ಕಾಲು ನೋವಾದ ಕಾರಣ ಕಲಾಪಕ್ಕೆ ಗೈರು: ಈಶ್ವರಪ್ಪ ಹೇಳಿಕೆ

ಇದರಲ್ಲಿ ಬೇರೆ ವಿಶೇಷ ಏನಿಲ್ಲ, ನೀವು ಹುಡುಕಿದರೂ ಸಿಗುವುದಿಲ್ಲ....

Team Udayavani, Sep 14, 2022, 4:42 PM IST

eshwarappa

ಶಿವಮೊಗ್ಗ: ”ನನಗೆ ಕಾಲು ನೋವಾಗಿರುವ ಕಾರಣ ಸದನದ ಕಲಾಪದಲ್ಲಿ ಭಾಗವಹಿಸಿಲ್ಲ ಅಷ್ಟೇ.ಇದರಲ್ಲಿ ಬೇರೆ ವಿಶೇಷ ಏನಿಲ್ಲ. ನೀವು ಹುಡುಕಿದರೂ ಸಿಗುವುದಿಲ್ಲ.ನನಗೂ ಸದನದಲ್ಲಿ ಭಾಗವಹಿಸಬೇಕು ಎಂಬ ಆಸೆ ಇದೆ,ಆದರೆ ವೈದ್ಯರು ರೆಸ್ಟ್ ಮಾಡಿ ಅಂದಿದ್ದಾರೆ” ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸರಕಾರದ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಸಿದ್ದರಾಮಯ್ಯ ಸಮರ್ಥವಾಗಿ ಟೀಕೆ ಮಾಡುತ್ತಿದ್ದಾರೆ ಅನ್ನುವ ಅಂಶ ರಾಜ್ಯದ ಜನತೆಗೆ ಅನ್ನಿಸುತ್ತಿಲ್ಲ.ಗಂಟಲಿನಿಂದ ಜೋರಾಗಿ ವಾಗ್ದಾಳಿ ಮಾಡಿದ್ರೆ ಜನ ಒಪ್ಪುವುದಿಲ್ಲ.ನಾವು ಭ್ರಷ್ಟಾಚಾರ ಬಿಚ್ಚಿಡುತ್ತೇವೆ, ಬಿಚ್ಚಿಡುತ್ತೇವೆ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದರು. ಇವತ್ತಿನವರೆಗೂ ಭ್ರಷ್ಟಾಚಾರದ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ.40% ಅಂತ ಕೆಂಪಣ್ಣ ಹೇಳಿದರೂ, ಆದರೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ.ಒಬ್ಬನೇ ಒಬ್ಬ ಸಚಿವನ ವಿರುದ್ದ ದಾಖಲೆ ಬಿಡುಗಡೆ ಮಾಡಿದರೆ ಉತ್ತರ ಕೊಡುತ್ತೇವೆ. ಕೆಂಪಣ್ಣ ಕಾಂಗ್ರೆಸ್ ಏಜೆಂಟ್ ಅನ್ನುವ ಅನುಮಾನ ರಾಜ್ಯದ ಜನರದ್ದಾಗಿದೆ” ಎಂದರು.

”ಸಿದ್ದರಾಮಯ್ಯ ಅವರು ಬೋಟ್ ನಲ್ಲಿ ತೇಲಿಕೊಂಡು ಹೋಗಿದ್ದನ್ನು ನೋಡಿದೆ. ಒಂದೂವರೆ ಅಡಿ‌ ನೀರು ನನ್ನ ಮೊಮ್ಮಗ ಆ ನೀರಿನಲ್ಲಿ ನಡೆದುಕೊಂಡು ಹೋಗುತ್ತಾನೆ. ಇವರು ಒಂದೂವರೆ ಅಡಿ ನೀರಲ್ಲಿ ಬೋಟಲ್ಲಿ ನಿಂತುಕೊಂಡು ನಾನು ವಿಪಕ್ಷ ನಾಯಕನಾಗಿ ವೀಕ್ಷಣೆ ಮಾಡಿದೆ ಅಂತ ತೋರಿಸಲು ಮಾಡಿದ ನಾಟಕ ”ಎಂದರು.

