Karnataka ಹಿಂದಿ ಪ್ರಚಾರ ಸಭೆಗೆ ಆಡಳಿತಾಧಿಕಾರಿ ನೇಮಕ:ಏನಿದು ಗದ್ದುಗೆ ಗುದ್ದಾಟ?

ಶಾಲಮ್ ಹುಸೇನ್ ನೂತನ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

Team Udayavani, Dec 29, 2023, 8:50 PM IST

vidhana-soudha

ಧಾರವಾಡ : ಕಳೆದ ಐದು ವರ್ಷಗಳಿಂದ ಸಾಕಷ್ಟು ವಾದ-ವಿವಾದಗಳಿಗೆ ಕಾರಣವಾಗಿದ್ದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ (ಕರ್ನಾಟಕ) ಧಾರವಾಡ ಸಂಘದ ಆಡಳಿತ ಮಂಡಳಿಯ ವಿಷಯದಲ್ಲಿ ಇದೀಗ ರಾಜ್ಯ ಸರಕಾರವು ಮಧ್ಯ ಪ್ರವೇಶಿಸಿದ್ದು, ನೂತನ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಆದೇಶ ಹೊರಡಿಸಿದ ಬೆನ್ನಲ್ಲೆ ಧಾರವಾಡದ ಉಪವಿಭಾಗಾಧಿಕಾರಿ ಶಾಲಮ್ ಹುಸೇನ್ ಅವರು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಹಿಂದಿ ಪ್ರಚಾರ ಸಭೆಯ ಆಡಳಿತಾಧಿಕಾರಿಯಾಗಿ ಶುಕ್ರವಾರ ಮಧ್ಯಾಹ್ನವೇ ಅಧಿಕಾರ ಸ್ವೀಕರಿಸಿದ್ದಾರೆ.

ಈ ಆದೇಶದ ದಿನಾಂಕದಿಂದ ಮುಂದಿನ ಆರು ತಿಂಗಳ ಅವಧಿಗೆ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಆಡಳಿತಾಧಿಕಾರಿಯು ಕೂಡಲೇ ಸಂಘದ ಪ್ರಭಾರವನ್ನು ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ. ಇದಲ್ಲದೇ ಉಚ್ಚ ನ್ಯಾಯಾಲಯದ ಆದೇಶದಂತೆ ಹಾಗೂ ಸಂಘದ ಉಪನಿಯಮಗಳ ಅನ್ವಯ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ, ಚುನಾಯಿತ ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸಹಕಾರ ಇಲಾಖೆಯ ಸರಕಾರದ ಅಧಿನ ಕಾರ್ಯದರ್ಶಿ ರಂಗನಾಥ.ಜಿ. ಆದೇಶಿಸಿದ್ದಾರೆ.

