Illiterate; 9,290 ಗ್ರಾಮ ಪಂಚಾಯತ್ ಸದಸ್ಯರು ಅನಕ್ಷರಸ್ಥರು!

ಡಿ.26ರಿಂದ ಅನಕ್ಷರಸ್ಥ ಸದಸ್ಯರಿಗೆ ಓದು, ಬರಹ, ಪಾಠ ಸಾಕ್ಷರ ಸಮ್ಮಾನ ಅನುಷ್ಠಾನಕ್ಕೆ ನಿರ್ಧಾರ

Team Udayavani, Dec 15, 2023, 6:30 AM IST

1-qwqwewq

ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತ, ನೀತಿ ನಿರೂಪಣೆಯಲ್ಲಿ ಮಹತ್ತರ ಪಾತ್ರ ವಹಿಸುವ ರಾಜ್ಯದ ಗ್ರಾ.ಪಂ.ಗಳ ಸದಸ್ಯರಲ್ಲಿ ಬರೋಬ್ಬರಿ 9,290ಕ್ಕೂ ಹೆಚ್ಚು ಮಂದಿಗೆ ಓದು ಬರಹವೇ ಗೊತ್ತಿಲ್ಲ. ಅಂದರೆ, ರಾಜ್ಯದಲ್ಲಿ ಒಟ್ಟು ಒಟ್ಟು 95,000 ಕ್ಕೂ ಅಧಿಕ ಗ್ರಾಪಂ ಸದಸ್ಯರಿದ್ದು, ಈ ಪೈಕಿ ಶೇ.10ರಷ್ಟು ಸದಸ್ಯರು ಅನಕ್ಷರಸ್ಥರು! ಹೀಗಾಗಿ ರಾಜ್ಯದ ಗ್ರಾ.ಪಂ.ಗಳ ಅನಕ್ಷರಸ್ಥ ಸದಸ್ಯರನ್ನು ಗುರುತಿಸಿ ಅವರಿಗೆ ಓದು, ಬರಹ, ಮತ್ತು ಲೆಕ್ಕಾಚಾರದಲ್ಲಿ ಕನಿಷ್ಠ ಸ್ವಾವಲಂಬನೆ ತರಲು ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನ ದಡಿ ಅಬ್ದುಲ್‌ ನಜೀರ್‌ ಸಾಬ್‌ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಪಂಚಾಯತ್‌ರಾಜ್‌ ಮುಂದಾಗಿದೆ.

21 ಜಿಲ್ಲೆಗಳಲ್ಲಿ ಸಾಕ್ಷರ ಸಮ್ಮಾನ
ರಾಜ್ಯದ 21 ಜಿಲ್ಲೆಗಳಲ್ಲಿ ಡಿ.26ರಿಂದ ಸಾಕ್ಷರ ಸಮ್ಮಾನ ಕಾರ್ಯಕ್ರಮದ ಮೂಲಕ 4,078 ಮಂದಿ ಅನಕ್ಷರಸ್ಥ ಗ್ರಾಮ ಪಂಚಾಯತ್‌ ಸದಸ್ಯರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ ಸಹಯೋಗದೊಂದಿಗೆ ತರಬೇತಿ ಪಡೆದ ಬೋಧಕರಿಂದ ತರಬೇತಿ ಸಿಗಲಿದೆ. ಈಗಾಗಲೇ ಈ ಸಂಬಂಧ ಈ ಹಿಂದೆ ಸಾಕ್ಷರತಾ ಕಾರ್ಯಕ್ರಮದಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವ ಹಾಗು ನಿವೃತ್ತ ಶಿಕ್ಷಕರು, ಗ್ರಾ.ಪಂ. ಗ್ರಂಥಪಾಲಕರು, ವಯಸ್ಕರ ಕಲಿಕೆ-ಬೋಧನೆಯಲ್ಲಿ ಅನುಭವ ಇರುವರನ್ನು ಸಾಕ್ಷರ ಸಮ್ಮಾನ ಕಾರ್ಯಕ್ರಮದಡಿ ಬೋಧಕರನ್ನಾಗಿ ಗುರುತಿಸಿ ಅವರಿಗೆ ತರಬೇತಿ ನೀಡಲಾಗಿದೆ.

