Assembly;ವಿಧಾನಸೌಧದಲ್ಲಿ ಇನ್ನು ಶಾಸಕರ ಮೇಲೆ ಕಣ್ಣಿಡಲಿರುವ AI ಕೆಮರಾಗಳು

ಶಾಸಕರ ಹಾಜರಾತಿ ಸುಧಾರಿಸುವ ಪ್ರಯತ್ನದ ಭಾಗ...ಇಂದು ಮೊದಲು ಬಂದವರು ಯಾರು?

Team Udayavani, Jul 15, 2024, 6:38 PM IST

vidhana-soudha

ಬೆಂಗಳೂರು: ಸೋಮವಾರ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭಗೊಂಡಿದ್ದು ವಿಶೇಷವಾಗಿ ಮುಖ ಗುರುತಿಸುವಿಕೆ ತಂತ್ರಜ್ಞಾನದೊಂದಿಗೆ ಕೃತಕ ಬುದ್ಧಿಮತ್ತೆ-ಸಕ್ರಿಯಗೊಳಿಸಿದ(Artificial Intelligence) ಕೆಮರಾಗಳನ್ನು ಅಳವಡಿಲಾಗಿದೆ. ಇದು ಸದಸ್ಯರ ಆಗಮನ ಮತ್ತು ನಿರ್ಗಮನ ಸಮಯ ಮತ್ತು ಸದನದಲ್ಲಿ ಅವರು ಇರುವ ಅವಧಿಯನ್ನು ದಾಖಲಿಸುತ್ತದೆ.

ಕೆಜಿಎಫ್ ನ ಕಾಂಗ್ರೆಸ್ ಶಾಸಕಿ ರೂಪಕಲಾ ಶಶಿಧರ್ ಅವರು ಹೊಸ ವ್ಯವಸ್ಥೆ ಜಾರಿಗೆ ಬರುತ್ತಿದ್ದಂತೆ ಇಂದು ಆರಂಭವಾದ ಮಳೆಗಾಲದ ಅಧಿವೇಶನಕ್ಕೆ ವಿಧಾನಸಭೆಗೆ ಆಗಮಿಸಿದ ಮೊದಲ ಶಾಸಕಿಯಾಗಿ ಕೆಮರಾದಲ್ಲಿ ದಾಖಲಾಗಿದ್ದಾರೆ. ತಿಪಟೂರಿನ ಕಾಂಗ್ರೆಸ್‌ ಶಾಸಕ ಷಡಕ್ಷರಿ ನಿರ್ಗಮಿಸಿದ ಮೊದಲ ಶಾಸಕರಾಗಿದ್ದಾರೆ.

ಸ್ಪೀಕರ್ ಯು.ಟಿ. ಖಾದರ್ ಅವರು, ಕೋರಂ ಗಂಟೆ ಬಾರಿಸುವ ಮುನ್ನವೇ ವಿಧಾನಸಭೆಗೆ ಬರುವ ಶಾಸಕರನ್ನು ಗುರುತಿಸಿ ಅವರ ಹೆಸರನ್ನು ಹೇಳಿ ಶ್ಲಾಘಿಸುವ ಪರಿಪಾಠ ರೂಢಿಸಿಕೊಂಡಿದ್ದಾರೆ.

“ಕೆಲವು ಹಿರಿಯ ಸದಸ್ಯರಾದ ಆರಗ ಜ್ಞಾನೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಕೆಲವು ಹಿರಿಯ ಸಚಿವರು, ಕೆಲವು ಶಾಸಕರು ಸ್ವಲ್ಪ ತಡವಾಗಿ ಬಂದರೂ, ಸಂಜೆ ಆರು ಅಥವಾ ಎಂಟರವರೆಗೆ ಕಲಾಪದಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಆದರೆ ಯಾರೂ ಅದನ್ನು ಗಮನಿಸಲಿಲ್ಲ.ಇದರಿಂದ ಅನ್ಯಾಯವಾಗಿದೆ’ ಎಂದು ಸ್ಪೀಕರ್ ಹೇಳಿದರು.

