Speaker U. T. Khader; ನಾಡಿದ್ದಿನಿಂದ 9 ದಿನ ವಿಧಾನ ಮಂಡಲದ ಅಧಿವೇಶನ

ಅತಿ ಹೆಚ್ಚು ಸಮಯ ಕಲಾಪದಲ್ಲಿ ಇರುವ ಸದಸ್ಯರಿಗೆ ಬಹುಮಾನ ; ಅತ್ಯುತ್ತಮ ಶಾಸಕರ ಆಯ್ಕೆಗೆ ಸಮಿತಿ ರಚನೆ

Team Udayavani, Jul 13, 2024, 6:55 AM IST

ನಾಡಿದ್ದಿನಿಂದ 9 ದಿನ ವಿಧಾನ ಮಂಡಲದ ಅಧಿವೇಶನ: ಸ್ಪೀಕರ್‌

ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನ ಜುಲೈ 15ರಿಂದ ಪ್ರಾರಂಭಗೊಳ್ಳಲಿದ್ದು, ಈ ಬಾರಿ ಶಾಸಕರು ಸದನದಲ್ಲಿ ಉಪಸ್ಥಿತರಿದ್ದ ಅವಧಿಯನ್ನು ತಂತ್ರಜ್ಞಾನ ಆಧರಿಸಿ ಲೆಕ್ಕ ಹಾಕಲಾಗುವುದು ಎಂದು ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಜುಲೈ 15ರಂದು ಬೆಳಗ್ಗೆ 11ಕ್ಕೆ ಪ್ರಾರಂಭವಾಗುತ್ತದೆ. ಕಳೆದ ಅಧಿವೇಶನದಲ್ಲಿ ಕಲಾಪಕ್ಕೆ ಬೇಗ ಹಾಜರಾಗುವ ಸದಸ್ಯರಿಗೆ ಬಹುಮಾನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಯಾರು ಎಷ್ಟು ಸಮಯ ಇದ್ದಾರೆ? ಎಷ್ಟು ಬಾರಿ ಎದ್ದು ಹೋದರು? ಕಡೆಯವರೆಗೆ ಇದ್ದವರು ಯಾರು? ಎಂಬುದನ್ನೂ ಗಣನೆಗೆ ತೆಗೆದುಕೊಳ್ಳುತ್ತೇವೆ. ತಂತ್ರಜ್ಞಾನ ಆಧರಿಸಿ ಈ ಅವಧಿ ಯನ್ನು ಲೆಕ್ಕ ಹಾಕುತ್ತೇವೆ ಎಂದು ಹೇಳಿದರು.

ಚೆಸ್‌ ಪಂದ್ಯಾವಳಿ
ಜುಲೈ 20ರಂದು ವಿಶ್ವ ಚೆಸ್‌ ದಿನಾಚರಣೆ ಇದೆ. ಈ ಹಿನ್ನೆಲೆಯಲ್ಲಿ ಶಾಸಕರು, ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ಚೆಸ್‌ ಪಂದ್ಯಾವಳಿ ಆಯೋಜಿಸಲಾಗಿದೆ. ಶಾಸಕರ ಕಪ್‌ ಹೆಸರಿನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಯಾರೂ ಬೇಕಾದರೂ ಭಾಗವಹಿಸಬಹುದು. ಕಲಾಪ ವೀಕ್ಷಣೆಗೆ ಬರುವ ಶಾಲಾ ಮಕ್ಕಳು ಬಿಸಿಲು ಮಳೆಯಲ್ಲಿ ನಿಲ್ಲುವುದನ್ನು ತಪ್ಪಿಸಲು ಬ್ಯಾಂಕ್ವೆಟ್‌ ಹಾಲ್‌ ಸಮೀಪ ಕುಳಿತುಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ ರೀತಿ ವಿವಿಧ ಕ್ಷೇತ್ರಗಳ ಗಣ್ಯರಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಅತ್ಯುತ್ತಮ ಶಾಸಕರ ಆಯ್ಕೆಗೆ ಸಮಿತಿ ರಚಿಸಲಾಗಿದೆ. ಕ್ಷೇತ್ರದ ಜನರು ಅಧಿವೇಶನ ಸಂದರ್ಭದಲ್ಲಿ ಶಾಸಕರು ಕಲಾಪದಲ್ಲಿ ಕುಳಿತು ಚರ್ಚಿಸುವುದಕ್ಕೆ ಅವಕಾಶ ಮಾಡಿಕೊಡಲಿ. ಆಮೇಲೆ ಸಾಕಷ್ಟು ಸಮಯ ಇರುತ್ತದೆ. ಆ ಸಂದರ್ಭದಲ್ಲಿ ಬೇಕಾದರೆ ನಿಮ್ಮ ನಿಮ್ಮ ಕೆಲಸ ಮಾಡಿಸಿಕೊಳ್ಳಿ. ಸಚಿವರು ವಿಧಾನಸೌಧದಲ್ಲಿ ಯಾವ ಸಂದರ್ಭದಲ್ಲಿ ಇರುತ್ತಾರೆ, ಸಾರ್ವಜನಿಕರ ಭೇಟಿ ಸಮಯ ಯಾವಾಗ ಎಂಬಿತ್ಯಾದಿ ಮಾಹಿತಿಗಳು ಲಭಿಸುವಂಥ ಆ್ಯಪ್‌ನ್ನು ಸದ್ಯದಲ್ಲೇ ರಚಿಸಲಾಗುವುದು ಎಂದರು.