”ಅಕ್ರಮ ಒತ್ತುವರಿಯನ್ನು ಬಿಜೆಪಿ ಸರಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಏಕೆ ಮಾಡಲಿಲ್ಲ.ನಲಪಾಡ್ ಅವರ ಸಂಸ್ಥೆಯಿಂದಲೇ ಒತ್ತುವರಿ ಆಗಿದೆ ಅಂತ ಒಪ್ಪಿಕೊಂಡಿದ್ದಾರೆ. ಇಷ್ಟು ವರ್ಷ ಒತ್ತುವರಿಗೆ ಅವಕಾಶ ಮಾಡಿ‌ ಕೊಟ್ಟಿದ್ದೆ ಕಾಂಗ್ರೆಸ್” ಎಂದರು.

”ಪ್ರಭಾವಿ ವ್ಯಕ್ತಿಗಳ ಬಿಟ್ಟು ಬಡವರ ಕಟ್ಟಡ ಹೊಡೆಯುತ್ತಿದ್ದಾರೆ ಎಂಬ ಬಣ್ಣ ಕಟ್ಟುತ್ತಿದ್ದಾರೆ. ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಇದ್ದದ್ದೆ, ಒತ್ತುವರಿ ತೆರವು ಮಾಡಲು ಜನರೇ ಸಹಕಾರ ಕೊಡುತ್ತಿದ್ದಾರೆ.ಹೀಗಾಗಿ ಬೆಂಗಳೂರು ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

”ಕಾಶಿ ವಿಶ್ವನಾಥನ ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದರು. ಹಿಂದೂಗಳಿಗೆ ವರ್ಷದಲ್ಲಿ ಒಂದು ದಿನ ಮಾತ್ರ ಪೂಜೆಗೆ ಅವಕಾಶ ಇತ್ತು.ಆ ಸ್ಥಳದಲ್ಲಿ ಗಣಪತಿ, ಮಾರುತಿ ವಿಗ್ರಹ, ಶೃಂಗಾರ ಗೌರಿ, ಈಶ್ವರಲಿಂಗ ಎಲ್ಲಾ ಇದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಲು ಸಹಕಾರ ಕೊಡುತ್ತಿದ್ದಾರೋ, ಅದೇ ರೀತಿ ಇಲ್ಲಿಯೂ ಸಹ ಮುಸಲ್ಮಾನರು ಸಹಕಾರ ಕೊಡುತ್ತಾರೆ. ಈ ದೇಶ ಶಾಂತಿಯಿಂದ ಇರಬಾರದು ಎಂಬ ಅಪೇಕ್ಷೆ ಇರುವವರು, ನ್ಯಾಯಾಲಯ ನಂಬದೇ ಇರುವವರು ಕೆಲವರು ಅಡ್ಡ ಬರಬಹುದು.ಮುಸಲ್ಮಾನ ಹಿರಿಯರು ಈ ಬಗ್ಗೆ ಜಾಗೃತರಾಗಿರಬೇಕು ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

”ಸಂವಿಧಾನ ಮೀರಿ, ನ್ಯಾಯಾಲಯದ ತೀರ್ಪು ಮೀರಿ ಗಲಾಟೆ ನಡೆಸುವವರಿಗೆ ಬುದ್ದಿ ಹೇಳಬೇಕು.350ಕ್ಕೂ ಹೆಚ್ಚು ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದಾರೆ ಎಂಬ ಮಾಹಿತಿ‌ ಇದೆ. ಅಯೋಧ್ಯೆ, ಕಾಶಿ, ಮಥುರಾ ಮೂರು ಪವಿತ್ರವಾದ ಕ್ಷೇತ್ರಗಳು. ಮುಸಲ್ಮಾನರು ಹೊಸದಾಗಿ ಕಟ್ಟಿದ ಮಸೀದಿಗಳಿಗೆ ಹಿಂದೂಗಳು ತೊಂದರೆ ಕೊದುವುದಿಲ್ಲ. ಹಳೆ ದೇವಸ್ಥಾನ ಹೊಡೆದು ಮಸೀದಿ ಕಟ್ಟಿದ್ದರೆ ಹಿಂದುಗಳು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.