Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

ಚಾಮರಾಜನಗರದಲ್ಲಿ 25, ಕೊಡಗಿನಲ್ಲಿ 22 ಕಾಡಾನೆ ಮೃತ

Team Udayavani, Oct 6, 2024, 6:40 AM IST

AANE 2

ಚಾಮರಾಜನಗರ: ಆನೆಗಳ ಆವಾಸಕ್ಕೆ ಪ್ರಶಸ್ತವಾದ ಅರಣ್ಯಗಳನ್ನು ಹೊಂದಿರುವ ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಮೃತಪಟ್ಟರೆ, 9 ಅಸ್ವಾಭಾವಿಕ ಕಾರಣಗಳಿಂದ ಸತ್ತಿವೆ.

ಚಾಮರಾಜನಗರ ಜಿಲ್ಲೆಯಲ್ಲಿ ಈ ವರ್ಷ ಆನೆಗಳ ಸಾವಿನ ಪ್ರಮಾಣ ಹೆಚ್ಚಾಗಿದ್ದು, 25 ಆನೆಗಳು ಸಹಜ ಸಾವಿನಿಂದ ಮೃತಪಟ್ಟಿವೆ. (ಗುರುವಾರ ಹೊಸಪುರದಲ್ಲಿ ಕಂದಕಕ್ಕೆ ಬಿದ್ದು ಆನೆಯೊಂದು ಸತ್ತಿರುವುದು ಹೊರತುಪಡಿಸಿ). ಕೊಡಗಿನಲ್ಲಿ 22, ಮೈಸೂರು ಜಿಲ್ಲೆಯಲ್ಲಿ 4, ಚಿಕ್ಕಮಗಳೂರು 5, ದ.ಕನ್ನಡ, ಉ.ಕನ್ನಡ, ಬೆಂಗಳೂರು ಜಿಲ್ಲೆಯಲ್ಲಿ ತಲಾ 1 ಆನೆ ಮೃತಪಟ್ಟಿದೆ.

ರಾಜ್ಯದ ಮಟ್ಟಿಗೆ ಚಾಮರಾಜನಗರ ಜಿಲ್ಲೆಯಲ್ಲೇ ಅತಿ ಹೆಚ್ಚು ಆನೆಗಳು ವಾಸಿಸುತ್ತಿವೆ. ಇಲ್ಲಿ ಬಂಡೀಪುರ, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ, ಕಾವೇರಿ ಸೇರಿದಂತೆ ಒಟ್ಟು ನಾಲ್ಕು ಸಂರಕ್ಷಿತ ಅರಣ್ಯಗಳಿವೆ. ಈ ಸಾಲಿನ ಗಣತಿ ಪ್ರಕಾರ ರಾಜ್ಯದ ಎಲ್ಲ ಅರಣ್ಯಗಳಲ್ಲಿ ಒಟ್ಟು 6,395 ಆನೆಗಳಿದ್ದು, ಇವುಗಳ ಪೈಕಿ 2,877 ಆನೆಗಳು ಚಾಮರಾಜನಗರ ಜಿಲ್ಲೆಯ ಅರಣ್ಯಗಳಲ್ಲಿವೆ. ಬಂಡೀಪುರ-1,116, ಮಲೆ ಮಹದೇಶ್ವರ-706, ಬಿಳಿಗಿರಿರಂಗನಾಥ-619, ಕಾವೇರಿ ವನ್ಯಜೀವಿ ತಾಣದಲ್ಲಿ 136 ಆನೆಗಳಿವೆ. ಮೈಸೂರು, ಕೊಡಗು ಜಿಲ್ಲೆಗೆ ವ್ಯಾಪಿಸಿರುವ ನಾಗರಹೊಳೆಯಲ್ಲಿ 831ಆನೆಗಳಿವೆ.

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಆನೆಗಳಿರುವುದರಿಂದ ವಯಸ್ಸಿನ ಕಾರಣ, ಕಾದಾಟದಿಂದ ಮೃತಪಡುವ ಪ್ರಕರಣಗಳೂ ಹೆಚ್ಚು.

ನಾಗರಹೊಳೆ ಶಿಬಿರದಲ್ಲಿ ಮೃತಪಟ್ಟ ಆನೆಗಳು
ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಅಂಬಾರಿ ಹೊತ್ತ ಬಲರಾಮ ಕಳೆದ ವರ್ಷದ ಫೆಬ್ರವರಿಯಲ್ಲಿ ಮೇಯಲು ಹೋಗುವಾಗ ಗುಂಡೇಟು ತಿಂದು ಮೃತಪಟ್ಟಿತ್ತು. ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿದ್ದ ಅಂಬಾರಿ ಹೊತ್ತ ಅರ್ಜುನ ಆನೆ ಕಳೆದ ವರ್ಷ ಹಾಸನ ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಹೋದಾಗ ಜೀವ ಕಳೆದುಕೊಂಡಿತು. ಕೆಲವು ತಿಂಗಳ ಹಿಂದೆಯಷ್ಟೇ ನಾಗರಹೊಳೆಯ ಬಳ್ಳೆ ಶಿಬಿರದಲ್ಲಿದ್ದ ಕುಮಾರಸ್ವಾಮಿ ಎಂಬ ಆನೆ ಕಾಣೆಯಾಗಿ ಶವವಾಗಿ ಪತ್ತೆಯಾಗಿತ್ತು. ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಕೃಷ್ಣ ಎನ್ನುವ ಆನೆ ಕೆಲ ದಿನಗಳ ಹಿಂದೆ ಮೃತಪಟ್ಟಿದೆ. ಈ ಆನೆಯನ್ನು ವರ್ಷದ ಹಿಂದೆಯಷ್ಟೇ ಸೆರೆ ಹಿಡಿದು ತರಲಾಗಿತ್ತು.

ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ ಸಂರಕ್ಷಿತ ಅರಣ್ಯ ಸೇರಿ 4 ಅರಣ್ಯಗಳಿದ್ದು, ಇಲ್ಲಿ ಅತಿ ಹೆಚ್ಚು ಆನೆಗಳು ಆವಾಸಸ್ಥಾನವಾಗಿರುವುದರಿಂದ ಸಹಜ ಸಾವಿನ ಪ್ರಕರಣಗಳು ಸಹ ಹೆಚ್ಚು. ಆನೆಗಳು ಮೃತಪಟ್ಟ ಅನೇಕ ದಿನಗಳ ಅನಂತರ ಪತ್ತೆಯಾಗಿರುವುದು ಸಮಸ್ಯೆಯನ್ನು ಎತ್ತಿ ತೋರಿಸಿದೆ.
-ಟಿ.ಹೀರಾಲಾಲ್‌,ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾ.ನಗರ ವೃತ್ತ

 ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.