ಏನಿದು ಗದ್ದುಗೆ ಗುದ್ದಾಟ ?
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಧಾರವಾಡದ ವಾರ್ಷಿಕ ಮಹಾಸಭೆಯಲ್ಲಿ 2020 ರಿಂದ ಐದು ವರ್ಷಗಳ ಅವಧಿಗೆ2019 ಡಿ.18ರಂದು ಚುನಾವಣೆ ನಡೆದಿತ್ತು. ಆದರೆ ಈ ಚುನಾವಣೆ ಕೇಂದ್ರ ಸಭಾದ ಉಪನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಚುನಾವಣೆಯನ್ನು ರದ್ದುಪಡಿಸಿ, ಪ್ರಾಂತೀಯ ಸಭಾದ ಸಂಪೂರ್ಣ ಆಡಳಿತವನ್ನು ಕೇಂದ್ರ ಸಭಾ ತನ್ನ ವಶಕ್ಕೆ ತೆಗೆದುಕೊಂಡಿತ್ತು. ಸಂಘದ ಪದಾಧಿಕಾರಿಗಳಿಗೆ ಯಾವುದೇ ಆಡಳಿತಾತ್ಮಕ, ಹಣಕಾಸಿನ ಅಧಿಕಾರಗಳನ್ನು ಚಲಾಯಿಸುವ ಹಕ್ಕಿಲ್ಲ ಎಂದು ಆದೇಶಿಸಿತ್ತು. ಅಷ್ಟೇಯಲ್ಲ, ಸಂಘದ ಎಲ್ಲ ಆಡಳಿತವನ್ನು ನೋಡಿಕೊಳ್ಳಲು ವಿಶೇಷ ಕಾರ್ಯದರ್ಶಿಗಳನ್ನಾಗಿ ಪ್ರೊ.ಎಸ್.ಬಿ.ಹಿಂಚಿಗೇರಿ ಹಾಗೂ ಅವರಿಗೆ ಮೂರು ಜನ ಸಲಹೆಗಾರರನ್ನು ನೇಮಿಸಲಾಗಿತ್ತು. ಆದರೆ ಕೇಂದ್ರ ಸಭಾದ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಸಂಘದ ಕೆಲ ಸದಸ್ಯರು ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ಹೈಕೋರ್ಟ್ ಪೀಠವು 2022 ಡಿ.16 ರಂದು ಅಂತಿಮ ಆದೇಶ ನೀಡಿ, ಸಂಘದ ಆಡಳಿತ ಮಂಡಳಿಗೆ ನಿಗದಿತ ಕಾಲಾವಧಿಯೊಳಗೆ ಚುನಾವಣೆ ಜರುಗಿಸುವಂತೆ ಸೂಚಿಸಿತ್ತು. ಆದರೆ ಚುನಾವಣೆ ನಡೆಯಲೇ ಇಲ್ಲ.ಇದನ್ನು ಸಂಘದ ಸದಸ್ಯರಾದ ರಾಯಪ್ಪ ಪುಡಕಲಕಟ್ಟಿ ಮತ್ತು ಮಲ್ಲಪ್ಪ ಪುಡಕಲಕಟ್ಟಿ ಅವರು ಪ್ರಶ್ನಿಸಿ, ಹೈಕೋರ್ಟ್ ಆದೇಶ ಪಾಲನೆ ಮಾಡದೇ ಇರುವವರ ವಿರುದ್ಧ ನ್ಯಾಯಾಂಗ ನಿಂದನಾ ಅರ್ಜಿ ಸಲ್ಲಿಸಿ, ಆಡಳಿತಾಧಿಕಾರಿ ನೇಮಿಸಲು ಮನವಿ ಮಾಡಿಕೊಂಡಿದ್ದರು.

ಈ ಎಲ್ಲ ಅಂಶಗಳನ್ನು ಪರಿಶೀಲಿಸಿದ ಹೈಕೋರ್ಟ್ ಸಂಘದ ಸದಸ್ಯರ ಹಿತಾಸಕ್ತಿಯಿಂದ, ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಮತ್ತು ಸಂಘದ ಹಿತದೃಷ್ಟಿಯಿಂದ ಚುನಾವಣೆ ನಡೆಸಿ, ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರ ಮಾಡಲು ಆಡಳಿತಾಧಿಕಾರಿಯನ್ನು ನೇಮಿಸಿದೆ.

ವಿನಯ್ ಮತ್ತು ಜೋಶಿ ತೆರೆಮರೆ ಗುದ್ದಾಟ
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಧಿಕಾರಕ್ಕಾಗಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಬೆಂಬಲಿಗರ ಮಧ್ಯೆ ಕಳೆದ ಮೂರ್‍ನಾಲ್ಕು ವರ್ಷಗಳಿಂದಲೂ ತೆರೆಮರೆಯಲ್ಲೇ ತಿಕ್ಕಾಟವಿತ್ತು. ಆದರೆ ನಂತರ ಸಚಿವ ಜೋಶಿ ಬೆಂಬಲಿಗರಾದ ಈರೇಶ ಅಂಚಟಗೇರಿ ಅವರು ಮಹಾಸಭೆ ಅಧ್ಯಕ್ಷರಾಗಿದ್ದರು. ಇದೀಗ ಸರ್ಕಾರ ಆಡಳಿತಾಧಿಕಾರಿ ನೇಮಿಸಿ ಚುನಾವಣೆಗೆ ಸೂಚಿಸಿದೆ. ಈಗ ಮುಂದೆ ನಡೆಯುವ ಚುನಾವಣೆಯಲ್ಲಿ ಯಾರ ಮೇಲುಗೈ ಎಂಬುದನ್ನು ಕಾದು ನೋಡಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.