50 ದಿನ 100 ಗಂಟೆಗಳ ತರಬೇತಿ
ಕನಿಷ್ಠ 100 ಗಂಟೆಗಳ ತರಬೇತಿಗೆ ಯೋಜನೆ ರೂಪಿಸಲಾಗಿದೆ. ದಿನಕ್ಕೆ 2 ಗಂಟೆಯಂತೆ ಒಟ್ಟು 50 ದಿನ ಒಬ್ಬರಿಂದ ಒಬ್ಬರಿಗೆ ಕಲಿಸುವ ವಿಧಾನವನ್ನು ರೂಪಿಸಲಾಗಿದ್ದು, ಈಗಾಗಲೇ ಬೋಧಕರಿಗೆ 3 ದಿನಗಳ ಪಠ್ಯಾಧಾರಿತ ತರಬೇತಿ ನೀಡಲಾಗಿದೆ. ನಾಯಕತ್ವ, ಆರೋಗ್ಯ, ಪರಿಸರ, ಸಹಕಾರ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಮತ್ತಿತರ ವಿಷಯಗಳ ಬಗ್ಗೆ ಪಠ್ಯ ಬೋಧನೆ ಮಾಡಲಾಗುತ್ತಿದೆ. ಸಾಕ್ಷರ ಸಮ್ಮಾನ ತರಬೇತಿ ವೇಳೆ ಮೌಲ್ಯಮಾಪನವೂ ನಡೆಯಲಿದೆ.

ಬೆಳಗಾವಿಯಲ್ಲಿ ಅತಿ ಹೆಚ್ಚು
ಡಿ.26ರಿಂದ ಚಾಲನೆಗೊಳ್ಳುತ್ತಿರುವ ಸಾಕ್ಷರ ಸಮ್ಮಾನ ಕಾರ್ಯಕ್ರಮದಡಿ ರಾಜ್ಯದ 21 ಜಿಲ್ಲೆಗಳಲ್ಲಿ ಗುರುತಿಸಿರುವ ಅನಕ್ಷರಸ್ಥ ಗ್ರಾ.ಪಂ. ಸದಸ್ಯರ ಪಟ್ಟಿಯಲ್ಲಿ ಬೆಳಗಾವಿ (681) ಮೊದಲ ಸ್ಥಾನದಲ್ಲಿದೆ, ತುಮಕೂರು (328), ಚಿಕ್ಕಬಳ್ಳಾಪುರ (305), ವಿಜಯ ನಗರ (298), ಚಾಮರಾಜನ ನಗರ (275), ರಾಮನಗರ (227), ಹಾಸನ (223), ದಾವಣಗೆರೆ (215), ಚಿತ್ರದುರ್ಗ (183), ಕೋಲಾರ (184), ಗದಗ(182) ಹೊಂದಿದ್ದರೆ ಅತಿ ಕಡಿಮೆ ಅನಕ್ಷರಸ್ಥ ಗ್ರಾ.ಪಂ. ಸದಸ್ಯರನ್ನು ಕೊಡಗು (45), ಉಡುಪಿ (46), ಬೆಂಗಳೂರು ಗ್ರಾಮಾಂತರ (61), ಬೆಂಗಳೂರು (62), ದಕ್ಷಿಣ ಕನ್ನಡ (76) ಸದಸ್ಯರನ್ನು ಹೊಂದಿದೆ.

ಅತಿ ಹೆಚ್ಚು ಅನಕ್ಷರಸ್ಥರು ಇರುವುದೆಲ್ಲಿ?
ರಾಜ್ಯದ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಒಟ್ಟು 80 ತಾಲೂಕುಗಳ 1,268 ಗ್ರಾಪಂಗಳಲ್ಲಿ ಬರೋಬ್ಬರಿ 5,798 ಅನಕ್ಷರಸ್ಥ ಗ್ರಾಪಂ ಸದಸ್ಯರು ಇರುವುದನ್ನು ಗುರುತಿಸಿ ಆ ಪೈಕಿ 3,011 ಅನಕ್ಷರಸ್ಥ ಗ್ರಾಪಂ ಸದಸ್ಯರಿಗೆ 1,500 ಕ್ಕೂ ಹೆಚ್ಚು ಸಾಕ್ಷರ ಬೋಧಕರ ಮೂಲಕ ಸಾಕ್ಷರತೆ ಕಲಿಸಲಾಗಿದೆ. ಇನ್ನೂ 2,787 ಓದು, ಬರಹ ಬಾರದ ಗ್ರಾಪಂ ಸದಸ್ಯರಿಗೆ ಸಾಕ್ಷರ ಸಮ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.