40 ಪರ್ಸೆಂಟ್‌ ಪ್ರಕರಣ: ವಿಚಾರಣ ಆಯೋಗ ರಚನೆ

ಮೂರು ತಿಂಗಳುಗಳಲ್ಲಿ ತನಿಖಾ ವರದಿ ಸಲ್ಲಿಸಲು ಸರಕಾರದ ಅಪೇಕ್ಷೆ

Team Udayavani, Aug 27, 2023, 6:50 AM IST

40 ಪರ್ಸೆಂಟ್‌ ಪ್ರಕರಣ: ವಿಚಾರಣ ಆಯೋಗ ರಚನೆ

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ದೂರಿನ ಅನ್ವಯ ಹಿಂದಿನ ಸರಕಾರದ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಮಾಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ರಚಿಸಿದ್ದ ತನಿಖಾ ಸಮಿತಿಯನ್ನು ರದ್ದುಪಡಿಸಿರುವ ಸರಕಾರವು ಅವರ ನೇತೃತ್ವದಲ್ಲೇ ವಿಚಾರಣ ಆಯೋಗವನ್ನು ರಚಿಸಿ ಆದೇಶಿಸಿದೆ.

ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಪ್ಯಾಕೇಜ್‌ ಪದ್ಧತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್‌ ಪ್ರಕ್ರಿಯೆ ಇತ್ಯಾದಿಗಳಲ್ಲಿ ಶೇ. 40ಕ್ಕಿಂತಲೂ ಹೆಚ್ಚಿನ ಲಂಚಗುಳಿತನ ನಡೆಯುತ್ತಿರುವುದಾಗಿ ಆರೋಪಿಸಿದ್ದ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ, ಕಾಮಗಾರಿ ಆರಂಭಿಸುವ ಮೊದಲು ಶೇ. 25ರಿಂದ 30ರಷ್ಟು ಲಂಚವನ್ನು ಕೆಲವು ಜನಪ್ರತಿನಿಧಿಗಳಿಗೆ ನೀಡಬೇಕಿದೆ ಹಾಗೂ ಬಾಕಿ ಬಿಲ್‌ಗ‌ಳ ತೀರುವಳಿಗೆ ಶೇ. 5ರಿಂದ 6ರಷ್ಟು ಲಂಚ ಕೇಳಲಾಗುತ್ತಿದೆ ಎಂದು ಆಪಾದಿಸಿದ್ದರು.

ಇದೆಲ್ಲವನ್ನೂ ತನಿಖೆಗೊಳಪಡಿಸಲು ನ್ಯಾ| ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಇದಕ್ಕೆ ಆಯೋಗದ ಮಾನ್ಯತೆ ಬೇಕೆಂಬುದನ್ನು ಮನ ಗಂಡ ಸರಕಾರ ಈಗ ವಿಚಾರಣ ಆಯೋಗ ರಚಿಸಿ ಆದೇಶಿಸಿದ್ದು, ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಹಾಗೂ ಸಣ್ಣ ನೀರಾವರಿ ಇಲಾಖೆಗಳನ್ನು ತನಿಖೆಯ ವ್ಯಾಪ್ತಿಗೆ ಸೇರಿಸಿದೆ.

ಟೆಂಡರ್‌ ಪ್ರಕ್ರಿಯೆ, ಪ್ಯಾಕೇಜ್‌ ಪದ್ಧತಿ, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರದ ಕುರಿತು ಸ್ಥಳ ಹಾಗೂ ದಾಖಲಾತಿ ಪರಿಶೀಲಿಸಿ, ಲೋಪದೋಷಗಳ ಮಾಹಿತಿ ಮತ್ತು ಆರೋಪಿಗಳ ಸ್ಪಷ್ಟ ಗುರುತಿಸುವಿಕೆ ಮೂಲಕ ಪರಿಪೂರ್ಣ ತನಿಖೆ ನಡೆಸಬೇಕು.

ದೂರುದಾರರು ನೀಡಿರುವ ಎಲ್ಲ ಮನವಿ, ದೂರು ಅರ್ಜಿಗಳಲ್ಲಿರುವ ಅಂಶಗಳನ್ನೂ ತನಿಖೆ ಮಾಡಬೇಕು ಎಂದು ಸೂಚಿಸಲಾಗಿದೆ.

ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರು ವುದು, ಅವುಗಳ ಗುಣಮಟ್ಟ, ಅನುಸೂಚಿ ದರಗಳ ಅನ್ವಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗಿದೆಯೇ- ಇಲ್ಲವೇ, ಅನುಮೋದನೆ ನೀಡಿದ ಸಕ್ಷಮ ಪ್ರಾಧಿಕಾರಿ, ನಿರ್ವಹಿಸದ ಕಾಮಗಾರಿಗೂ ಬಿಲ್‌ ಪಾವತಿಸಿದೆಯೇ, ಹೆಚ್ಚುವರಿ ಬಿಲ್‌ ಪಾವತಿ ಮಾಡಲಾಗಿದೆಯೇ, ಕೆಲವೇ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವಂತೆ ಟೆಂಡರ್‌ ಪ್ರಕ್ರಿಯೆ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ಪತ್ತೆ ಹಚ್ಚಬೇಕು ಹಾಗೂ ಪರಿಶೀಲನೆ ವೇಳೆ ಕಂಡುಬರುವ ಇನ್ನಾéವುದೇ ಗಂಭೀರ ವಿಷಯಗಳನ್ನು ವಿಚಾರಣ ಆಯೋಗ ಪರಾಮರ್ಶಿಸುವಂತೆ ಕೋರಿದೆ.

ತನಿಖೆ ನಡೆಸಲು ಎಲ್ಲ ರೀತಿಯ ಅಧಿಕಾರವನ್ನು ಆಯೋಗಕ್ಕೆ ನೀಡಿದ್ದು, ವಿಚಾರಣೆಗೆ ಸಹಕರಿಸುವಂತೆ ಎಲ್ಲ ಇಲಾಖೆಗಳಿಗೂ ಸೂಚಿಸಲಾಗಿದೆ. ಸಿಬಂದಿ, ಸಾಮಗ್ರಿ, ವಾಹನ, ಕಚೇರಿ ಇತ್ಯಾದಿ ಅಗತ್ಯ ಸಲಕರಣೆಗಳನ್ನು ಒದಗಿಸಿ, ನಿಯಮಾನುಸಾರ ಭತ್ತೆ ಸೌಲಭ್ಯ ಕಲ್ಪಿಸುವಂತೆಯೂ ಆದೇಶಿಸಿದೆ. ಮೂರು ತಿಂಗಳುಗಳಲ್ಲಿ ವರದಿ ಸಲ್ಲಿಸುವಂತೆಯೂ ಅಪೇಕ್ಷಿಸಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.