Lok Sabha Election; ಅಕ್ರಮ ತಡೆಗೆ ಗಡಿ ಭಾಗದಲ್ಲಿ ಕಚ್ಚೆಚ್ಚರ

ರಾಜ್ಯದಲ್ಲಿ 172 ಪೊಲೀಸ್‌ ಚೆಕ್‌ಪೋಸ್ಟ್‌, 40 ಅಬಕಾರಿ ಪೋಸ್ಟ್‌ ಆರಂಭ

Team Udayavani, Mar 28, 2024, 6:50 AM IST

Lok Sabha Election; ಅಕ್ರಮ ತಡೆಗೆ ಗಡಿ ಭಾಗದಲ್ಲಿ ಕಚ್ಚೆಚ್ಚರ

ಬೆಂಗಳೂರು: ಪಾರದರ್ಶಕ ಮತ್ತು ಅಕ್ರಮ ಮುಕ್ತ ಚುನಾವಣೆಗೆ ಪಣ ತೊಟ್ಟಿರುವ ಚುನಾವಣಾ ಆಯೋಗ ಚುನಾವಣಾ ಅಕ್ರಮಗಳನ್ನು ಮಟ್ಟ ಹಾಕಲು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರಬಲ ಜಾಲ ಹೆಣೆದಿದೆ.

ಮೊದಲ ಹಂತಕ್ಕೆ ಮಾ.28ರಂದು ಅಧಿಸೂಚನೆ ಹೊರಬೀಳುವ ಮೂಲಕ ಚುನಾವಣಾ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಗಲಿದೆ. ಅದಕ್ಕೆ ಪೂರಕವಾಗಿ ನೀತಿ ಸಂಹಿತೆ ಜಾರಿಯನ್ನು ಆಯೋಗ ಮತ್ತಷ್ಟು ಬಿಗಿಗೊಳಿಸಲಿದೆ. ಅದರಂತೆ ಚುನಾವಣಾ ಅಕ್ರಮಗಳ “ನುಸುಳುವಿಕೆ’ಯನ್ನು ತಡೆಯಲು ಗಡಿ ಭಾಗಗಳಲ್ಲಿ ಹದ್ದಿನ ಕಣ್ಣಿಟ್ಟಿದೆ.
ನೆರೆಯ 6 ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಕರ್ನಾಟಕದ 24 ಜಿಲ್ಲೆಗಳು ಹಾಗೂ ಕರ್ನಾಟಕದ ಜತೆ ಗಡಿ ಹಂಚಿಕೊಂಡಿರುವ ನೆರೆ ರಾಜ್ಯಗಳ 29 ಜಿಲ್ಲೆಗಳ ಗಡಿ ಭಾಗದಲ್ಲಿ 172 ಪೊಲೀಸ್‌ ಚೆಕ್‌ಪೋಸ್ಟ್‌, 40 ಅಬಕಾರಿ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಇದರ ಜತೆಗೆ 19 ಅರಣ್ಯ ಚೆಕ್‌ಪೋಸ್ಟ್‌ ಹಾಗೂ 15 ಸಾರಿಗೆ ಚೆಕ್‌ಪೋಸ್ಟ್‌ಗಳನ್ನು ರಾಜ್ಯದ ಗಡಿಗಳಲ್ಲಿ ಸ್ಥಾಪಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ದಿನದ 24 ಗಂಟೆಗಳ ಕಾಲ ನಿಗಾ ಇಡಲಾಗಿದೆ.

