BJP ನಾಯಕರೆಲ್ಲರೂ ಸತ್ಯ ಹರಿಶ್ಚಂದ್ರರಾ: ಶೆಟ್ಟರ್
Team Udayavani, Aug 15, 2023, 11:55 PM IST
ಹುಬ್ಬಳ್ಳಿ: ರಾಜ್ಯದ ಮಾಜಿ ಸಚಿವರಾದ ಸಿ.ಟಿ. ರವಿ, ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸತ್ಯ ಹರಿಶ್ಚಂದ್ರರಾ? ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಅವರಿಗೆ ಇಲ್ಲವಾಗಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಬಹಿರಂಗ ಭ್ರಷ್ಟಾಚಾರದಿಂದ ಜುಗುಪ್ಸೆಗೊಂಡು ಜನರು ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದಾರೆ ಎಂದರು.
ಅಡುಗೆ ಇದ್ದ ಕಡೆ ಜಗದೀಶ ಶೆಟ್ಟರ ಹೋಗುತ್ತಾರೆ ಎಂಬ ಮಾಜಿ ಡಿಸಿಎಂ ಆರ್.ಅಶೋಕ ಹೇಳಿಕೆಗೆತಿರುಗೇಟು ನೀಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾದಾಗ ಸಚಿವ ಸ್ಥಾನ ನಿರಾಕರಿಸಿ ಎರಡು ವರ್ಷ ಯಾವ ಅಧಿಕಾರ ಇಲ್ಲದೆಯೇ ಮುಂದುವರಿದ ತಮಗೆ ಅಧಿಕಾರ ದಾಹ ಇದ್ದಿದ್ದರೆ ಸಚಿವ ರಾಗಲು ಸಮಸ್ಯೆ ಇರಲಿಲ್ಲ. ಶೆಟ್ಟರ್ಗೆ ಏನು ಅನ್ಯಾಯ ಮಾಡಿದರೂ ಮಾತನಾಡದೆ ಮನೆಯಲ್ಲಿಯೇ ಇರುತ್ತಾರೆ ಎಂದುಕೊಂಡಿದ್ದ ಬಿಜೆಪಿ ನಾಯಕರಿಗೆ ನಾನು ಕಾಂಗ್ರೆಸ್ ಸೇರಿದ್ದು, ಅದು ವಿಧಾನಸಭೆ ಚುನಾವಣೆಯಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿ ಬಿಜೆಪಿಗೆ ಹೀನಾಯ ಸೋಲು ಉಂಟಾಗಿರುವುದನ್ನು ಇಂದಿಗೂ ಸಹಿಸಿಕೊಳ್ಳಲಾಗುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.