Kurugodu: ದೇವಸ್ಥಾನದ ಗರ್ಭ ಗುಡಿಯಲ್ಲಿ ನಟ ದರ್ಶನ್ ಫೋಟೋ ಇಟ್ಟು ಪೂಜೆ; ಭಕ್ತರ ಆಕ್ರೋಶ
Team Udayavani, Aug 6, 2024, 10:21 AM IST
ಕುರುಗೋಡು: ಪಟ್ಟಣದ ಆರಾಧ್ಯ ದೈವ ಶ್ರೀ ದೊಡ್ಡಬಸವೇಶರ ದೇವಸ್ಥಾನದ ಗರ್ಭ ಗುಡಿಯಲ್ಲಿ ಶಿಲಾ ಮೂರ್ತಿಯ ಮುಂದೆ ಸಿನಿಮಾ ನಟ ದರ್ಶನ್ ಅವರ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶ್ರೀದೊಡ್ಡಬಸವೇಶರ ದೇವಸ್ಥಾನದ ಶಿಲಾ ಮೂರ್ತಿಯ ಮುಂದೆ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಅವರ 6 ಭಾವಚಿತ್ರ ಗಳನ್ನು ಇರಿಸಿ ಪೂಜೆ ಮಾಡಲಾಗಿದೆ. ಅಭಿಮಾನಿಗಳ ಈ ಕಾರ್ಯಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರ ವಿರುದ್ಧ ಭಕ್ತ ಸಮೂಹ ಕಿಡಿಕಾರಿದೆ.
ಕೂಡಲೇ ಘಟನೆಯ ಕುರಿತು ಸಂಬಂಧಿಸಿದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.