![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 15, 2020, 1:42 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಅರಣ್ಯ ಹಾಗೂ ಕಂದಾಯ ಜಮೀನು ವಿಚಾರದ ಸಂಘರ್ಷ ತಪ್ಪಿಸಲು ಅರಣ್ಯ ಎಂದು ಪರಿಗಣಿಸಿದ (ಡೀಮ್ಡ್ ಫಾರೆಸ್ಟ್) 9.50 ಲಕ್ಷ ಹೆಕ್ಟೇರ್ ಪ್ರದೇಶದ ಪೈಕಿ 6 ಲಕ್ಷ ಹೆಕ್ಟೇರ್ ಕಂದಾಯ ಇಲಾಖೆಗೆ ವಾಪಸ್ ಪಡೆಯಲು ರಾಜ್ಯ ಸರಕಾರ ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ಸೋಮವಾರ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಕುರಿತು ಸುಪ್ರೀಂಕೋರ್ಟ್ಗೆ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆಗೆ ಪಡೆಯಲು ಉದ್ದೇಶಿಸಿರುವ 6 ಲಕ್ಷ ಹೆಕ್ಟೇರ್ ಹೊರತುಪಡಿಸಿ ಉಳಿದ 3.50 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ರೂಪದಲ್ಲಿ ಅರಣ್ಯ ಇಲಾಖೆಗೆ ಬಿಟ್ಟುಕೊಡ ಲಾಗುವುದು ಎಂದು ಹೇಳಿದರು.
ಈ ತೀರ್ಮಾನವು ಕೇವಲ ಕಂದಾಯ ಇಲಾಖೆಯಿಂದಲೇ ಅರಣ್ಯ ಇಲಾಖೆಗೆ ಹಸ್ತಾಂತರವಾಗಿದ್ದ ಡೀಮ್ಡ್ ಫಾರೆಸ್ಟ್ ಜಮೀನಿಗೆ ಮಾತ್ರ ಅನ್ವಯ. ಕಾಯ್ದಿಟ್ಟ (ರಿಸರ್ವ್ ಫಾರೆಸ್ಟ್) ಪ್ರದೇಶಕ್ಕೆ ಅನ್ವಯಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಡೀಮ್ಡ್ ಫಾರೆಸ್ಟ್ ಜಮೀನು ಮರು ಹಸ್ತಾಂತರ ಸಂಬಂಧ ಹಿಂದಿನ ಸರಕಾರದ ಅವಧಿಯಲ್ಲಿ ಕೈಗೊಂಡ ತೀರ್ಮಾನದಂತೆ ಈಗಾಗಲೇ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಅಡ್ವೊಕೇಟ್ ಜನರಲ್ ಅಭಿಪ್ರಾಯ ಪಡೆದು ಪರಿಷ್ಕೃತ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪರಿಷ್ಕೃತ ಪ್ರಮಾಣ ಪತ್ರ ಮಾನ್ಯವಾದರೆ ಹಲವು ದಶಕಗಳಿಂದ ಕಗ್ಗಂಟಾಗಿರುವ ಸಮಸ್ಯೆ ಬಗೆಹರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಸಹಿತ ಮಲೆನಾಡು ಭಾಗದಲ್ಲಿ ಮನೆ ಕಟ್ಟಿಕೊಂಡಿರುವ, ಉಳುಮೆ ಮಾಡುತ್ತಿರುವ ಬಡವರಿಗೆ ಅನುಕೂಲವಾಗಲಿದೆ. ಪ್ರವಾಹದಿಂದ ಮನೆ ಕಳೆದು ಕೊಂಡವರಿಗೂ ಮನೆ ನಿರ್ಮಿಸಿಕೊಡಲು ಸಹಕಾರಿಯಾಗಲಿದೆ ಎಂದರು. ಅರಣ್ಯ ಸಚಿವ ಆನಂದ್ ಸಿಂಗ್ ಉಪಸ್ಥಿತರಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.