ಲಿಂಗಾಯತ ಒಪ್ಪದ ಸ್ವಾ ಮೀಜಿಗಳು ಪೀಠ ಬಿಡಲಿ


Team Udayavani, Aug 11, 2017, 11:15 AM IST

Swamiji.jpg

ಬೆಂಗಳೂರು: ಬಸವಣ್ಣನೇ ಲಿಂಗಾಯತ ಧರ್ಮದ ಸಂಸ್ಥಾಪಕ, ವಚನಗಳೇ ಧರ್ಮಗ್ರಂಥ’ ಇದನ್ನು ಮಠಾಧೀಶರೂ ಸೇರಿದಂತೆ ಲಿಂಗಾಯತ ಸಮುದಾಯ ದವರೆಲ್ಲರೂ ಒಪ್ಪಬೇಕು, ಸಹಮತ ವ್ಯಕ್ತಪಡಿಸದ ಸ್ವಾಮೀಜಿಗಳು ಪೀಠ ತ್ಯಾಗ ಮಾಡಬೇಕು ಎನ್ನುವ ಖಡಕ್‌
ನಿರ್ಧಾರಕ್ಕೆ ಬಂದಿರುವ ಲಿಂಗಾಯತ ಸಮುದಾಯದ ಪ್ರಮುಖರು ವೀರಶೈವ ಹೊರತುಪಡಿಸಿ ಲಿಂಗಾಯತ ಸಮುದಾಯದ ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಹೋರಾಡುವ ನಿರ್ಣಯ ಕೈಗೊಂಡಿದ್ದಾರೆ.

ಗುರುವಾರ ನಡೆದ ಮಠಾಧೀಶರ, ರಾಜಕಾರಣಿಗಳ, ಸಮಾಜದ ಪ್ರಮುಖರ ಸಭೆಯಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು. ಸಭೆಯ ನಿರ್ಣಯಗಳನ್ನು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಂಡಿಸಿದರು. ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವರಾದ ಎ. ಬಿ. ಮಾಲಕರೆಡ್ಡಿ, ಎಸ್‌.ಎಸ್‌. ಪಾಟೀಲ ಅನುಮೋದನೆ ನೀಡಿದರು. 

ಪ್ರಮುಖ ನಿರ್ಣಯಗಳು
1)ಬಸವಣ್ಣ ಮತ್ತು ಬಸವಾದಿ ಶರಣರು ಸ್ಥಾಪಿಸಿದ ಐತಿಹಾಸಿಕ ಲಿಂಗಾಯತ ಧರ್ಮ, ಸಿದ್ದಾಂತ ಮತ್ತು ವಚನಗಳನ್ನು ವೀರಶೈವದ ಹೆಸರಿನಲ್ಲಿ ಬಳಸಿಕೊಳ್ಳಬಾರದು.

2)ಬಸವಾದಿ ಶರಣರ ತತ್ವಗಳ ಪ್ರಚಾರ ಮತ್ತು ಪ್ರಚಾರಕ್ಕಾಗಿ ಸ್ಥಾಪಿಸಲಾದ ವಿರಕ್ತ ಮಠಗಳಲ್ಲಿನ ಮಠಾಧೀಶರು, ಲಿಂಗಾಯತ ಹೆಸರು ಮತ್ತು ತತ್ವ ಸಿದ್ಧಾಂತವನ್ನು  ಯುದ್ಧೋಪಾದಿಯಲ್ಲಿ ತಿಳಿಸಬೇಕು. ಬಸವ ತತ್ವ ಪ್ರಚಾರ ಮಾಡದಿದ್ದರೆ, ಅಂತವರು ಪೀಠ ಬಿಡಬೇಕು.

3)ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವುದು.

4)ಲಿಂಗಾಯತವನ್ನು ವಿಶ್ವಗುರು ಬಸವಣ್ಣ 12 ನೇ ಶತಮಾನದಲ್ಲಿಯೇ ಸ್ಥಾಪಿಸಿದರೆಂದು ಮತ್ತು ವಚನಗಳೇ ಧರ್ಮಗ್ರಂಥಗಳೆಂದು ಒಪ್ಪುವುದು.

5)ಅಖೀಲ ಭಾರತ ವೀರಶೈವ ಮಹಾಸಭೆಯು 1941 ರಲ್ಲಿ ದಾವಣಗೆರೆಯಲ್ಲಿ ನಡೆಸಿದ ಅಧಿವೇಶನದಲ್ಲಿ ‘ಅಖೀಲ ಭಾರತ ಲಿಂಗಾಯತ ಮಹಾಸಭೆ’ ಎಂದು ಹೆಸರು ಬದಲಾಯಿಸಲು ನಿರ್ಧರಿಸಿತ್ತು. ಮತ್ತು ಲಿಂಗಾಯತ ಸ್ವತಂತ್ರ ಧರ್ಮವೆಂದು ಘೋಷಣೆ ಮಾಡಿತ್ತು. ಅದು ನನೆಗುದಿಗೆ ಬಿದ್ದಿರುವುದರಿಂದ ಈಗ “ಅಖೀಲ ಭಾರತ ವೀರಶೈವ ಮಹಾಸಭೆ’ಗೆ ಅಖೀಲ ಭಾರತ ಲಿಂಗಾಯತ ಮಹಾಸಭೆ’ ಎಂದು ನಾಮಕರಣ ಮಾಡಲು ಒತ್ತಾಯಿಸುವುದು. 

ಮೂರೂ ಮನವಿ ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಮಠಾಧೀಶರು ಮತ್ತು ಪ್ರಮುಖ ರಾಜಕೀಯ ನಾಯಕರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾಡುವ ಕುರಿತು ಮೂರು ಪ್ರತ್ಯೇಕ ಮನವಿಗಳು ಬಂದಿವೆ. ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆಗೆ ಮನವಿ ಬಂದಿದೆ. ನಂತರ ಮಾತೆ ಮಹಾದೇವಿ ವೀರಶೈವ ಹೊರತುಪಡಿಸಿ ಲಿಂಗಾಯತ ಧರ್ಮಕ್ಕೆ ಮಾತ್ರ ಪ್ರತ್ಯೇಕ ಸ್ಥಾನ ಮಾನ ನೀಡಬೇಕೆಂದು ಮನವಿ
ಮಾಡಿದ್ದಾರೆ. ಲಿಂಗಾಯತ ಸಮಾಜದ ಪ್ರಮುಖರು, ಮಠಾಧೀಶರು, ಸಚಿವರು ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡಲು ಶಿಫಾರಸು ಮಾಡುವಂತೆ ಈಗ ಮತ್ತೂಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಮೂರೂ ಮನವಿಗಳ ಕುರಿತು ಕಾನೂನಾತ್ಮಕವಾಗಿ, ಧಾರ್ಮಿಕವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸಿರಿಗೆರೆ ಸ್ವಾಮೀಜಿ ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕೆಂದಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದ ಸ್ವಾಮೀಜಿ ಬೇರೆ ಕಾರ್ಯಕ್ರಮವಿದ್ದ ಕಾರಣ ಬಂದಿಲ್ಲ. ಅವರೆಲ್ಲ ನಮ್ಮೊಂದಿಗಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.