28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯ ಎಸ್ಸಿ-ಎಸ್ಟಿ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆ
Team Udayavani, May 21, 2022, 1:56 AM IST
ಬೆಂಗಳೂರು: ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28,000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರಗಿದ ಅನುಸೂಚಿತ ಜಾತಿ- ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಹಾಗೂ ಎಷ್ಟು ಬಾಕಿ ಇದೆ ಎನುವುದನ್ನು ಸಭೆಯಲ್ಲಿ ಪರಿಶೀಲಿಸಲಾಗಿದೆ. ಕೆಲವು ಯೋಜನೆಗಳಿಗೆ ಮಾತ್ರ ಬದಲಾವಣೆ ಮಾಡಿ ಉಳಿದುದಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ.ಗಳನ್ನು ಹೆಚ್ಚಿಸಲಾಗಿದೆ. ಕೃಷಿ ಇಲಾಖೆಗಿದ್ದ 851 ಕೋಟಿ ರೂ. ಅನುದಾನವನ್ನು 1,061 ಕೋಟಿ ರೂ.ಗೆ, ತೋಟಗಾರಿಕೆ ಇಲಾಖೆಯ 142 ಕೋ. ರೂ. ಅನುದಾನವನ್ನು 187 ಕೋಟಿ ರೂ.ಗಳಿಗೆ, ಆರೋಗ್ಯ ಇಲಾಖೆಗಿದ್ದ 899 ಕೋಟಿ ರೂ.ಗಳನ್ನು 1,300 ಕೋಟಿ ರೂ.ಗಳಿಗೆ ಏರಿಸಲಾಗಿದೆ ಎಂದರು.
ಸಹಕಾರ ಇಲಾಖೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ. ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿಗಳ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ 2,900 ಕೋಟಿ ರೂ.ಗಳಿದ್ದ ಅನುದಾನವನ್ನು ಈ ಬಾರಿ 3,748 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಕೌಶಲಾಭಿವೃದ್ಧಿಗೆ 180 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 9,000 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿ ಶಾಸಕರಿಗೆ ಒಂದು ಕೋಟಿ ರೂ.ಗಳನ್ನು ನೀಡಲಾಗುವುದು ಎಂದರು.
2022- 23 ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಕ್ರಿಯಾ ಯೋಜ ನೆಗೆ ಅನುಮೋದನೆ ನೀಡಲಾಯಿತು. ಸಚಿವರಾದ ಮಾಧುಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
ಮೂರು ತಿಂಗಳಲ್ಲಿ ಅನುದಾನ ಬಳಕೆಗೆ ಸೂಚನೆ
ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅಗಸ್ಟ್ ತಿಂಗಳ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ. ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಶಾಸನಬದ್ಧ ಅನುದಾನ ಆ ಸಮುದಾಯಗಳಿಗೆ ಮಾತ್ರ ಬಳಕೆಯಾಗ ಬೇಕು ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪ್ರಮುಖ ಸೂಚನೆಗಳು
– ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡಲು ಹೆಚ್ಚಿನ ಆದ್ಯತೆ ನೀಡುವುದು.
– ಫೆಲೋಶಿಪ್ / ಲಾಪ್ ಟಾಪ್ ವಿತರಣೆಗೆ ಆದ್ಯತೆ.
– ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಗಳಡಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅತಿ ಹೆಚ್ಚಿನ ಆದ್ಯತೆ ನೀಡುವುದು.
ಇಂದಿನ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳಿಗೆ ಆದೇಶ ಹೊರಡಿಸಿ ಆಗಸ್ಟ್ 15ರೊಳಗೆ ಎಲ್ಲ ವೈಯಕ್ತಿಕ ಯೋಜನೆಗಳಿಗೆ ಚಾಲನೆ ನೀಡುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.