60 ದಿನ ಕಲಾಪ ನಿರೀಕ್ಷೆ
ಬಸವರಾಜ್‌ ಹೊರಟ್ಟಿ ಮಾತನಾಡಿ, ವರ್ಷದಲ್ಲಿ ಕನಿಷ್ಠ 60 ದಿನ ಕಲಾಪ ನಡೆಯಬೇಕೆಂಬುದು ನಮ್ಮ ನಿರೀಕ್ಷೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಅಧಿವೇಶನದ ಅವಧಿ ವಿಸ್ತರಿಸುವ ಬಗ್ಗೆ ಜಂಟಿ ಕಲಾಪ ಸಮಿತಿ ಸಭೆಯಲ್ಲಿ ನಿರ್ಣಯಿಸುತ್ತೇವೆ. ವಿಧಾನ ಪರಿಷತ್ತಿನ ಅತ್ಯುತ್ತಮ ಸದಸ್ಯರ ಆಯ್ಕೆ ಬಹುಪಾಲು ಅಂತ್ಯಗೊಂಡಿದೆ. ಸದ್ಯದಲ್ಲೇ ಪ್ರಕಟ ಮಾಡುತ್ತೇವೆ ಎಂದರು.

ಸೌಂದರ್ಯೀಕರಣ ವಿಚಾರದಲ್ಲಿ ಭಿನ್ನ ಧ್ವನಿ
ವಿಧಾನಸೌಧ ಸೌಂದಯೀìಕರಣ ವಿಚಾರದಲ್ಲಿ ಸ್ಪೀಕರ್‌ ಖಾದರ್‌ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಭಿನ್ನಧ್ವನಿ ಪ್ರಕಟಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಘಟನೆ ನಡೆದಿದೆ. ಮೊದಲು ಖಾದರ್‌ ಮಾತನಾಡಿ, 70 ವರ್ಷದ ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ದ್ವಾರವನ್ನು ಬದಲಾವಣೆ ಮಾಡಲಾಗುತ್ತಿದೆ. ಇಲ್ಲಿ ಮೊದಲು ಕಬ್ಬಿಣದ ಗ್ರಿಲ್‌ ಇತ್ತು. ದೇಶ-ವಿದೇಶದ ಗಣ್ಯರು ಭೇಟಿ ನೀಡಲು ಬಂದಾಗ ಇದು ಸೊಗಸಾಗಿ ಕಾಣುತ್ತಿರಲಿಲ್ಲ. ಹೀಗಾಗಿ ದ್ವಾರವನ್ನು ಸುಂದರವಾಗಿ ರೂಪಿಸಲಾಗಿದ್ದು ಜುಲೈ 15ರಂದು 10.30ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಭವಿಷ್ಯದಲ್ಲಿ ಸಂಪೂರ್ಣ ವಿಧಾನಸೌಧವನ್ನು ಪರಂಪರೆಗೆ ಧಕ್ಕೆಯಾಗದಂತೆ ಸೌಂದಯೀìಕರಿಸಲಾಗುವುದು ಎಂದು ಹೇಳಿದರು.

ಇದಕ್ಕೆ ತಮ್ಮ ಮಾತಿನ ಸಂದರ್ಭದಲ್ಲಿ ಹೊರಟ್ಟಿ, ಪರೋಕ್ಷವಾಗಿ ವಿರೋಧಿಸಿದರು. ವಿಧಾನಸೌಧದ ಕೊಠಡಿಗಳ ಮೂಲೆಯನ್ನು ಬದಲಾಯಿಸಬಾರದು ಎಂಬ ನಿಯಮವೇ ಇದೆ. ಈ ಹಿಂದೆ ಸಚಿವರೊಬ್ಬರು ಗೋಡೆ ಒಡೆದು ವಿವಾದಕ್ಕೆ ಕಾರಣವಾಗಿದ್ದರು. ಸಣ್ಣಪುಟ್ಟ ಬದಲಾವಣೆ ಬೇಕಾದರೆ ಮಾಡಿಕೊಳ್ಳಬಹುದು. ಆದರೆ ಸಂಪೂರ್ಣವಾಗಿ ಗೋಡೆ ಒಡೆಯುವುದಕ್ಕೆ ಅವಕಾಶವೇ ಇಲ್ಲ. ಇತಿಹಾಸವನ್ನು ಸ್ವಲ್ಪ ಓದಿದರೆ ಗೊತ್ತಾಗುತ್ತದೆ, ವಿಧಾನಸೌಧದಲ್ಲಿ ವಾಸ್ತು ಪ್ರಕಾರ ನವೀಕರಣ ಮಾಡುವ ಅಗತ್ಯವೇ ಇಲ್ಲ. ಏಕೆಂದರೆ ಇಡೀ ವಿಧಾನಸೌಧ ವಾಸ್ತು ಪ್ರಕಾರ ನಿರ್ಮಾಣಗೊಂಡಿದೆ ಎಂದರು.

ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಾದರೆ ಸ್ಪೀಕರ್‌ಗೆ ಮಾಹಿತಿ ನೀಡಿ ಶಾಸಕರನ್ನು ಬಂಧಿಸಬೇಕಾಗುತ್ತದೆ. ಉಳಿದ ಸಂದರ್ಭದಲ್ಲಿ ಬಂಧನವಾದ 24 ಗಂಟೆಯಲ್ಲಿ ಮಾಹಿತಿ ನೀಡಬಹುದು. ಆದರೆ ಇದುವರೆಗೆ ನಮಗೆ ಯಾವುದೇ ಮಾಹಿತಿ ಇಡಿಯಿಂದ ಬಂದಿಲ್ಲ.
-ಯು.ಟಿ.ಖಾದರ್‌, ಸ್ಪೀಕರ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.