“ನಾವು ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೆಮರಾಗಳನ್ನು ಅಳವಡಿಸಿದ್ದೇವೆ. ಒಬ್ಬ ಸದಸ್ಯರು ಯಾವ ಸಮಯದಲ್ಲಿ ಬರುತ್ತಾರೆ/ ಹೋಗುತ್ತಾರೆ ಮತ್ತು ಅವರು ಎಷ್ಟು ಸಮಯದವರೆಗೆ ಅಸೆಂಬ್ಲಿಯಲ್ಲಿ ಹಾಜರಿದ್ದರು ಎನ್ನುವುದನ್ನು ಅದು ಗಮನಿಸುತ್ತದೆ. ದಿನದ ಅಂತ್ಯದ ವೇಳೆಗೆ ವಿಧಾನಸಭೆ ಕಾರ್ಯದರ್ಶಿ ವ್ಯವಸ್ಥೆಗೆ ಈ ಬಗ್ಗೆ ಡೇಟಾ ಬರುತ್ತದೆ” ಎಂದು ತಿಳಿಸಿದರು.

ಅಧಿಕಾರಿಗಳ ಪ್ರಕಾರ, ಈ ಉಪಕ್ರಮ ಶಾಸಕರ ಹಾಜರಾತಿ ಮತ್ತು ಅಧಿವೇಶನದಲ್ಲಿ ಅವರ ಭಾಗವಹಿಸುವಿಕೆಯನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿದೆ.

ವಿಧಾನಸೌಧಕ್ಕೆ ಹೊಸ ರೂಪ ನೀಡುವ ಉದ್ದೇಶದಿಂದ, ವಿಧಾನಸೌಧದ ಕಾರ್ಯದರ್ಶಿ, ವಿಧಾನಸೌಧದ ಪಶ್ಚಿಮ ದ್ವಾರದ ಗೇಟ್‌ಗಳನ್ನು ಮೊದಲ ಹಂತದಲ್ಲಿ ನವೀಕರಿಸಲಾಗಿದೆ, ಕಬ್ಬಿಣದ ಗ್ರಿಲ್ಡ್ ಗೇಟ್‌ಗಳನ್ನು ತೆಗೆದು ಕೆತ್ತನೆಯ ದೊಡ್ಡ ರೋಸ್‌ವುಡ್ ಬಾಗಿಲಿನಿಂದ ಬದಲಾಯಿಸಲಾಗಿದೆ. ಇಂದು(ಸೋಮವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನದ ಪೀಠಿಕೆ ಇರುವ ಫಲಕದೊಂದಿಗೆ ಉದ್ಘಾಟಿಸಿದರು.

ಸಭಾಧ್ಯಕ್ಷರು ಮಾತನಾಡಿ, ‘ನಮ್ಮ ವಿಧಾನಸೌಧ ಕಟ್ಟಡಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗೌರವವಿದೆ. ವಿಧಾನಸೌಧಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ನಿಯೋಗಗಳು ಮತ್ತು ಪ್ರವಾಸಿಗರು ಬರುತ್ತಾರೆ. ಅದನ್ನು ಒಳಗಿನಿಂದ ಮತ್ತು ಹೊರಗಿಂದ ಉತ್ತಮ ಮತ್ತು ಗೌರವಯುತವಾಗಿ ಕಾಣುವಂತೆ ಮಾಡುವುದು ನಮ್ಮ ಕರ್ತವ್ಯ. ಇದು ಮೊದಲ ಹಂತವಾಗಿದೆ, ಹೆಚ್ಚಿನ ಕೆಲಸವನ್ನು ಮಾಡಬೇಕಾಗಿದೆ, ನಾನು ಸದಸ್ಯರ ಸಲಹೆಗಳನ್ನು ಕೇಳುತ್ತೇನೆ’ ಎಂದರು. ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಇತರ ಶಾಸಕರು ಸಭಾಧ್ಯಕ್ಷರನ್ನು ಶ್ಲಾಘಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.