ಬಿಜೆಪಿಯ 25 ಸಂಸದರಿಗೆ ಧೈರ್ಯವೇ ಇಲ್ಲ: ರಾಮಲಿಂಗಾರೆಡ್ಡಿ

ಮೋದಿ ಮುಂದೆ ಮಾತನಾಡೋ ತಾಕತ್ತಿಲ್ಲ

Team Udayavani, Jun 20, 2023, 7:23 AM IST

ಬಿಜೆಪಿಯ 25 ಸಂಸದರಿಗೆ ಧೈರ್ಯವೇ ಇಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿಯ 25 ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿಯವರ ಎದುರು ಮಾತನಾಡುವ ಧೈರ್ಯವೇ ಇಲ್ಲ. ತಿರುಪತಿಗೆ ಹೋಗಿ ವೆಂಕಟೇಶ್ವರ ಸ್ವಾಮಿಗೆ ನಮಸ್ಕಾರ ಹಾಕುವ ರೀತಿ ರಾಜ್ಯದ ಸಂಸದರು ಮೋದಿಯವರಿಗೆ ನಮಸ್ಕಾರ ಹಾಕಿ ಬರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಗ್ಧಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದರು ಹಾಗೂ ನಾಯಕರಿಗೆ ಪ್ರಧಾನಿ ಮೋದಿಯವರ ಮುಂದೆ ನಿಂತು ಮಾತನಾಡುವ ಧಮ್ಮು, ತಾಕತ್ತು ಇಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಆ ಧೈರ್ಯವಿತ್ತು. ಆದರೆ ಅವರನ್ನು ಈಗಾಗಲೇ ಮನೆಗೆ ಕಳುಹಿಸಿದ್ದಾರೆ. ಕೇಂದ್ರ ಸರ್ಕಾರ 5 ಕೆ.ಜಿ. ಅಕ್ಕಿ ಪುಕ್ಕಟೆಯಾಗಿ ಕೊಡುತ್ತಿಲ್ಲ. ರಾಜ್ಯದಿಂದ ವಾರ್ಷಿಕ 4 ಲಕ್ಷದ 70 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. ನಮಗೆ 37 ಸಾವಿರ ಕೋಟಿ ಮಾತ್ರ ಜಿಎಸ್ಟಿ ಪರಿಹಾರ ಲಭಿಸುತ್ತಿದೆ. ಬಿಜೆಪಿಯವರ ಪೌರುಷ ಉತ್ತರಕುಮಾರನಂತೆ ಎಂದು ವ್ಯಂಗ್ಯವಾಡಿದರು.

ಮಹಿಳೆಯರಿಗಾಗಿ ಪ್ರಾರಂಭಿಸಿರುವ ಉಚಿತ ಪ್ರಯಾಣದ ಶಕ್ತಿ ಯೋಜನೆ 5 ವರ್ಷವಿರುತ್ತದೆ. ಈಗಾಗಲೇ 3 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಒಮ್ಮೆಲೇ ಎಲ್ಲರೂ ಹೋಗುವುದು ಬೇಡ. ಯಾತ್ರಾ ಸ್ಥಳಕ್ಕೆ, ದೇವಾಲಯಕ್ಕೆ ಎಲ್ಲರೂ ಹೋದರೆ ಒತ್ತಡ ಉಂಟಾಗುತ್ತದೆ. ಮತ್ತೊಮ್ಮೆ ನಮ್ಮ ಸರ್ಕಾರವೇ ಬರಲಿದ್ದು, ಈ ಯೋಜನೆ 10 ವರ್ಷ ಇರುತ್ತದೆ. ಬಿಜೆಪಿಯವರು ದಾರಿ ತಪ್ಪಿಸುತ್ತಾರೆ. ಅದಕ್ಕೆ ಕಿವಿಗೊಡಬೇಡಿ. ಬಸ್ಸುಗಳನ್ನು ಕಡಿಮೆ ಮಾಡಿಲ್ಲ. ಆದರೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ವಿವರಿಸಿದರು.

ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಬಾರದು
ಮುಖ್ಯಮಂತ್ರಿ ವಿಚಾರ ನಮ್ಮ ಆಂತರಿಕ ವಲಯಕ್ಕೆ ಸೀಮಿತವಾಗಿದ್ದು ಅದರ ಬಗ್ಗೆ ಬಿಜೆಪಿಯವರು ತಲೆ ಕೆಡಿಸಿಕೊಳ್ಳುವುದು ಬೇಡ. ಸಿದ್ದರಾಮಯ್ಯ ಎಷ್ಟು ವರ್ಷ ಮುಂದುವರಿಯುತ್ತಾರೆ ಎಂಬುದು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಯಾಗಿದೆ. ಅದು ನಮಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಬಾರದು ಎಂದು ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟರು.

ಸಚಿವರಾದ ಎಂ.ಬಿ.ಪಾಟೀಲ್‌ ಮತ್ತು ಎಚ್‌.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಅಧಿಕಾರಾವಧಿ ಬಗ್ಗೆ ಮಾತನಾಡಬಾರದು. ನಾಲ್ಕು ಗೋಡೆಯ ನಡುವೆ ನಡೆಯುವ ವಿಚಾರ ಇದು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜೂ.26 ರಂದು ನಡೆಯುವ ಕೆಡಿಪಿ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

court

8 High Courts; ಸಿಜೆಗಳನ್ನು ನೇಮಿಸಿದ ಕೇಂದ್ರ ಸರ್ಕಾರ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.