Actor Darshan: ಜೈಲಿನಲ್ಲಿ ರಾಜಾರೋಷ; ದರ್ಶನ್ ಸೇರಿ ಹಲವರ ವಿರುದ್ಧ 3 ಪ್ರತ್ಯೇಕ FIR
Team Udayavani, Aug 26, 2024, 3:16 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ(Parappana Agrahara Prison) ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ರಾಜಾರೋಷವಾಗಿ ಜೈಲಿನಲ್ಲಿರುವ ಫೋಟೋ ,ವಿಡಿಯೋ ವೈರಲ್ ಆಗುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಜೈಲಿನಲ್ಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಒಂದು ಕೈಯಲ್ಲಿ ಸಿಗರೇಟ್ ಇನ್ನೊಂದು ಕೈಯಲ್ಲಿ ಕಾಫಿ ಕಪ್ ಹಿಡಿದುಕೊಂಡು ಇತರೆ ಆರೋಪಿಗಳೊಂದಿಗೆ ಜೈಲಿನ ಆವರಣದಲ್ಲಿ ಆರಾಮವಾಗಿ ದರ್ಶನ್ ಕೂತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಲೋಪವೆಸಗಿದ 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಈ ಫೋಟೋ ಹಾಗೂ ಸಿಗರೇಟ್ ವಿಚಾರಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್ಐಆರ್ (FIR) ದಾಖಲಾಗಿದೆ. ಜೈಲು ಅಧೀಕ್ಷರ ದೂರನ್ನು ಆಧರಿಸಿ ಮೂರು ಎಫ್ ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: Darshan Viral Photo: ದರ್ಶನ್ ಜೈಲಿನಲ್ಲಿನ ಸಿಗರೇಟ್ ಫೋಟೋ ಫೇಕ್.. ನಂದಕಿಶೋರ್
ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ನಾಗರಾಜ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಸಿಗರೇಟ್ ಕೊಟ್ಟಿದ್ದಕ್ಕೆ ಮೊದಲ ಎಫ್ ಐಆರ್ ದಾಖಲಾಗಿದ್ದು,ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ ಎರಡನೇ ಎಫ್ ಐಆರ್ ದಾಖಲಿಸಲಾಗಿದೆ. ಇನ್ನು ಮೂರನೇ ಎಫ್ಐಆರ್ ಸಿಸಿಬಿ ದಾಳಿ ವೇಳೆ ಬಾಕ್ಸ್ ತೆಗೆದುಕೊಂಡು ಹೋಗಿದ್ದಕ್ಕೆ ದಾಖಲಾಗಿದೆ.
ಮೂರು ಪ್ರಕರಣದಲ್ಲಿ ದರ್ಶನ್ ಅವರನ್ನು ಆರೋಪಿಯನ್ನಾಗಿ ಉಲ್ಲೇಖ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.