High Court: ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಲಿ; ಹೈಕೋರ್ಟ್‌


Team Udayavani, Mar 21, 2024, 8:51 PM IST

High Court: ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಲಿ; ಹೈಕೋರ್ಟ್‌

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಸಿ ವರ್ಗಕ್ಕೆ ಸೇರಿಸಿದ್ದರೂ ಇತರೆ ಉಪಪಂಗಡದವರಿಗೂ ಪ.ಜಾತಿಯ ನಕಲಿ ಪ್ರಮಾಣಪತ್ರ  ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಯಾದಗಿರಿಯ ರಾಜ್ಯ ಎಸ್‌ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರು ಅತ್ಯಂತ ಗಂಭೀರ ವಿಚಾರ ಪ್ರಸ್ತಾಪಿಸಿದ್ದಾರೆ. ಅರ್ಜಿಯಲ್ಲಿ ಉಲ್ಲೇಖೀಸಿರುವ 60 ನಕಲಿ ಜಾತಿ ಪ್ರಮಾಣಪತ್ರ ಪಡೆದವರನ್ನು ಸೇರಿಸಿಕೊಂಡು ಈ ರೀತಿ ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡವರಿಗೆ ವಾರದೊಳಗೆ ನೋಟಿಸ್‌ ನೀಡಬೇಕು, ಶೀಘ್ರ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕು. ಅದಕ್ಕೂ ಮೊದಲು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಅಹವಾಲು ಹೇಳಲು ಅವಕಾಶ ನೀಡಬೇಕು ಎಂದು ಸರ್ಕಾರದ ವಿಶೇಷ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಏಪ್ರಿಲ್‌ 4ಕ್ಕೆ ಮುಂದೂಡಿತು.

ಈ ವೇಳೆ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡರೆ ಅಥವಾ ವಿತರಿಸಿದರೆ ಅದನ್ನು ತಡೆಯುವುದು ಯಾರ ಕೆಲಸ? ಸರ್ಕಾರದ ಪಾತ್ರವೇನು ಎಂದು ನ್ಯಾಯಾಲಯ ಪ್ರಶ್ನಿಸಿತು. ಜಾತಿ ಪ್ರಮಾಣಪತ್ರ ರದ್ದುಗೊಂಡರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ  ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರ ರದ್ದುಪಡಿಸುವ ಅಧಿಕಾರ ಯಾರಿಗಿದೆ ಎಂದು ನ್ಯಾಯಾಲಯ ಮರು ಪ್ರಶ್ನಿಸಿತು. ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ ಎಂದು ವಕೀಲರು ತಿಳಿಸಿದರು. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಸರ್ಕಾರ ಏನು ಮಾಡುವುದಿಲ್ಲವೇ? ನಾಗರಿಕರ ರಕ್ಷಣೆಯ ಹೊಣೆ ಹೊತ್ತಿರುವ ಸರ್ಕಾರ ಮೂಕ ಪ್ರೇಕ್ಷಕವಾಗಿರುವುದು ಸರಿಯಲ್ಲ ಎಂದು ನ್ಯಾಯಪೀಠ ಹೇಳಿತು.

ಅದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಸರ್ಕಾರದ ವಿಶೇಷ ವಕೀಲ ಸಿ. ಜಗದೀಶ್‌, ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ವಿತರಿಸಬಾರದು ಎಂದು ಅಧಿಕಾರಿಗಳಿಗೆ ಸರ್ಕಾರದಿಂದ ಸ್ಪಷ್ಟ ಸೂಚನೆ ಇದೆ. ಆದಾಗ್ಯೂ ಕೆಲವು ಕಡೆ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಕಾಲಾವಕಾಶ ಕೋರಿದರು.

ಅರ್ಜಿದಾರರು ಅತ್ಯಂತ ಗಂಭೀರ ವಿಚಾರ ಪ್ರಸ್ತಾಪಿಸಿದ್ದಾರೆ. ಅರ್ಜಿಯಲ್ಲಿ ಉಲ್ಲೇಖೀಸಿರುವ 60 ನಕಲಿ ಜಾತಿ ಪ್ರಮಾಣಪತ್ರ ಪಡೆದವರನ್ನು ಸೇರಿಸಿಕೊಂಡು ಈ ರೀತಿ ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡವರಿಗೆ ಒಂದು ವಾರದೊಳಗೆ ನೋಟಿಸ್‌ ನೀಡಬೇಕು, ಬಳಿಕ ಆದಷ್ಟು ಶೀಘ್ರ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕು. ಅದಕ್ಕೂ ಮೊದಲು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಅಹವಾಲು ಹೇಳಲು ಅವಕಾಶ ನೀಡಬೇಕು ಎಂದು ಸರ್ಕಾರದ ವಿಶೇಷ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಏಪ್ರಿಲ್‌ 4ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್‌, ಸಂವಿಧಾನಕ್ಕೆ ತಿದ್ದುಪಡಿ ತಂದು ನಾಯಕ ಜನಾಂಗದ ಉಪಪಂಗಡಗಳಾದ ಪರಿವಾರ ಮತ್ತು ತಳವಾರವನ್ನು ಎಸ್‌ಸಿ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಅಧಿಕಾರಿಗಳು ಒಬಿಸಿಗೆ ಸೇರಿದ ಇತರೆ ಉಪಪಂಗಡದವರಿಗೂ ಎಸ್‌ಸಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸುತ್ತಿದ್ದಾರೆ. ಆ ರೀತಿ 60ಕ್ಕೂ ಅಧಿಕ ನಕಲಿ ಜಾತಿ ಪ್ರಮಾಣಪತ್ರಗಳ ವಿವರಗಳನ್ನು ಅರ್ಜಿಯಲ್ಲಿ ಅಡಕ ಮಾಡಲಾಗಿದೆ. ಈ ರೀತಿ ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದವರು ಶೈಕ್ಷಣಿಕ, ಔದ್ಯೋಗಿಕ ಲಾಭ ಪಡೆಯುವುದರ ಜೊತೆಗೆ ಚುನಾವಣೆಗಳಿಗೂ ಸ್ಪರ್ಧಿಸುತ್ತಿದ್ದಾರೆ. ಆ ಮೂಲಕ ಅರ್ಹ ಎಸ್‌ಟಿ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದು ಸಾಮಾಜಿಕ ನ್ಯಾಯವನ್ನು ಬುಡಮೇಲು ಮಾಡುತ್ತಿದೆ ಎಂದು ವಿವರಿಸಿದರು.

 

ಟಾಪ್ ನ್ಯೂಸ್

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.