಸೌಕರ್ಯಗಳಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.