![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 5, 2020, 6:14 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು ಇಂದು ಮಧ್ಯಾಹ್ನದ ನಂತರ ಮತ್ತೆ 14 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ.ದಾವಣಗೆರೆ ಜಿಲ್ಲೆಯೊಂದರಲ್ಲೇ 12 ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ದಾವಣಗೆರೆಯಲ್ಲಿ ಇತ್ತೀಚೆಗೆ ಒಂದೇ ದಿನ 21 ಸೋಂಕು ಪ್ರಕರಣ ಲಭ್ಯವಾಗಿದ್ದವು. ದಾವಣಗೆರೆಯ ಸೋಂಕಿತ ಸಂಖ್ಯೆ 556 ಮತ್ತು 581ರ ಸಂಪರ್ಕದಿಂದ ಇವರಿಗೆ ಸೋಂಕು ಹರಡಿರುವುದು ದೃಢವಾಗಿದೆ.
ಹಾವೇರಿಯ ಸವಣೂರಿನಲ್ಲಿ ಎರಡನೇ ಸೋಂಕು ಪ್ರಕರಣ ದೃಢವಾಗಿದೆ. ಸೋಂಕಿತ ಸಂಖ್ಯೆ 639ರ ಸಂಪರ್ಕದಿಂದ 40 ವರ್ಷದ ಪುರುಷನಿಗೆ ಸೋಂಕು ತಾಗಿದೆ.
ಮುಂಬೈ ಪ್ರಯಾಣದ ಇತಿಹಾಸವಿರುವ ಧಾರವಾಡದ 26 ವರ್ಷದ ಯುವಕನಿಗೂ ಸೋಂಕು ತಾಗಿರುವುದು ದೃಢವಾಗಿದೆ.
ಇಂದು ಸೋಂಕು ದೃಢವಾದವರಲ್ಲಿ ದಾವಣಗೆರೆಯ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಉಸಿರಾಟ ಸಮಸ್ಯೆಯಿಂದಲೂ ಈಕೆ ಬಳಲುತ್ತಿದ್ದರು. ಈಕೆಗೆ ಸೋಂಕಿತ ಸಂಖ್ಯೆ 556ರ ದ್ವಿತೀಯ ಸಂಪರ್ಕದಿಂದ ಸೋಂಕು ತಾಗಿತ್ತು.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ಇವರಲ್ಲಿ 29 ಸೋಂಕಿತರು ಮರಣ ಹೊಂದಿದ್ದರೆ, 331 ಮಂದಿ ಗುಣಮುಖರಾಗಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.