Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಹಾಗೂ ಹಣ ವರ್ಗಾವಣೆಯಾದ ಪಿ. ಪವಿತ್ರಾ ಇಬ್ಬರೂ ಒಬ್ಬರೇನಾ ಎಂಬ ನಿಟ್ಟಿನಲ್ಲಿ ತನಿಖೆ

Team Udayavani, Jun 25, 2024, 7:00 AM IST

Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಸ್ಟರ್‌ ಮೈಂಡ್‌ ಹಾಗೂ ನಟ ದರ್ಶನ್‌ನ ಪ್ರೇಯಸಿ ಪವಿತ್ರಾ ಗೌಡಗೆ ಇತ್ತೀಚೆಗಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್‌ ಖಾತೆಯಿಂದ 2 ಕೋಟಿ ರೂ. ವರ್ಗಾವಣೆ ಆಗಿದೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಹಿನ್ನೆಲೆಯಲ್ಲಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆಗೂ ಈ ಹಣದ ವರ್ಗಾವಣೆಗೂ ಯಾವುದಾದರೂ ಸಂಬಂಧ ಇದೆಯಾ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಜಾಜಿನಗರದಲ್ಲಿರುವ ಬ್ಯಾಂಕ್‌ವೊಂದರಲ್ಲಿನ ಪವಿತ್ರಾ ಪಿ. ಎಂಬ ಖಾತೆಗೆ 2017ರಲ್ಲಿ 1 ಕೋಟಿ ರೂ. ಮತ್ತು 2018ರಲ್ಲಿ 1 ಕೋಟಿ ರೂ. ಅನ್ನು ಸೌಂದರ್ಯ ಜಗದೀಶ್‌ ವರ್ಗಾವಣೆ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಹಾಗೂ ಹಣ ವರ್ಗಾವಣೆಯಾದ ಪಿ. ಪವಿತ್ರಾ ಇಬ್ಬರೂ ಒಬ್ಬರೆಯಾ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಂಚನೆ ದೂರು ಕೊಟ್ಟಿದ್ದ ಜಗದೀಶ್‌ ಪತ್ನಿ
ಇದೇ ವರ್ಷ ಎಪ್ರಿಲ್‌ 14ರಂದು ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. 60 ಕೋಟಿ ರೂ. ವಂಚನೆಯಿಂದ ಪತಿ ನೊಂದಿದ್ದರು ಎಂದು ಆರೋಪಿಸಿ ಮೇ 24ರಂದು ಜಗದೀಶ್‌ ಅವರ ಪತ್ನಿ ಶಶಿರೇಖಾ ಇದೇ ಠಾಣೆಗೆ ದೂರು ನೀಡಿದ್ದರು. ಪ್ರತ್ಯೇಕ ದೂರು ನೀಡಿದ್ದರಿಂದ ಆತ್ಮಹತ್ಯೆ ಪ್ರಚೋದನೆ ಆಯಾಮದಲ್ಲಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದರು.

ಈ ಮಧ್ಯೆ ಸೌಂದರ್ಯ ಜಗದೀಶ್‌ ಸೌಂದರ್ಯ ಕನ್‌ಸ್ಟ್ರಕ್ಷನ್‌ ಕಂಪೆನಿ ನಡೆಸುತ್ತಿದ್ದು, ವಿ.ಎಸ್‌. ಸುರೇಶ್‌, ಎಸ್‌.ಪಿ. ಹೊಂಬಣ್ಣ ಹಾಗೂ ಸುಧೀಂದ್ರ ಅವರು ಕಂಪೆನಿಯ ಸಹ ಪಾಲುದಾರರಾಗಿದ್ದರು. ತಮ್ಮ ಕೆಲವು ಆಸ್ತಿಯನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು 60 ಕೋಟಿ ರೂ. ಸಾಲ ಪಡೆದ ಜಗದೀಶ್‌ ಅದನ್ನು ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದರು. ಕಂಪೆನಿ ನಷ್ಟದಲ್ಲಿರುವುದಾಗಿ ಹೇಳಿದ್ದ ಸಹ ಪಾಲುದಾರರು 60 ಕೋಟಿ ರೂ. ವಂಚಿಸಿದ್ದರು ಎಂದು ಹೇಳಲಾಗಿದೆ. ಸಹ ಪಾಲುದಾರರು ಜೀವ ಬೆದರಿಕೆಯೊಡ್ಡಿದ್ದರಿಂದಲೇ ಜಗದೀಶ್‌ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂದು ಪತ್ನಿ ಶಶಿರೇಖಾ ದೂರಿನಲ್ಲಿ ಆರೋಪಿಸಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

2 ಕೋಟಿ ರೂ.ಗಳಲ್ಲೇ ಪವಿತ್ರಾ ಮನೆ ಖರೀದಿ?
ಸೌಂದರ್ಯ ಜಗದೀಶ್‌ ವ್ಯವಹಾರದ ಪಾಲುದಾರರಾಗಿರುವ ಸುರೇಶ್‌ ಅವರು ಜಗದೀಶ್‌ ವ್ಯವಹಾರದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಲ್ಲಿ ಸೌಂದರ್ಯ ಜಗದೀಶ್‌ ಪಿ. ಪವಿತ್ರಾ ಅ‌ವರಿಗೆ 2 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಈ ಹಣದಲ್ಲಿ ಪವಿತ್ರಾ ಗೌಡ 2018ರಲ್ಲಿ ಆರ್‌.ಆರ್‌. ನಗರದಲ್ಲಿ 1.75 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ್ದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.