ಆಶ್ರಯ: ವಿಶೇಷ ವರ್ಗಗಳಿಗೆ 25 ಸಾವಿರ ಮನೆ ಹಂಚಿಕೆ

53,000 ಫ‌ಲಾನುಭವಿಗಳ ಆಯ್ಕೆ ಪಟ್ಟಿ ರದ್ದು ? ಹೊಸ ಫ‌ಲಾನುಭವಿಗಳ ಆಯ್ಕೆಗೆ ನಿರ್ಧಾರ

Team Udayavani, Feb 6, 2022, 8:05 AM IST

ಆಶ್ರಯ: ವಿಶೇಷ ವರ್ಗಗಳಿಗೆ 25 ಸಾವಿರ ಮನೆ ಹಂಚಿಕೆ

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದ ವಿಶೇಷ ವರ್ಗದವರಿಗೆ 25 ಸಾವಿರ ಆಶ್ರಯ ಮನೆಗಳನ್ನು ನೀಡಲು ಸರಕಾರ ನಿರ್ಧರಿಸಿದೆ. ಆದರೆ, ಹಿಂದಿನ ಸರಕಾರದಲ್ಲಿ ಆಯ್ಕೆಯಾದ ಫ‌ಲಾನುಭವಿಗಳ ಪಟ್ಟಿ ರದ್ದುಪಡಿಸಿ ಹೊಸ ಫ‌ಲಾನುಭವಿಗಳನ್ನು ಆಯ್ಕೆ ಮಾಡಲು ತೀರ್ಮಾನಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.

ರಾಜ್ಯ ಸರಕಾರ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ವಿಧವೆಯರು, ಅಂಗವಿಕಲರು, ತೃತೀಯ ಲಿಂಗಿಗಳು, ಪರಿತ್ಯಕ್ತರು ಸೇರಿ ಸುಮಾರು 67 ವರ್ಗಗಳ ಜನರಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡುತ್ತದೆ. ಅನೇಕ ವರ್ಷಗಳಿಂದ ಈ ವರ್ಗಗಳ ಜನರಿಗೆ ಮನೆ ಹಂಚಿಕೆ ಮಾಡಿಲ್ಲ. ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಮೈತ್ರಿ ಸರಕಾರ ಹಾಗೂ ಬಿಜೆಪಿ ಸರಕಾರದ ಅವಧಿಯಲ್ಲಿಯೂ ವಿಶೇಷ ವರ್ಗಗಳಿಗೆ ಯಾವುದೇ ಮನೆ ಹಂಚಿಕೆಯಾಗಿಲ್ಲ.

ಪ್ರಸ್ತುತ ಸರಕಾರ ವಿಶೇಷ ವರ್ಗಗಳಿಗೆ ಹೊಸದಾಗಿ 25 ಸಾವಿರ ಮನೆಗಳನ್ನು ಹಂಚಲು ತೀರ್ಮಾನಿಸಿದ್ದು, ಪ್ರತಿ ಜಿಲ್ಲೆಗೂ ಫ‌ಲಾನುಭವಿಗಳ ಆಧಾರದಲ್ಲಿ ಕನಿಷ್ಠ 300ರಿಂದ 1,000 ಮನೆಗಳವರೆಗೂ ಹಂಚಿಕೆ ಮಾಡಲು ರಾಜೀವ್‌ ಗಾಂಧಿ ವಸತಿ ನಿಗಮ ಆಲೋಚಿಸಿದೆ.

