
ದಿಲ್ಲಿಯಿಂದ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿ ಮಡಿಲು ಸೇರಿದ 5 ವರ್ಷದ ವಿಹಾನ್!
ಹಳದಿ ಬಣ್ಣದ ಬಟ್ಟೆ ತೊಟ್ಟಿದ್ದ ವಿಹಾನ್ ಮುಖದ ಮಾಸ್ಕ್ ಕೂಡಾ ಹಳದಿ ಬಣ್ಣದ್ದಾಗಿತ್ತು.
Team Udayavani, May 25, 2020, 4:05 PM IST

ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದು, ಇದೀಗ ಎರಡು ತಿಂಗಳ ಬಳಿಕ ದೇಶಾದ್ಯಂತ ವಿಮಾನ ಯಾನ ಪುನರಾರಂಭಗೊಂಡಿದ್ದು, ಸೋಮವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೃದಯಸ್ಪರ್ಶಿ ಘಟನೆಯೊಂದಕ್ಕೆ ಸಾಕ್ಷಿಯಾಯಿತು!
ಲಾಕ್ ಡೌನ್ ನಿಂದಾಗಿ ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ಸಿಲುಕಿಕೊಂಡಿದ್ದ ಐದು ವರ್ಷದ ಪುಟಾಣಿ ವಿಹಾನ್ ಸೋಮವಾರ ಏಕಾಂಗಿಯಾಗಿ ವಿಮಾನವನ್ನೇರಿ ಬೆಂಗಳೂರಿಗೆ ಬಂದು ಮೂರು ತಿಂಗಳ ಬಳಿಕ ತಾಯಿಯ ಮಡಿಲು ಸೇರಿರುವ ಘಟನೆ ನಡೆದಿದೆ.
ವಿಹಾನ್ ಯಾನ ದೆಹಲಿ ಟು ಬೆಂಗಳೂರು:
ನನ್ನ ಐದು ವರ್ಷದ ಮಗ ವಿಹಾನ್ ದಿಲ್ಲಿಯಿಂದ ಒಬ್ಬನೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಮೂರು ತಿಂಗಳ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾನೆ ಎಂದು ತಾಯಿ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದರು. ವಿಹಾನ್ ಸ್ಪೆಷಲ್ ಕೆಟಗರಿಯಲ್ಲಿ ಪ್ರಯಾಣಿಕನಾಗಿ ಆಗಮಿಸಿದ್ದ. ಹಳದಿ ಬಣ್ಣದ ಬಟ್ಟೆ ತೊಟ್ಟಿದ್ದ ವಿಹಾನ್ ಮುಖದ ಮಾಸ್ಕ್ ಕೂಡಾ ಹಳದಿ ಬಣ್ಣದ್ದಾಗಿತ್ತು. ಕೈಯಲ್ಲಿ ಸ್ಪೆಷಲ್ ಕೆಟಗರಿ ಪ್ಲೇಕಾರ್ಡ್ ಹಿಡಿದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ.
ದೆಹಲಿಯಿಂದ ಆಗಮಿಸಿದ್ದ ಹಲವು ವಿಮಾನದಲ್ಲಿದ್ದ ನೂರಾರು ಪ್ರಯಾಣಿಕರಲ್ಲಿ ವಿಹಾನ್ ಶರ್ಮಾ ಕೂಡಾ ಒಬ್ಬನಾಗಿದ್ದ. ಕೊನೆಗೂ ಮೂರು ತಿಂಗಳ ಬಳಿಕ ದಿಲ್ಲಿಯಿಂದ ಒಬ್ಬಂಟಿಯಾಗಿ ಪ್ರಯಾಣಿಸಿ ಬೆಂಗಳೂರಿನಲ್ಲಿ ತಾಯಿಯ ಮಡಿಲು ಸೇರಿದ್ದಾನೆ.
ಶಾಲಾ ರಜೆಯ ಹಿನ್ನೆಲೆಯಲ್ಲಿ ವಿಹಾನ್ ಶರ್ಮಾ ದೆಹಲಿಯಲ್ಲಿರುವ ಅಜ್ಜ, ಅಜ್ಜಿ ಮನೆಗೆ ತೆರಳಿದ್ದ. ಆದರೆ ಕೋವಿಡ್ 19 ವೈರಸ್ ನಿಂದ ದಿಢೀರ್ ಎಂದು ಲಾಕ್ ಡೌನ್ ಘೋಷಣೆಯಾಗಿದ್ದರಿಂದ ವಿಹಾನ್ ಕಳೆದ ಎರಡು ತಿಂಗಳಿನಿಂದ ದಿಲ್ಲಿಯಲ್ಲಿಯೇ ವಾಸ್ತವ್ಯ ಹೂಡುವಂತಾಗಿತ್ತು. ಇದೀಗ ಇಂದು ವಿಮಾನಯಾನ ಆರಂಭಗೊಂಡ ಹಿನ್ನೆಲೆಯಲ್ಲಿ ವಿಹಾನ್ ಬೆಂಗಳೂರಿಗೆ ಆಗಮಿಸಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.