ಪತ್ನಿ ಹೊಡೆಯುತ್ತಾಳೆಂದು ಪ್ರಧಾನಿಗೇ ದೂರು ನೀಡಿದ ಬೆಂಗಳೂರಿನ ಪತಿರಾಯ
ಇದು ನೀವು ಹೆಚ್ಚಿಸುವ ನಾರಿ ಶಕ್ತಿ? ನೊಂದ ಪತಿಯ ಪ್ರಶ್ನೆ
Team Udayavani, Nov 2, 2022, 9:45 PM IST
ಬೆಂಗಳೂರು : ಹೆಂಡತಿ ಹೊಡೆಯುತ್ತಿದ್ದಾಳೆ ಎಂದು ಪತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಕಾನೂನು ಸಚಿವರಿಗೇ ದೂರು ನೀಡಿದ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಯದುನಂದನ್ ಆಚಾರ್ಯ ಎನ್ನುವ ಖಾತೆಯಿಂದ ”ಯಾರಾದರೂ ನನಗೆ ಸಹಾಯ ಮಾಡುವರೇ? ಅಥವಾ ಇದು ಸಂಭವಿಸಿದಾಗ ಯಾರಾದರೂ ನನಗೆ ಸಹಾಯ ಮಾಡಿದ್ದಾರೆಯೇ? ಇಲ್ಲ, ಏಕೆಂದರೆ ನಾನು ಒಬ್ಬ ಗಂಡಸು! ನನ್ನ ಹೆಂಡತಿ ನನ್ನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದಳು, ಇದು ನೀವು ಹೆಚ್ಚಿಸುವ ನಾರಿ ಶಕ್ತಿಯೇ? ಇದಕ್ಕಾಗಿ ನಾನು ಅವಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ಹಾಕಬಹುದೇ? ಇಲ್ಲ!” ಎಂದು ಗಾಯಗೊಂಡಿರುವ ಫೋಟೋ ಸಮೇತ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ, ಕಾನೂನು ಸಚಿವ ಕಿರಣ್ ರಿಜಿಜು, ಬೆಂಗಳೂರು ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾರೆ.
ಪೊಲೀಸರು ಟ್ವೀಟ್ ಗೆ ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಯದುನಂದನ್ ಆಚಾರ್ಯ ಇಂಜಿನಿಯರ್, ಮಾಜಿ-ಬೈಕರ್, ಬಹು ಪ್ರಕರಣಗಳಲ್ಲಿ ಸುಳ್ಳು ಆರೋಪಿಯಾಗಿದ್ದೇನೆ , ಭಾರತದಲ್ಲಿ ಲಿಂಗ ಪಕ್ಷಪಾತ ಕಾನೂನುಗಳ ವಿರುದ್ಧ ಹೋರಾಟ ಮಾಡುತ್ತಿರುವುದಾಗಿ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.