ಕರ್ನಾಟಕಕ್ಕೆ ಹೊಂದಿಕೊಂಡ ಗಡಿ ರಾಜ್ಯದ ಜಿಲ್ಲೆ ಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀತಿ ಸಂಹಿತೆ ಜಾರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಈಗಾಗಲೇ ರಾಜ್ಯಕ್ಕೆ ಪ್ರವೇಶಿಸುವ ಗಡಿಗಳಲ್ಲಿ ಪೊಲೀಸ್‌ ನಾಕಾಗಳನ್ನು ಸ್ಥಾಪಿಸಲಾಗಿದ್ದು, ಮದ್ಯ ಹಾಗೂ ಹಣದ ಸಾಗಾಟ ತಡೆಗಟ್ಟಲು ಅಬಕಾರಿ ಮತ್ತು ಐಟಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ. ಇವರಿಗೆ ಪೊಲೀಸ್‌ ಅಧಿಕಾರಿಗಳು ಸಹ ಸಾಥ್‌ ನೀಡಲಿದ್ದಾರೆ. ಈ ಸಂಬಂಧ ಆಯಾ ರಾಜ¤ದ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಪರಸ್ಪರ ಸಮನ್ವಯಕ್ಕಾಗಿ ಅಂತರರಾಜ್ಯ ಅಧಿಕಾರಿಗಳ ಸಮಿತಿಗಳನ್ನೂ ರಚಿಸಲಾಗಿದೆ ಎಂದು ಎಂದು ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ಗಡಿ ಭಾಗಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಳೆದೊಂದು ವರ್ಷದ ಆಗಮನ-ನಿರ್ಗಮನ ಪರಿಶೀಲಿಸಿ, ಅಕ್ರಮ ಹಣ, ಮದ್ಯ ಅಥವಾ ಇನ್ನಿತರೆ ವಾಣಿಜ್ಯ ಸರಕುಗಳು ಸಾಗಣೆ ಆಗಿದ್ದು, ಆ ಸಂಬಂಧ ಪ್ರಕರಣಗಳು ದಾಖಲಾಗಿದ್ದರೆ ಅದನ್ನು ಆಧರಿಸಿ ಅಂತಹ ಚೆಕ್‌ಪೋಸ್ಟ್‌ಗಳ ಮೇಲೆ ವಿಶೇಷ ನಿಗಾ ಇಡಲಾಗುತ್ತದೆ. ನಿಗದಿತ ಸಿಬ್ಬಂದಿಯ ಜೊತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ವಿಶೇಷವಾಗಿ ವಾಣಿಜ್ಯ ಸರಕುಗಳು, ಗೃಹಬಳಕೆ ಸಾಮಗ್ರಿ, ಎಲೆಕ್ಟ್ರಾನಿಕ್‌ ವಸ್ತುಗಳು ರಾಜ್ಯಕ್ಕೆ ಹೆಚ್ಚಾಗಿ ಮುಂಬೈನಿಂದ ಬರುತ್ತದೆ. ಅದೇ ರೀತಿ ಮದ್ಯ ಆಂಧ್ರ ಮತ್ತು ಗೋವಾದಿಂದ ಹೆಚ್ಚಾಗಿ ಬರುತ್ತದೆ. ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ಗಡಿ ಜಿಲ್ಲೆಗಳ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಹೆಚ್ಚು ಬಿಗಿಗೊಳಿಸಲಾಗುತ್ತದೆ.

ಗಡಿ ಹಂಚಿಕೊಂಡಿರುವ ರಾಜ್ಯಗಳು:
ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ.
ರಾಜ್ಯದ ಗಡಿ ಜಿಲ್ಲೆಗಳು:
ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೊಡಗು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ.

ನೆರೆ ರಾಜ್ಯದ ಗಡಿ ಜಿಲ್ಲೆಗಳು:
ಸಂಗರೆಡ್ಡಿ, ವಿಕಾರಾಬಾದ್‌, ನಾರಾಯಣಪೇಟ್‌, ಜೋಗುಳಾಂಬ, ಗದ್ವಾಲ್‌, ಕಾಮರೆಡ್ಡಿ, ಕರ್ನೂಲ್‌, ಅನಂತಪುರ, ಪಟ್ಟಪರ್ತಿ, ಅನ್ನಮಯ್ಯ, ಚಿತ್ತೂರು, ಕೃಷ್ಣಗಿರಿ, ಈರೋಡ್‌, ಸೇಲಂ, ನೀಲಗಿರಿ, ಕಾಸರಗೋಡು, ಕಣ್ಣೂರು, ವಯನಾಡ, ಸತ್ತಾರಿ, ದರ್ಬಂದೊರ, ಸಂಗ್ವೆಮ್‌, ಕ್ಯಾನ್‌ಕೋನ, ನಾಂದೇಡ, ಲಾಥೂರ್‌, ಉಸ್ಮಾನಾಬಾದ, ಸೋಲಾಪುರ, ಸಾಂಗ್ಲಿ, ಕೊಲ್ಲಾಪುರ, ಸಿಂಧುದುರ್ಗ.

ಬೇರೆ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ನಮ್ಮ ರಾಜ್ಯದ ಗಡಿ ಭಾಗಗಳಲ್ಲಿ ನಿಗಾ ಇಡಲಾಗಿದೆ. ಪೊಲೀಸ್‌, ಅಬಕಾರಿ ಖಾಯಂ ಚೆಕ್‌ಪೋಸ್ಟ್‌ಗಳು ಈಗಾಗಲೇ ಕಾರ್ಯರಂಭಿಸುತ್ತಿವೆ. ಉಚಿತ ಉಡುಗೊರೆಗಳು, ಮದ್ಯ, ಡ್ರಗ್ಸ್‌ ಮತ್ತಿತರ ಯಾವುದೇ ವಸ್ತುಗಳು ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಪ್ರವೇಶಿಸಬಾರದು ಎಂಬ ನಿಟ್ಟಿನಲ್ಲಿ ನಾವು ಕಟ್ಟೆಚ್ಚರ ವಹಿಸಿದ್ದೇವೆ.
– ಮನೋಜ್‌ ಕುಮಾರ್‌ ಮೀನಾ, ರಾಜ್ಯ ಮುಖ್ಯ ಚುನಾವಣಾಧಿಕಾರಿ

ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.