ರಾಜೀವ್‌ ಗಾಂಧಿ ವಸತಿ ನಿಗಮ ಜಿಲ್ಲಾವಾರು ಮನೆಗಳನ್ನು ಹಂಚಿದ ಬಳಿಕ ಜಿಲ್ಲಾಧಿಕಾರಿಗಳ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಯಲ್ಲಿ ಪಂಚಾಯತ್‌ವಾರು ವಿವಿಧ ವಿಶೇಷ ವರ್ಗಗಳ ಫ‌ಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ನಿಗಮಕ್ಕೆ ಕಳುಹಿಸಲಾಗುತ್ತದೆ. ಬಳಿಕ ರಾಜೀವ್‌ ಗಾಂಧಿ ನಿಗಮದಿಂದ ಫ‌ಲಾನುಭವಿಗಳಿಗೆ ಅಧಿಕೃತ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಹಳೆ ಪಟ್ಟಿ ರದ್ದು ?
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ವಿಶೇಷ ವರ್ಗಗಳ ಫ‌ಲಾನುಭವಿಗಳಿಗೆ ರಾಜೀವ್‌ ಗಾಂಧಿ ವಸತಿ ನಿಗಮದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಮೂಲಕ ವಿಶೇಷ ವರ್ಗಗಳ ಫ‌ಲಾನುಭವಿಗಳಿಗೆ ಆಶ್ರಯ ಮನೆ ಹಂಚಿಕೆ ಮಾಡಲು ತೀರ್ಮಾನಿಸಿ, ಜಿಲ್ಲಾವಾರು ಪಂಚಾಯತ್‌ ಮಟ್ಟದಲ್ಲಿ ವಿಶೇಷ ವರ್ಗಗಳ ಫ‌ಲಾನುಭವಿಗಳ ಪಟ್ಟಿಯನ್ನೂ ಸಿದ್ದಪಡಿಸಿ, ಜಿಲ್ಲಾಡಳಿತಗಳ ಮೂಲಕ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಕಳುಹಿಸಲಾಗಿದೆ.

ಈಗಿರುವ ಮಾಹಿತಿ ಪ್ರಕಾರ ಹಿಂದಿನ ಸರಕಾರದ ಅವಧಿಯಲ್ಲಿ ಆಯ್ಕೆಯಾಗಿರುವ ವಿಶೇಷ ವರ್ಗಗಳ ಸುಮಾರು 53 ಸಾವಿರ ಫ‌ಲಾನುಭವಿಗಳ ಪಟ್ಟಿಯನ್ನು ರಾಜ್ಯ ಸರಕಾರ ರದ್ದುಪಡಿಸಿದ್ದು, ಹೊಸದಾಗಿ ಮತ್ತೆ ಫ‌ಲಾನುಭವಿಗಳ ಪಟ್ಟಿ ಸಿದ್ಧಪಡಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲು ರಾಜೀವ್‌ ಗಾಂಧಿ ವಸತಿ ನಿಗಮ ತೀರ್ಮಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಆಯ್ಕೆಯಾದವರ ಪಟ್ಟಿಯನ್ನು ನಿಗದಿತ ಸಮಯದಲ್ಲಿ ಜಿಲ್ಲಾಡಳಿತಗಳು ನಿಗಮಕ್ಕೆ ಸಲ್ಲಿಸದೆ ಇರುವುದರಿಂದ ಹಾಗೂ ಆಯ್ಕೆಯಾದ ಫ‌ಲಾನುಭವಿಗಳು ಮನೆ ನಿರ್ಮಿಸಿಕೊಳ್ಳದೆ ಇರುವುದರಿಂದ ಹೊಸ ಫ‌ಲಾನುಭವಿಗಳ ಪಟ್ಟಿ ಸಿದ್ಧಪಡಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮನೆ ಪಡೆಯಲು ಹಿಂದೇ ಟು
ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಎಸ್ಸಿ, ಎಸ್ಟಿ ಹಾಗೂ ಸಾಮಾನ್ಯ ವರ್ಗಗಳ ಫ‌ಲಾನುಭವಿಗಳಿಗೆ ನೀಡುವ ಅನುದಾನದಲ್ಲಿ ವ್ಯತ್ಯಾಸವಿದ್ದು, ವಿಶೇಷ ವರ್ಗಗಳ ಫ‌ಲಾನುಭವಿಗಳಲ್ಲಿ ಎಸ್ಸಿ, ಎಸ್ಟಿ ಹಾಗೂ ಸಾಮಾನ್ಯ ವರ್ಗಗಳಿಗೂ ಒಂದೇ ರೀತಿಯ ಅನುದಾನ ನೀಡಲಾಗುತ್ತದೆ. ಹೀಗಾಗಿ ಈ ವರ್ಗದಲ್ಲಿ ಮನೆಗಳನ್ನು ತೆಗೆದುಕೊಳ್ಳಲು ಫ‌ಲಾನುಭವಿಗಳು ಹಿಂದೇಟು ಹಾಕುತ್ತಾರೆಂಬ ಅಭಿಪ್ರಾಯ ನಿಗಮದಲ್ಲಿದೆ.

– ಶಂಕರ ಪಾಗೋಜಿ

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.