ಉದ್ಯಮಿಗಳ ಚಿತ್ತವನ್ನು ಉತ್ತರ ಕರ್ನಾಟಕದ ಕಡೆ ಸೆಳೆಯಲು ಕ್ರಮ: ಜಗದೀಶ್ ಶೆಟ್ಟರ್
Team Udayavani, Sep 1, 2020, 3:08 PM IST
ರಾಯಚೂರು: ಕೈಗಾರಿಕೆ ವಲಯ ಎಂದರೆ ಕೇವಲ ಬೆಂಗಳೂರು ಎನ್ನುವಂತಾಗಿದ್ದು, ಉದ್ಯಮಿಗಳ ಚಿತ್ತವನ್ನು ಉತ್ತರ ಕರ್ನಾಟಕದತ್ತ ಸೆಳೆಯಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಯಾದಗಿರಿ ಜಿಲ್ಲೆಯ ಕಡೆಚೂರು ಬಳಿ ಮೂರು ಸಾವಿರ ಎಕರೆ ಭೂಮಿ ಸ್ವಾಧೀನ ಮಾಡಿಕೊಂಡಿದ್ದು, ಅದರಲ್ಲಿ 2 ಸಾವಿರ ಎಕರೆ ಅಭಿವೃದ್ಧಿಪಡಿಸಲಾಗಿದೆ. ಹೀಗಾಗಿ 15 ಕಂಪನಿಗಳು ಈಗ ಅಲ್ಲಿ ಕೈಗಾರಿಕೆ ಸ್ಥಾಪಿಸಲು ಮುಂದಾಗಿವೆ. ಇನ್ನೂ ಕಲಬುರಗಿ ಜಿಲ್ಲೆಯಲ್ಲಿ ಶೀಘ್ರದಲ್ಲೇ ಬಂಡವಾಳ ಹೂಡಿಕೆ ಸಮಾವೇಶ ಏರ್ಪಡಿಸಲಾಗುವುದು ಎಂದರು.
ರಾಯಚೂರಿನಲ್ಲಿ ಫಾರ್ಮಾ ಪಾರ್ಕ್ ನಿರ್ಮಿಸುವ ಕುರಿತು ಕೇಂದ್ರ ಸಚಿವ ಸದಾನಂದಗೌಡರ ಜತೆ ಚರ್ಚಿಸಲಾಗಿದೆ. ಅದಕ್ಕೆ ಪ್ರಧಾನಿ ಒಪ್ಪಿಗೆ ನೀಡಬೇಕು ಎಂದಿದ್ದು, ಶೀಘ್ರದಲ್ಲೇ ಪ್ರಧಾನಿ ಬಳಿಗೂ ನಿಯೋಗ ಹೋಗುವುದಾಗಿ ತಿಳಿಸಿದರು.
ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಕೈಗಾರಿಕೆ ಕಾಯ್ದೆಗೂ ತಿದ್ದುಪಡಿ ತರಲಾಗಿದೆ. ಭೂ ಸುಧಾರಣೆ ಕಾಯ್ದೆಗೂ ತಿದ್ದುಪಡಿ ಮಾಡಿದ್ದೇವೆ. ಕೃಷಿ ಭೂಮಿ ಖರೀದಿಗಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಈಗಾಗಲೇ ಕೊಪ್ಪಳದಲ್ಲಿ ಟಾಯ್ಸ್ ಕಾರ್ಖಾನೆ ಸ್ಥಾಪನೆಯಾಗುತ್ತಿದೆ. ಸುಮಾರು 2500 ಕೋಟಿ ಹೂಡಿಕೆ ಮಾಡಲಾಗುತ್ತಿದೆ. 40 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.