ಕೋವಿಡ್ 19 ಸೋಂಕು: ನೌಕರರಿಗೆ 30 ಲ. ರೂ. ವಿಮೆ


Team Udayavani, Aug 8, 2020, 6:59 AM IST

ಕೋವಿಡ್ 19 ಸೋಂಕು: ನೌಕರರಿಗೆ 30 ಲ. ರೂ. ವಿಮೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಸೋಂಕು ತಗಲಿ ಮೃತಪಟ್ಟ ಸರಕಾರಿ ಅಧಿಕಾರಿ ಮತ್ತು ಸಿಬಂದಿ ಕುಟುಂಬಕ್ಕೆ 30 ಲಕ್ಷ ರೂ. ವಿಮಾ ಪರಿಹಾರ ನೀಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈವರೆಗೆ ಕೋವಿಡ್ 19 ಸೇನಾನಿಗಳು ಎಂದು ಉಲ್ಲೇಖಗೊಂಡವರಿಗೆ ಮಾತ್ರ ಈ ಸೌಲಭ್ಯವಿತ್ತು.

ಇನ್ನು ಮುಂದೆ ಕೋವಿಡ್ 19 ನಿಯಂತ್ರಣದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬಂದಿಯ ಕುಟುಂಬಕ್ಕೆ ಇದು ಅನ್ವಯವಾಗಲಿದೆ.

ಕೋವಿಡ್ 19 ನಿಯಂತ್ರಣದಲ್ಲಿ ಭಾಗಿಯಾದ ಸಂದರ್ಭದಲ್ಲಿ ಸರಕಾರಿ ಅಧಿಕಾರಿಗಳು ಸೋಂಕಿಗೆ ಸಿಲುಕಿದರೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ.

ಡಾ| ಯತೀಂದ್ರ ಅವರಿಗೆ ಸೋಂಕು
ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ, ಶಾಸಕ ಡಾ| ಯತೀಂದ್ರ ಅವರಿಗೂ ಕೋವಿಡ್ 19 ಸೋಂಕು ತಗಲಿದೆ. ತನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗುವಂತೆ  ಅವರು ಟ್ವಿಟರ್‌ನಲ್ಲಿ  ಮನವಿ ಮಾಡಿಕೊಂಡಿದ್ದಾರೆ.

3 ಸಾವಿರ ತಲುಪಿದ ಸಾವಿನ ಸಂಖ್ಯೆ
ರಾಜ್ಯದಲ್ಲಿ ಶುಕ್ರವಾರ 101 ಮಂದಿ  ಸೋಂಕಿತರು  ಮೃತಪಟ್ಟಿದ್ದು, ಆ ಮೂಲಕ ಕೋವಿಡ್ 19 ಸೋಂಕಿಗೆ ಬಲಿಯಾದವರ ಸಂಖ್ಯೆ 3,000 ಗಡಿಗೆ ಬಂದು ನಿಂತಿದೆ.

ಜತೆಗೆ ಹೊಸದಾಗಿ 6,670 ಮಂದಿಗೆ ಸೋಂಕು ತಗುಲಿದ್ದು, 3,951 ಮಂದಿ ಗುಣಮುಖರಾಗಿದ್ದಾರೆ.  ಈಗ ಒಟ್ಟಾರೆ ಸೋಂಕು ಪ್ರಕರಣಗಳು 1,64,924ಕ್ಕೆ, ಮೃತರ ಸಂಖ್ಯೆ 2998ಕ್ಕೆ ಹಾಗೂ ಗುಣಮುಖರಾದವರ ಸಂಖ್ಯೆ 84,232ಕ್ಕೇರಿದೆ. ಸದ್ಯ 77,686 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ  678 ಮಂದಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ನಿತ್ಯ ಸರಾಸರಿ 94 ಮಂದಿ ಮೃತಪಟ್ಟಿದ್ದು, ರಾಜ್ಯದ ಮರಣ ದರ ಶೇ. 1.81ರಷ್ಟಿದೆ. ಸೋಂಕಿತರ ಸಾವಿನಲ್ಲಿ ದೇಶದಲ್ಲಿಯೇ ನಾಲ್ಕನೇ ಸ್ಥಾನದಲ್ಲಿದೆ. ಶುಕ್ರವಾರ 23 ಸಾವಿರ ರ್ಯಾಪಿಡ್‌ ಆ್ಯಂಟಿಜೆನ್‌, 20 ಸಾವಿರ ಆರ್‌ಟಿಪಿಸಿಆರ್‌ ಸೇರಿ ಒಟ್ಟು 43,553 ಸೋಂಕು ಪರೀಕ್ಷೆಗಳು ನಡೆದಿದ್ದು, 6,670 ಪಾಸಿಟಿವ್‌ ವರದಿಯಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 2,147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಳ್ಳಾರಿ 684, ಬೆಳಗಾವಿ 390, ಕಲಬುರಗಿ, ಉಡುಪಿ, ಧಾರವಾಡ ಹಾಗೂ ಮೈಸೂರು ನಾಲ್ಕು ಜಿಲ್ಲೆಗಳಲ್ಲಿ ತಲಾ 200ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಇನ್ನು ಬೆಂಗಳೂರಿನಲ್ಲಿ 1,131, ಬಳ್ಳಾರಿ 627, ಕಲಬುರಗಿ 203 ಸಹಿತ ಒಟ್ಟು 3,951 ಮಂದಿ ಗುಣಮುಖರಾಗಿದ್ದಾರೆ.

ಮೂರು ಲಕ್ಷ ಗಡಿ ದಾಟಿದ ರ್ಯಾಪಿಡ್‌ ಪರೀಕ್ಷೆ
ತ್ವರಿತವಾಗಿ ಸೋಂಕು ಪತ್ತೆಗೆ ರಾಜ್ಯದಲ್ಲಿ ಜುಲೈ 20ರಿಂದ ರ್ಯಾಪಿಡ್‌ ಆ್ಯಂಟಿ ಜೆನ್‌ ಪರೀಕ್ಷೆ ಆರಂಭಿಸಲಾಗಿದ್ದು, ಮೂರು ವಾರಗಳಲ್ಲಿ ಒಟ್ಟು 3,13,737 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಎಂದಿನಂತೆ ಆರ್‌ಟಿಪಿಸಿಆರ್‌ ಪರೀಕ್ಷೆಗಳು ನಡೆಯುತ್ತಿದ್ದು, ಸದ್ಯ ಒಟ್ಟಾರೆ ಪರೀಕ್ಷೆಗಳ ಸಂಖ್ಯೆ 16.2 ಲಕ್ಷಕ್ಕೆ ತಲುಪಿವೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.