Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ
ಕೇಂದ್ರದ ಅಸಹಕಾರದ ನಡುವೆಯೂ ನುಡಿದಂತೆ ನಡೆದ ಸರಕಾರ
Team Udayavani, May 19, 2024, 11:36 PM IST
ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಕ್ರಾಂತಿಕಾರಿ ಹೆಜ್ಜೆಗಳಿಂದ ಒಂದು ವರ್ಷದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಮುಂದಿನ ನಾಲ್ಕು ವರ್ಷಗಳನ್ನು ಸಮರ್ಥವಾಗಿ ಎದುರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿ ಸಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ “ಸರ್ವರಿಗೂ ಸಮಬಾಳು-ಸಮಪಾಲು’ ತತ್ವದಡಿ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸೋಮವಾರ (ಮೇ 20) ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಪತ್ರಿಕಾ ಪ್ರಕಟನೆ ನೀಡಿರುವ ಸುಜೇìವಾಲ, ಅನ್ನಭಾಗ್ಯ, ಬರ ಪರಿಹಾರ ಬಿಡುಗಡೆಯಂತಹ ಹಲವು ವಿಷಯಗಳಲ್ಲಿ ಕೇಂದ್ರ ಸರಕಾರದ ಅಸಹಕಾರದ ಮಧ್ಯೆಯೂ ರಾಜ್ಯ ಸರಕಾರ, ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆ ಗಳನ್ನು 9 ತಿಂಗಳುಗಳಲ್ಲಿ ಜಾರಿಗೊಳಿಸುವ ಮೂಲಕ ನುಡಿ ದಂತೆ ನಡೆಯುತ್ತಿದೆ. ಸರ್ವತೋಮುಖ ಅಭಿವೃದ್ಧಿಯ ವಿಭಿನ್ನ ಆಶಯದೊಂದಿಗೆ ವಿಶ್ವದಲ್ಲೇ ಮಾದರಿಯಾಗಿದೆ ಎಂದು ಬಣ್ಣಿಸಿದ್ದಾರೆ.
ಸರಕಾರ ಎಂದರೆ ಕೇವಲ ರಸ್ತೆ, ಸೇತುವೆಯಂತಹ ಮೂಲ ಸೌಕರ್ಯಗಳನ್ನು ಕಲ್ಪಿಸುವುದಲ್ಲ; ಬಡವರು, ಮಹಿಳೆಯರು, ರೈತರು ಸಹಿತ ಶ್ರಮಿಕ ವರ್ಗವನ್ನೂ ಆರ್ಥಿಕವಾಗಿ ಸಶಕ್ತರನ್ನಾಗಿಸಿ, ಮುಖ್ಯವಾಹಿನಿಗೆ ತಂದು, ಸರ್ವರ ಸರ್ವತೋಮುಖ ಅಭಿವೃದ್ಧಿ ಮಾಡುವುದು ಎಂಬ ವಿಭಿನ್ನ ಆಶಯದೊಂದಿಗೆ ಸರಕಾರ ಮುಂದಡಿ ಇಟ್ಟಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ವಿಶ್ವದಲ್ಲೇ ಮಾದರಿಯಾಗಿದೆ. ಅಲ್ಪಾವಧಿಯಲ್ಲಿ ಸರಕಾರ ಅಪೂರ್ವ ಸಾಧನೆ ಮಾಡಿ, ಅಗಣಿತ ಜನಮನ್ನಣೆ ಗಳಿಸಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ 4.60 ಕೋಟಿ ಜನರನ್ನು ತಲುಪುತ್ತಿವೆ ಎಂದಿದ್ದಾರೆ.
ರಾಜ್ಯದ 223 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ಕೇಂದ್ರ ಸರಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿ, ಅಸಹಕಾರ ತೋರಿದಾಗಲೂ ರಾಜ್ಯದ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾದವು. ಜನ ತೊಂದರೆ ಇಲ್ಲದೆ ಜೀವನ ಸಾಗಿಸಲು ರಾಜ್ಯ ಸರಕಾರ ತನ್ನ ಯೋಜನೆಗಳ ಮೂಲಕ ಅನುವು ಮಾಡಿಕೊಟ್ಟಿತು. ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಿದ ಸರಕಾರದ ನಡೆ ಶ್ಲಾಘನೀಯ. ಈ ವೇಳೆ ರೈತರ ಖಾತೆಗೆ 2 ಸಾ. ರೂಪಾಯಿಗಳನ್ನು ಕೂಡ ರಾಜ್ಯ ಸರಕಾರ ಜಮೆ ಮಾಡಿ ರೈತ ಪರ ಸರಕಾರ ಎಂಬುದನ್ನು ಸಾಬೀತುಮಾಡಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.